ಎಸ್ ಪಿ ಬಾಲ ಸುಬ್ರಮಣ್ಯಂ ಮತ್ತು ಇಳಯರಾಜ 
ಸಿನಿಮಾ ಸುದ್ದಿ

ಗಾಯಕ ಎಸ್ ಪಿ ಬಿಗೆ ಲೀಗಲ್ ನೋಟಿಸ್ ನೀಡಿದ ಸಂಗೀತ ನಿರ್ದೇಶಕ ಇಳಯರಾಜ

: ಹಿನ್ನೆಲೆ ಗಾಯಕ ಎಸ್ .ಪಿ ಬಾಲಸುಬ್ರಮಣ್ಯಂ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಅವರ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್...

ಚೆನ್ನೈ: ಹಿನ್ನೆಲೆ ಗಾಯಕ ಎಸ್ .ಪಿ ಬಾಲಸುಬ್ರಮಣ್ಯಂ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಅವರ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ ನೀಡಿದ್ದಾರೆ.

ವಿವಿಧೆಡೆ ನಡೆಯುವ ಸಂಗೀತ ಕಾರ್ಯಕ್ರಮಗಳಲ್ಲಿ ತಾವು ಸಂಗೀತ ಸಂಯೋಜಿಸಿರುವ ಹಾಡುಗಳನ್ನು ಹಾಡದಂತೆ ಸಂಗೀತ ನಿರ್ದೇಶಕ ಇಳಯರಾಜ ಎಸ್ .ಪಿ ಬಾಲಸುಬ್ರಮಣ್ಯಂ, ಶ್ರೀಮತಿ ಚೈತ್ರ ಮತ್ತು ಚರಣ್ ಅವರಿಗೆ ಲೀಗಲ್ ನೋಟಿಸ್ ನೀಡಿರುವುದಾಗಿ ಪೋಸ್ಟ್ ಹಾಕಿದ್ದಾರೆ.

ತಾವು ಸಂಗೀತ ಸಂಯೋಜಿಸಿರುವ ಗೀತೆಗಳನ್ನು ತಮ್ಮ ಅನುಮತಿಯಿಲ್ಲದೇ ಯಾವುದೇ ವೇದಿಕೆಗಳಲ್ಲಿ ಹಾಡುವಂತಿಲ್ಲ, ಒಂದು ವೇಳೆ ಹಾಡಿದರೇ, ಅದಕ್ಕೆ ದಂಡ ತೆರಬೇಕಾಗುತ್ತದೆ ಎಂದು ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ.

ನನ್ನ ಮಗ ಚರಣ್ ಎಸ್ ಪಿಬಿ50 ಎಂಬ ಹೆಸರಿನಲ್ಲಿ ವರ್ಲ್ಡ್ ಟೂರ್ ಆಯೋಜಿಸಿದ್ದ, ರಷ್ಯಾ, ಲಂಕಾ, ಮಲೇಶಿಯಾ , ಸಿಂಗಾಪುರ್ ಮತ್ತು ದುಬೈ ಗಳಲ್ಲಿ ಈಗಾಗಲೇ ಸಂಗೀತ ಪ್ರದರ್ಶನ ನೀಡಿದ್ದೇವೆ. ಆಗಸ್ಟ್ ವಲ್ಲಿ ಟೊರಾಂಟೋದಲ್ಲಿ ಸಂಗೀತ ಕಾರ್ಯಕ್ರಮ ನೀಡಬೇಕಿತ್ತು. ಆದರೆ ಕಾರ್ಯಕ್ರಮವನ್ನು ರದ್ದುಗೊಳಿಸುವುದಿಲ್ಲ, ನಮ್ಮ ಸಂಗೀತ ಪಯಣ ಮುಂದುವರಿಯುತ್ತದೆ. ಬೇರೆ ಸಂಗೀತ ನಿರ್ದೇಶಕರ ಗೀತೆಗಳನ್ನು ಹಾಡುವುದಾಗಿ ಎಸ್ ಪಿಬಿ ಹೇಳಿದ್ದಾರೆ.

ತಮ್ಮ ಜೀವಮಾನದ ಅವಧಿಯಲ್ಲಿ ಇದುವರೆಗೂ ಎಸ್ ಪಿಬಿ  ಸುಮಾರು 40 ಸಾವಿರ ಗೀತೆಗಳನ್ನು ಹಾಡಿದ್ದಾರೆ. ಇವರಿಗೆ 2011 ರಲ್ಲಿ ಪ್ರತಿಷ್ಠಿತ ಪದ್ಮಭೂಷಣ ಮತ್ತು ರಾಷ್ಚ್ರ ಪ್ರಶಸ್ತಿ ಸಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT