ತೆಲುಗು ಚಿತ್ರರಂಗದ ಹಿರಿಯ ನಟ ಚಲಪತಿ ರಾವ್ 
ಸಿನಿಮಾ ಸುದ್ದಿ

ಮಹಿಳೆಯರ ಕುರಿತು ಅಶ್ಲೀಲ ಹೇಳಿಕೆ; ಹಿರಿಯ ನಟ ಚಲಪತಿ ರಾವ್ ವಿರುದ್ಧ ಪ್ರಕರಣ ದಾಖಲು

ಮಹಿಳೆಯರ ಕುರಿತು ಅಶ್ಲೀಲ ಹೇಳಿಕೆ ನೀಡಿದ ಆರೋಪದಡಿ ತೆಲುಗು ಚಿತ್ರರಂಗದ ಹಿರಿಯ ನಟ ಚಲಪತಿ ರಾವ್ ಅವರ ವಿರುದ್ಧ ಬುಧವಾರ ಪ್ರಕರಣ ದಾಖಲಾಗಿದೆ...

ನವದೆಹಲಿ: ಮಹಿಳೆಯರ ಕುರಿತು ಅಶ್ಲೀಲ ಹೇಳಿಕೆ ನೀಡಿದ ಆರೋಪದಡಿ ತೆಲುಗು ಚಿತ್ರರಂಗದ ಹಿರಿಯ ನಟ ಚಲಪತಿ ರಾವ್ ಅವರ ವಿರುದ್ಧ ಬುಧವಾರ ಪ್ರಕರಣ ದಾಖಲಾಗಿದೆ. 
ಮಹಿಳೆಯರ ಕುರಿತಂತೆ ಹಿರಿಯ ನಟ ನೀಡಿದ್ದ ಹೇಳಿಕೆ ಹಲವು ಟೀಕೆ ಹಾಗೂ ವಿರೋಧಗಳಿಗೆ ಕಾರಣವಾಗಿತ್ತು. ಈ ಹಿನ್ನಲೆಯಲ್ಲಿ ಸರೂರ್ ನಗರ ಪೊಲೀಸ್ ಠಾಣೆಯಲ್ಲಿ ಚಲಪತಿ ರಾವ್ ಅವರ ವಿರುದ್ಧ ಐಪಿಸಿ ಸೆಕ್ಷನ್ 354ಎ, 509 ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. 
ನಟ ನಾಗಾರ್ಜುನ ಅವರ ಪುತ್ರ ಅಕ್ಕಿನೇನಿ ನಾಗಚೈತನ್ಯ ನಾಯಕ ನಟನಾಗಿ ಅಭಿನಯಿಸಿರುವ "ರಾರಂಡೋಯ್ ವೇಡುಕ ಚೂದ್ದಾಂ" ತೆಲುಗು ಚಿತ್ರದ ಧ್ವನಿ ಸುರುಳಿ ಬಿಡುಗಡೆ ಸಮಾರಂಭವನ್ನು ಹೈದರಾಬಾದ್ ನಲ್ಲಿ ಆಯೋಜಿಸಲಾಗಿತ್ತು. ಚಿತ್ರದ ಟ್ರೇಲರ್ ನಲ್ಲಿ ಹುಡುಗಿಯರು ಮನಃಶಾಂತಿಗೆ ಹಾನಿಕರ ಎಂಬ ಶೀರ್ಷಿಕೆಯನ್ನು ನೀಡಲಾಗಿತ್ತು. ಸಮಾರಂಭದಲ್ಲಿ ನಿರಾಪಕಿಯೊಬ್ಬರು ಹಿರಿಯ ನಟ ಚಲಪತಿಯವರಿಗೆ ಪ್ರಶ್ನೆಯೊಂದನ್ನು ಕೇಳಿದರು. 
ನಿಜವಾಗಿಯೂ ಹುಡುಗಿಯರು ಮನಃಶಾತಿಗೆ ಹಾನಿಕಾರಕವೇ ? ಎಂದು ಕೇಳಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಚಲಪತಿಯವರು, ಹುಡುಗಿಯರು ಆರೋಗ್ಯಕ್ಕೆ ಹಾನಿಕಾರಕವೋ ಅಲ್ಲವೋ ಗೊತ್ತಿಲ್ಲ. ಆದರೆ, ಅವರು ಹಾಸಿಗೆಯಲ್ಲಿ ಬಹಳ ಉಪಯುಕ್ತ ಎಂದು ಹೇಳಿದ್ದರು. ಈ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. 
ಚಲಪತಿಯವರು ಈ ಹೇಳಿಕೆಗೆ ಮಹಿಳಾ ಸಂಘಟನೆಗಳಲ್ಲದೆ. ಚಿತ್ರರಂಗದ ವತಿಯಿಂದಲೂ ಸಾಕಷ್ಟು ವಿರೋಧಗಳು ವ್ಯಕ್ತವಾಗತೊಡಗಿದೆ. 
ಚಲಪತಿಯವರ ಹೇಳಿಕೆ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ನಾಗರ್ಜುನ ಅವರು, ಮಹಿಳೆಯರ ಬಗ್ಗೆ ನನಗೆ ಅಪಾರ ಗೌರವವಿದೆ. ಚಲಪತಿ ರಾವ್ ಅವರ ಹೇಳಿಕೆಗೆ ನನ್ನ ವಿರೋಧವಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT