ನಟಿ ಮಾನ್ವಿತಾ 
ಸಿನಿಮಾ ಸುದ್ದಿ

ಮಾನ್ವಿತಾಗೆ ಸಿನೆಮಾಗಳ ಸುರಿಮಳೆ

ಕೆಂಡಸಂಪಿಗೆ ಹುಡುಗಿಗೆ ವರ್ಷ ೨೦೧೭ ಫಲಪ್ರದವಾಗಿತ್ತು. ಸೂರಿಯವರ 'ಟಗರು' ಸಿನೆಮಾದ ಚಿತ್ರೀಕರಣದಲ್ಲಿ ಭಾಗಿಯಾಗಿರುವ ನಟಿ ಮಾನ್ವಿತಾ ಈಗ ನವೀನ್ ರೆಡ್ಡಿ ನಿರ್ದೇಶನದ 'ರಿಲ್ಯಾಕ್ಸ್ ಸತ್ಯ'

ಬೆಂಗಳೂರು: ಕೆಂಡಸಂಪಿಗೆ ಹುಡುಗಿಗೆ ವರ್ಷ ೨೦೧೭ ಫಲಪ್ರದವಾಗಿತ್ತು. ಸೂರಿಯವರ 'ಟಗರು' ಸಿನೆಮಾದ ಚಿತ್ರೀಕರಣದಲ್ಲಿ ಭಾಗಿಯಾಗಿರುವ ನಟಿ ಮಾನ್ವಿತಾ ಹರೀಶ್ ಈಗ ನವೀನ್ ರೆಡ್ಡಿ ನಿರ್ದೇಶನದ 'ರಿಲ್ಯಾಕ್ಸ್ ಸತ್ಯ' ಸಿನೆಮಾದಲ್ಲಿ ಕೂಡ ನಟಿಸುತ್ತಿದ್ದು ಮತ್ತೊಂದು ದೊಡ್ಡ ಯೋಜನೆಯನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದಾರೆ. 
ಆರ್ ಚಂದ್ರು ಅವರ 'ಕನಕ' ಸಿನೆಮಾಗೆ ಮಾನ್ವಿತಾ ಆಯ್ಕೆಯಾಗಿದ್ದಾರೆ. ಇದರಲ್ಲಿ ಅವರು ದುನಿಯಾ ವಿಜಯ್ ಎದುರು ನಟಿಸಲಿದ್ದಾರೆ. ಇದನ್ನು ಧೃಢೀಕರಿಸುವ ನಟಿ "ವಿಜಯ್ ಅವರಿಗೆ ಒರಟ ಮತ್ತು ಮುಗ್ಧತೆಯ ನೋಟವಿದೆ. ಇದು ಎಲ್ಲಾ ಹಿರೊಗಳಿಗೂ ಇರುವುದಿಲ್ಲ. ಅಲ್ಲದೆ ನನಗೆ ಸತ್ಯ ಹೆಗಡೆ ಅವರ ಜೊತೆಗೆ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ನಾನು ಅವರನ್ನು ಕನ್ನಡ ಚಿತ್ರರಂಗದ ಅತ್ಯದ್ಭುತ ಸಿನೆಮ್ಯಾಟೋಗ್ರಾಫರ್ ಗಳಲ್ಲಿ ಒಬ್ಬರು ಎಂದು ನಂಬುತ್ತೇನೆ. 'ಕೆಂಡಸಂಪಿಗೆ' ಯಸ್ಸಿಗೆ ಅವರು ಕೂಡ ಒಬ್ಬ ಕಾರಣಕರ್ತರು" ಎನ್ನುತ್ತಾರೆ ನಟಿ. 
ಒಬ್ಬ ನಾಯಕನಟಿಯನ್ನು ಅಂತಿಮಗೊಳಿಸಿರುವ ನಿರ್ದೇಶಕ ಚಂದ್ರು ಈಗ 'ಕನಕ' ಚಿತ್ರೀಕರಣಕ್ಕೆ ಸಜ್ಜಾಗಿದ್ದಾರೆ. ಮೊದಲಾರ್ಧ ಚಿತ್ರೀಕರಣ ಸಂಪೂರ್ಣಗೊಂಡ ಮೇಲೆ ಮತ್ತೊಬ್ಬ ಹೀರೋಯಿನ್ ಹೆಸರನ್ನು ನಿರ್ದೇಶಕ ಧೃಢೀಕರಿಸಲಿದ್ದಾರಂತೆ.  
'ಕನಕ'ದಲ್ಲಿ ವಿಜಯ್ ಆಟೋ ಚಾಲಕನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ನವೀನ್ ಸಜ್ಜು ಸಂಗೀತ ನೀಡಲಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT