ನಟಿ ರೇಖಾ ಕೃಷ್ಣಪ್ಪ 
ಸಿನಿಮಾ ಸುದ್ದಿ

ನಾನು ಜೀವಂತವಾಗಿದ್ದೇನೆ, ಶೃಂಗೇರಿಯಲ್ಲಿದ್ದೇನೆ: ವದಂತಿಗಳಿಗೆ ತೆರೆ ಎಳೆದ ರೇಖಾ ಕೃಷ್ಣಪ್ಪ

ನಾನೂ ಜೀವಂತವಾಗಿದ್ದು, ಪ್ರಸ್ತುತ ಕುಟುಂಬ ಸದಸ್ಯರೊಂದಿಗೆ ಶೃಂಗೇರಿಯಲ್ಲಿದ್ದೇನೆಂದು ಹೇಳುವ ಮೂಲಕ ಇತ್ತೀಚೆಗಷ್ಟೇ ಹಬ್ಬಿದ್ದ ವಂದತಿಗಳಿಗೆ ನಟಿ ರೇಖಾ ಕೃಷ್ಣಪ್ಪ...

ಬೆಂಗಳೂರು: ನಾನೂ ಜೀವಂತವಾಗಿದ್ದು, ಪ್ರಸ್ತುತ ಕುಟುಂಬ ಸದಸ್ಯರೊಂದಿಗೆ ಶೃಂಗೇರಿಯಲ್ಲಿದ್ದೇನೆಂದು ಹೇಳುವ ಮೂಲಕ ಇತ್ತೀಚೆಗಷ್ಟೇ ಹಬ್ಬಿದ್ದ ವಂದತಿಗಳಿಗೆ ನಟಿ ರೇಖಾ ಕೃಷ್ಣಪ್ಪ ಅವರು ತೆರೆ ಎಳೆದಿದ್ದಾರೆ.
ಇಂದು ಬೆಳಿಗ್ಗೆ ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ್ದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಗೊಂದಲಗಳು ಸೃಷ್ಟಿಯಾಗಿದ್ದವು. ತಮಿಳುನಾಡಿನ ಮಾಧ್ಯಮಗಳು ರೂಪದರ್ಶಿ ರೇಖಾ ಸಿಂಧು ಅವರ ಭಾವಚಿತ್ರ ಹಾಕುವ ಬದಲು ನಟಿ ರೇಖಾ ಕೃಷ್ಣಪ್ಪ ಅವರ ಭಾವಚಿತ್ರಗಳನ್ನು ಹಾಕಿ ಮೃತಪಟ್ಟಿದ್ದಾರೆಂದು ವರದಿಗಳನ್ನು ಮಾಡಿದ್ದವು. ತಮಿಳಿನ ಗಾಯತ್ರಿ ಧಾರವಾಹಿಯಿಲ್ಲಿ ರೇಖಾ ಕೃಷ್ಣಪ್ಪ ಅವರು ನಟಿಸಿದ್ದ ಭಾವಚಿತ್ರಗಳನ್ನು ಹಾಕಿ ಗೊಂದಲವನ್ನು ಮೂಡಿಸಿದ್ದವು. 
ಈ ಕುರಿತ ಸುದ್ದಿಗಳು ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್ ಹಾಗೂ ವಾಟ್ಸ್ ಅಫ್ ಗಳಲ್ಲಿ ಹರಿದಾಡತೊಡಗಿದ್ದವು. 
ವದಂತಿಗಳು ಹರಡಿರುವ ಹಿನ್ನಲೆಯಲ್ಲಿ ಫೇಸ್ ಬುಕ್ ನಲ್ಲಿ ವಿಡಿಯೋ ಮೂಲಕ ಸ್ಪಷ್ಟನೆ ನೀಡಿರುವ ರೇಖಾ ಕೃಷ್ಣಪ್ಪ, ನಾನು ಜೀವಂತವಾಗಿಯೇ ಇದ್ದೇನೆ. ನಾನು ಚೆನ್ನಾಗಿದ್ದೇನೆ. ಪ್ರಸ್ತುತ ಶೃಂಗೇರಿಯ ಶಾರದಾ ಪೀಠ ದೇವಸ್ಥಾನದಲ್ಲಿದ್ದೇನೆ. ರೇಖಾ ಸಿಂಧು ಎಂಬ ಹೆಸರಿನ ಕಿರುತೆರೆ ನಟಿ ಸಾವನ್ನಪ್ಪಿದ ಬಳಿಕ ನನಗೆ ಸಾಕಷ್ಟು ಕರೆಗಳು ಬರುತ್ತಿವೆ ಎಂದು ಹೇಳಿಕೊಂಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT