ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ನಟ ಚೇತನ್ ಚಂದ್ರಗೆ ಕೂಡಿ ಬಂದ ಕಂಕಣ ಭಾಗ್ಯ; ಏಪ್ರಿಲ್ ನಲ್ಲಿ ಮದುವೆ!

ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಅವರಿಗೆ ಕಂಕಣ ಭಾಗ್ಯ ಕೂಡಿ ಬಂದಿದ್ದು, ಇದೇ ಏಪ್ರಿಲ್ 17ರಂದು ಅವರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

ಬೆಂಗಳೂರು: ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಅವರಿಗೆ ಕಂಕಣ ಭಾಗ್ಯ ಕೂಡಿ ಬಂದಿದ್ದು, ಇದೇ ಏಪ್ರಿಲ್ 17ರಂದು ಅವರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

ತಮ್ಮ ಬಹುಕಾಲದ ಗೆಳತಿ ಸಾಗರ ಮೂಲದ ರಚನಾ ಹೆಗಡೆ ಅವರನ್ನು ಚೇತನ್ ಚಂದ್ರ ವಿವಾಹವಾಗುತ್ತಿದ್ದು, ಯುವ ಜೋಡಿಯ ಸುದೀರ್ಘ ಪ್ರೀತಿಗೆ ಎರಡೂ ಕುಟುಂಬಸ್ಥರು ಒಪ್ಪಿಗೆ ನೀಡಿದ್ದಾರೆ. ಇದೇ ಏಪ್ರಿಲ್ 17ರಂದು ನಟ ಚೇತನ್ ಚಂದ್ರ ಅವರ ವಿವಾಹ ಕಾರ್ಯಕ್ರಮ ಗುರು-ಹಿರಿಯ ಸಮ್ಮುಖದಲ್ಲಿ ನೆರವೇರಲಿದ್ದು, ಸಾಗರದ ಭದ್ರಕಾಳಿ ಕಲ್ಯಾಣ ಮಂಟಪದಲ್ಲಿ ಶಾಸ್ತ್ರೋಕ್ತವಾಗಿ ನೆರವೇರಲಿದೆ.

ಕಳೆದ ಎರಡು ವರ್ಷಗಳಿಂದಲೂ ನಟ ಚೇತನ್ ಹಾಗೂ ರಚನಾ ಅವರು ಪ್ರೀತಿಸುತ್ತಿದ್ದರು. ಇದೀಗ ಅವರ ಪ್ರೀತಿಗೆ ಕುಟುಂಬಸ್ಥರ ಗ್ರೀನ್ ಸಿಗ್ನಲ್ ದೊರೆತಿದೆ. ಪಿಯುಸಿ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ನಟ ಚೇತನ್ ಚಂದ್ರ ಬಳಿಕ ನಟ ಯಶ್ ರೊಂದಿಗೆ ರಾಜಧಾನಿ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಬಳಿಕ ಹುಚ್ಚುಡುಗ್ರು, ಕುಂಭರಾಶಿ, ಪ್ಲಸ್, ಜಾತ್ರೆ, ಪ್ರೇಮಿಸಂ ಚಿತ್ರಗಳಲ್ಲಿ ನಾಯಕರಾಗಿ ಅಭಿನಯಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT