ಶ್ರದ್ಧಾ ಶ್ರೀನಾಥ್-ಸತೀಶ್ ನೀನಾಸಂ 
ಸಿನಿಮಾ ಸುದ್ದಿ

ಶ್ರದ್ಧಾ ಮುಂದಿನ ಸಿನೆಮಾ ನಿರ್ದೇಶಿಸಲಿರುವ ನಂದೀಶ

ನಟಿ ಶ್ರದ್ಧಾ ಶ್ರೀನಾಥ್ ಸದ್ಯಕ್ಕೆ ಅವರ ಮೊದಲ ತೆಲುಗು ಸಿನೆಮಾ 'ಹೇ ಕೃಷ್ಣ ಮುಕುಂದ ಮುರಾರಿ' ಸೆಟ್ ನಲ್ಲಿ ಕಾರ್ಯನಿರತರಾಗಿದ್ದಾರೆ. ರವಿಕಾಂತ್ ನಿರ್ದೇಶನದ ಈ ಚಿತ್ರದಲ್ಲಿ ಅವರು ಚೊಚ್ಚಲ ನಟ ಸಿದ್ಧು

ಬೆಂಗಳೂರು: ನಟಿ ಶ್ರದ್ಧಾ ಶ್ರೀನಾಥ್ ಸದ್ಯಕ್ಕೆ ಅವರ ಮೊದಲ ತೆಲುಗು ಸಿನೆಮಾ 'ಹೇ ಕೃಷ್ಣ ಮುಕುಂದ ಮುರಾರಿ' ಸೆಟ್ ನಲ್ಲಿ ಕಾರ್ಯನಿರತರಾಗಿದ್ದಾರೆ. ರವಿಕಾಂತ್ ನಿರ್ದೇಶನದ ಈ ಚಿತ್ರದಲ್ಲಿ ಅವರು ಚೊಚ್ಚಲ ನಟ ಸಿದ್ಧು ಜೊನ್ನಲೆಗೆದ್ದ ಎದುರು ನಟಿಸುತ್ತಿದ್ದಾರೆ. "ಚಿತ್ರೀಕರಣ ಉತ್ತಮವಾಗಿ ಸಾಗುತ್ತಿದೆ. ಅತ್ಯುತ್ತಮ ತಂಡದೊಂದಿಗೆ ಕೆಲಸ ಮಾಡುತ್ತಿರುವುದಕ್ಕೆ ಸಂತಸವಾಗಿದೆ" ಎನ್ನುತ್ತಾರೆ ನಟಿ. 
'ಆಪರೇಷನ್ ಅಲಮೇಲಮ್ಮ' ನಂತರ ತಮ್ಮ ಮುಂದಿನ ಕನ್ನಡ ಸಿನೆಮಾವನ್ನು ಚೊಚ್ಚಲ ನಿರ್ದೇಶಕ ಕೆ ಎಸ್ ನಂದೀಶ ನಿರ್ದೇಶಿಸಲಿದ್ದಾರೆ ಎಂದು ಧೃಢೀಕರಿಸುತ್ತಾರೆ ನಟಿ. 'ಗೋಧ್ರಾ' ಎಂಬ ಶೀರ್ಷಿಕೆ ಹೊತ್ತಿರುವ ಈ ಸಿನೆಮಾದಲ್ಲಿ ಅವರು ಸತೀಶ್ ನೀನಾಸಂ ಎದುರು ನಟಿಸಲಿದ್ದಾರೆ. 
ಜಾಕಬ್ ವರ್ಗಿಸ್ ಜೊತೆಗೆ ೧೦ ವರ್ಷಗಳ ಕಾಲ ಸಹ ನಿರ್ದೇಶಕನಾಗಿ ದುಡಿದಿರುವ ನಂದೀಶ ಸ್ವತಂತ್ರ ನಿರ್ದೇಶನಕ್ಕೆ ಇಳಿದಿದ್ದಾರೆ. ಅವರು ಸದ್ಯಕ್ಕೆ ಜಾಕಬ್ ಅವರ 'ಚಂಬಲ್' ಸಿನೆಮಾದಲ್ಲಿ ತೊಡಗಿಸಿಕೊಂಡಿದ್ದಾರೆ. 
ನಂದೀಶ ಅವರನ್ನು ಎರಡು ವರ್ಷಗಳಿಂದ ಬಲ್ಲೆ ಎನ್ನುವ ಶ್ರದ್ಧಾ "ಅವರು ಶಾಂತ ಚಿತ್ತ ಮತ್ತು ಪ್ರಜ್ಞಾವಂತ. ಕಥೆ ಬಹಳ ಆಸಕ್ತಿದಾಯಕವಾಗಿದ್ದು, ೯೦ರ ದಶಕದ ರಾಮ್ ಗೋಪಾಲ್ ವರ್ಮಾ ಸಿನೆಮಾಗಳನ್ನು ನೆನಪಿಸುತ್ತದೆ. ಅಲ್ಲದೆ ಸತೀಶ್ ಜೊತೆ ನಟಿಸುತ್ತಿರುವುದು ಬೋನಸ್" ಎನ್ನುತ್ತಾರೆ. 
ಜೂನ್ ಅಂತ್ಯಕ್ಕೆ ಈ ಸಿನೆಮಾದ ಚಿತ್ರೀಕರಣ ಪ್ರಾರಂಭವಾಗಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel