ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ನಟ ಚೇತನ್ ಚಂದ್ರಗೆ ಕೂಡಿ ಬಂದ ಕಂಕಣ ಭಾಗ್ಯ; ಏಪ್ರಿಲ್ ನಲ್ಲಿ ಮದುವೆ!

ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಅವರಿಗೆ ಕಂಕಣ ಭಾಗ್ಯ ಕೂಡಿ ಬಂದಿದ್ದು, ಇದೇ ಏಪ್ರಿಲ್ 17ರಂದು ಅವರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

ಬೆಂಗಳೂರು: ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಅವರಿಗೆ ಕಂಕಣ ಭಾಗ್ಯ ಕೂಡಿ ಬಂದಿದ್ದು, ಇದೇ ಏಪ್ರಿಲ್ 17ರಂದು ಅವರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

ತಮ್ಮ ಬಹುಕಾಲದ ಗೆಳತಿ ಸಾಗರ ಮೂಲದ ರಚನಾ ಹೆಗಡೆ ಅವರನ್ನು ಚೇತನ್ ಚಂದ್ರ ವಿವಾಹವಾಗುತ್ತಿದ್ದು, ಯುವ ಜೋಡಿಯ ಸುದೀರ್ಘ ಪ್ರೀತಿಗೆ ಎರಡೂ ಕುಟುಂಬಸ್ಥರು ಒಪ್ಪಿಗೆ ನೀಡಿದ್ದಾರೆ. ಇದೇ ಏಪ್ರಿಲ್ 17ರಂದು ನಟ ಚೇತನ್ ಚಂದ್ರ ಅವರ ವಿವಾಹ ಕಾರ್ಯಕ್ರಮ ಗುರು-ಹಿರಿಯ ಸಮ್ಮುಖದಲ್ಲಿ ನೆರವೇರಲಿದ್ದು, ಸಾಗರದ ಭದ್ರಕಾಳಿ ಕಲ್ಯಾಣ ಮಂಟಪದಲ್ಲಿ ಶಾಸ್ತ್ರೋಕ್ತವಾಗಿ ನೆರವೇರಲಿದೆ.

ಕಳೆದ ಎರಡು ವರ್ಷಗಳಿಂದಲೂ ನಟ ಚೇತನ್ ಹಾಗೂ ರಚನಾ ಅವರು ಪ್ರೀತಿಸುತ್ತಿದ್ದರು. ಇದೀಗ ಅವರ ಪ್ರೀತಿಗೆ ಕುಟುಂಬಸ್ಥರ ಗ್ರೀನ್ ಸಿಗ್ನಲ್ ದೊರೆತಿದೆ. ಪಿಯುಸಿ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ನಟ ಚೇತನ್ ಚಂದ್ರ ಬಳಿಕ ನಟ ಯಶ್ ರೊಂದಿಗೆ ರಾಜಧಾನಿ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಬಳಿಕ ಹುಚ್ಚುಡುಗ್ರು, ಕುಂಭರಾಶಿ, ಪ್ಲಸ್, ಜಾತ್ರೆ, ಪ್ರೇಮಿಸಂ ಚಿತ್ರಗಳಲ್ಲಿ ನಾಯಕರಾಗಿ ಅಭಿನಯಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT