ನಟ ನಿಖಿಲ್ ಕುಮಾರ್ 
ಸಿನಿಮಾ ಸುದ್ದಿ

ಚೇತನ್ ನಿರ್ದೇಶನದಲ್ಲಿ 'ಜಾಗ್ವಾರ್' ನಿಖಿಲ್ ಎರಡನೇ ಸಿನೆಮಾ

ಚೇತನ್ ಕುಮಾರ್ ನಿರ್ದೇಶನದಲ್ಲಿ ನಟ ನಿಖಿಲ್ ಕುಮಾರ್ ತಮ್ಮ ಎರಡನೇ ಸಿನೆಮಾದಲ್ಲಿ ನಟಿಸಲು ಮುಂದಾಗಿದ್ದಾರೆ. ಚನ್ನಂಬಿಕ ಪ್ರೊಡಕ್ಷನ್ಸ್ ಬ್ಯಾನರ್ ಅಡಿ ಈ ಸಿನೆಮಾ ನಿರ್ಮಾಣಗೊಳ್ಳಲಿದ್ದು,

ಬೆಂಗಳೂರು: ಚೇತನ್ ಕುಮಾರ್ ನಿರ್ದೇಶನದಲ್ಲಿ ನಟ ನಿಖಿಲ್ ಕುಮಾರ್ ತಮ್ಮ ಎರಡನೇ ಸಿನೆಮಾದಲ್ಲಿ ನಟಿಸಲು ಮುಂದಾಗಿದ್ದಾರೆ. ಚನ್ನಂಬಿಕ ಪ್ರೊಡಕ್ಷನ್ಸ್ ಬ್ಯಾನರ್ ಅಡಿ ಈ ಸಿನೆಮಾ ನಿರ್ಮಾಣಗೊಳ್ಳಲಿದ್ದು, ಏಪ್ರಿಲ್ ೨ ರಂದು ಮುಹೂರ್ತ ನೆರವೇರಲಿದೆಯಂತೆ. ಅಂದೇ ಹೆಚ್ಚಿನ ವಿವರಗಳು ತಿಳಿಯಲಿವೆ. 
ತೆಲುಗು ಮತ್ತು ಕನ್ನಡ ಭಾಷೆಗಳಲ್ಲಿ ನಿರ್ಮಾಣವಾಗಿದ್ದ 'ಜಾಗ್ವಾರ್' ಸಿನೆಮಾ ಮೂಲಕ ಪಾದಾರ್ಪಣೆ ಮಾಡಿದ್ದ ನಿಖಿಲ್ ಕುಮಾರ್, ಎರಡನೇ ಚಿತ್ರದಲ್ಲಿ ಕನ್ನಡ ನಿರ್ದೇಶಕನ ಜೊತೆಗೆ ಕೆಲಸ ಮಾಡುವುದಾಗಿ ತಿಳಿಸಿದ್ದರು. ಈ ನಿಟ್ಟಿನಲ್ಲಿ ಹಲವು ಸ್ಕ್ರಿಪ್ಟ್ ಗಳನ್ನು ಓದಿದ ಮೇಲೆ ಈಗ ಚೇತನ್ ಅವರ ಕಥೆಯನ್ನು ಅಂತಿಮಗೊಳಿಸಿದ್ದಾರೆ. 
ಚಿತ್ರತಂಡದ ಸದಸ್ಯರೊಬ್ಬರು ತಿಳಿಸುವಂತೆ, ಇನ್ನು ಹೆಸರಿದ ಈ ಚಿತ್ರ ಕೂಡ ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ನಿರ್ಮಾಣಗೊಳ್ಳಲಿದೆಯಂತೆ. ಈಗ ತಂತ್ರಜ್ಞರ ತಂಡವನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸುವ ಅವರು "ಸದ್ಯಕ್ಕೆ ಸಂಗೀತಕ್ಕೆ ವಿ ಹರಿಕೃಷ ಮತ್ತು ಛಾಯಾಗ್ರಹಣಕ್ಕೆ ಶ್ರೀಶ ಕುಡುವಲ್ಲಿ ಅವರನ್ನು ಅಂತಿಮಗೊಳಿಸಲಾಗಿದೆ. ದೀಪು ಸಂಕಲನ, ಈ ಹರ್ಷ ನೃತ್ಯ ನಿರ್ದೇಶನ ಮತ್ತು ರವಿ ಸಂತೇಹೈಕ್ಳು ಕಲಾ ನಿರ್ದೇಶಕರಾಗಿ ಸೇರಲಿದ್ದಾರೆ" ಎಂದು ತಿಳಿಸುತ್ತಾರೆ. 
ಈಮಧ್ಯೆ ಹೊಸ ನಾಯಕನಟಿಯ ಆಯ್ಕೆಗಾಗಿ ಸಿನೆಮಾತಂಡ ಶೋಧದಲ್ಲಿದೆ. ಇದಕ್ಕಾಗಿ ಆಡಿಷನ್ ಕರೆದಿದ್ದು, ೬೦೦ ಅರ್ಜಿಗಳನ್ನು ಸ್ವೀಕರಿಸಿರುವುದಾಗಿ ಮೂಲಗಳು ತಿಳಿಸಿವೆ. "ಸಾಂಪ್ರದಾಯಿಕ ನೋಟವಿರುವ ಹುಡುಗಿಯ ಶೋಧದಲ್ಲಿದ್ದೇವೆ. ಕನ್ನಡ ಭಾಷೆಯನ್ನು ಬಲ್ಲ ನಟಿಯಾಗಿರಬೇಕು ಹಾಗು ಹೊಸಮುಖವನ್ನು ಆಯ್ಕೆ ಮಾಡಲಾಗುತ್ತದೆ" ಎಂದು ತಿಳಿಸುತ್ತವೆ ಮೂಲಗಳು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT