ಬಾಹುಬಲಿ-2 
ಸಿನಿಮಾ ಸುದ್ದಿ

ಬಿಡುಗಡೆಗೂ ಮುನ್ನವೇ ಕಂಟಕ: ಬಾಹುಬಲಿ-2 ವಿರುದ್ಧ ರಾಜ್ಯದಲ್ಲಿ ಪ್ರತಿಭಟನೆ

ಬಿಡುಗಡೆಗೂ ಮುನ್ನವೇ ಬಹುನಿರೀಕ್ಷಿತ ಚಿತ್ರ ಬಾಹುಬಲಿ-2ಗೆ ಕಂಟಕ ಎದುರಾಗಿದೆ. ರಾಜ್ಯದ ಹಲವೆಡೆ ಬಾಹುಬಲಿ ಚಿತ್ರ ಬಿಡುಗಡೆಗೆ ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿವೆ...

ಮೈಸೂರು: ಬಿಡುಗಡೆಗೂ ಮುನ್ನವೇ ಬಹುನಿರೀಕ್ಷಿತ ಚಿತ್ರ ಬಾಹುಬಲಿ-2ಗೆ ಕಂಟಕ ಎದುರಾಗಿದೆ. ರಾಜ್ಯದ ಹಲವೆಡೆ ಬಾಹುಬಲಿ ಚಿತ್ರ ಬಿಡುಗಡೆಗೆ ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿವೆ. 
ಬಾಹುಬಲಿ-2 ಚಿತ್ರ ವಿರೋಧಕ್ಕೆ ಚಿತ್ರದಲ್ಲಿ ನಟಿಸಿರುವ 'ಕಟ್ಟಪ್ಪ' ಸತ್ಯರಾಜ್ ಅವರೇ ಕಾರಣ ಎಂದು ಹೇಳಲಾಗುತ್ತಿದೆ. ಈ ಹಿಂದೆ ಕಾವೇರಿ ವಿವಾದ ಸಂಬಂಧ ಈ ಹಿಂದೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದರು. ಈ ಹಿನ್ನಲೆಯಲ್ಲಿ ಕನ್ನಡ ಪರ ಸಂಘಟನೆಗಳು ಚಿತ್ರ ಬಿಡುಗಡೆಗೆ ವಿರೋಧಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ, ಹೇಳಿಕೆ ಸಂಬಂಧ ಸತ್ಯರಾಜ್ ಅವರು ಕೂಡಲೇ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ. 
ಬಾಹುಬಲಿ ಚಿತ್ರದಲ್ಲಿ ಕಟ್ಟಪ್ಪ ಎಂಬ ಪಾತ್ರಧಾರಿಯಾಗಿ ಸತ್ಯರಾಜು ಅವುರ ಅಭಿನಯಿಸಿದ್ದಾರೆ. ಕನ್ನಡ ಹೋರಾಟಗಾರರು ಹಾಗೂ ಕಾವೇರಿ ನೀರಿನ ಬಗ್ಗೆ ಅಪಮಾನ ಮಾಡುವ ಹಾಗೆ ಈ ಹಿಂದೆ ಸತ್ಯರಾಜು ಅವರು ಹೇಳಿಕೆ ನೀಡಿದ್ದರು. ಈ ಮೂಲಕ ಕನ್ನಡಿಗರ ಸಹನೆಯನ್ನು ಕೆಣಕಿದ್ದಾರೆ. ಇಂತಹ ಚಿತ್ರವನ್ನು ರಾಜ್ಯಾದ್ಯಂತ ಯಾವ ಚಿತ್ರಮಂದಿಗಳಲ್ಲೂ ಪ್ರದರ್ಶನ ಮಾಡಬಾರದು ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT