ನಟಿ ಸಂಗೀತ ಭಟ್ 
ಸಿನಿಮಾ ಸುದ್ದಿ

ಕೆಎಂ ಚೈತನ್ಯ ನಿರ್ದೇಶನದ ಚಿತ್ರಕ್ಕೆ ಸಂಗೀತ ಭಟ್ ಸೇರ್ಪಡೆ

'ಎರಡನೇ ಸಲ' ಸಿನೆಮಾದ ನಟನೆಗಾಗಿ ಚಿತ್ರರಂಗದ ಗಮನ ಸೆಳೆದಿದ್ದ ನಟಿ ಸಂಗೀತ ಭಟ್ ಈಗ 'ದಯವಿಟ್ಟು ಗಮನಿಸಿ' ಸಿನೆಮಾದ ವಿಡಿಯೋ ಹಾಡಿನಲ್ಲಿ ಕೂಡ ಕಾಣಿಸಿಕೊಂಡು ತಮ್ಮ ಪ್ರತಿಭೆಯನ್ನು

ಬೆಂಗಳೂರು: 'ಎರಡನೇ ಸಲ' ಸಿನೆಮಾದ ನಟನೆಗಾಗಿ ಚಿತ್ರರಂಗದ ಗಮನ ಸೆಳೆದಿದ್ದ ನಟಿ ಸಂಗೀತ ಭಟ್ ಈಗ 'ದಯವಿಟ್ಟು ಗಮನಿಸಿ' ಸಿನೆಮಾದ ವಿಡಿಯೋ ಹಾಡಿನಲ್ಲಿ ಕೂಡ ಕಾಣಿಸಿಕೊಂಡು ತಮ್ಮ ಪ್ರತಿಭೆಯನ್ನು ಮೆರೆದಿದ್ದಾರೆ. ತಮ್ಮ ಫೋನು ಇತ್ತೀಚಿಗೆ ಸದಾ ರಿಂಗಣಿಸುತ್ತಲೇ ಇದೆ ಎಂದು ಒಪ್ಪಿಕೊಳ್ಳುವ ನಟಿ, ಹಲವು ನಿರ್ದೇಶಕರು ಉತ್ತಮ ಪಾತ್ರಗಳ ಅವಕಾಶ ನೀಡಲು ಮುಂದೆಬಂದಿರುವುದಾಗಿ ಹೇಳುತ್ತಾರೆ. 
ಸದ್ಯಕ್ಕೆ ಅವರು ರೋಹಿತ್ ಪದಕಿ ನಿರ್ದೇಶನದ 'ದಯವಿಟ್ಟು ಗಮನಿಸಿ' ಚಿತ್ರದಲ್ಲಿ ನಿರತರಾಗಿದ್ದಾರೆ. ನಿರ್ಮಾಪಕ ಆಶು ಬೆದ್ರ ನಾಯಕನಟನಾಗಿರುವ, 'ಕಹಿ' ಖ್ಯಾತಿಯ ಅರವಿಂದ್ ಶಾಸ್ತ್ರಿ ನಿರ್ದೇಶನದ ಇನ್ನು ಹೆಸರಿಡದ ಮತ್ತೊಂದು ಚಿತ್ರದಲ್ಲಿ ಕೂಡ ಪಾತ್ರ ಪಡೆದಿದ್ದಾರೆ. ಈಗ ಕೆ ಎಂ ಚೈತನ್ಯ ನಿರ್ದೇಶನದ ಚಿತ್ರಕ್ಕೂ ಕರೆ ಬಂದಿದ್ದು, ಮೊದಲ ಬಾರಿಗೆ ಚಿರಂಜೀವಿ ಸರ್ಜಾ ಮತ್ತು ಶ್ರುತಿ ಹರಿಹರನ್ ಜೊತೆಗೆ ಕಾಣಿಸಿಕೊಳ್ಳಲಿದ್ದಾರೆ. ಎಲ್ಲರಿಗು ಸಮತೂಕದ ಪಾತ್ರವನ್ನು ಸೃಷ್ಟಿಸುವ ನಿರ್ದೇಶಕ ಕೆ ಎಂ ಚೈತನ್ಯ ಯಾರನ್ನು ಹೀರೊ ಅಥವಾ ಹೀರೋಯಿನ್ ಎಂದು ವರ್ಗೀಕರಿಸಲು ಹೋಗುವುದಿಲ್ಲ. 
ಬೆಳ್ಳಿತೆರೆಯಲ್ಲಿ ಕೆ ಎಂ ಚೈತನ್ಯ ಜೊತೆಗೆ ಸಂಗೀತ ಮೊದಲ ಬಾರಿಗೆ ಕೆಲಸ ಮಾಡುತ್ತಿದ್ದರೂ, ಅವರ ಸಹಯೋಗ ಮೈಸೂರು ರೇಷ್ಮೆ ಜಾಹಿರಾತಿನದ್ದಂತೆ. "ಅವರು 'ಆ ದಿನಗಳು' ನಿರ್ದೇಶಿದಾಗಿಲಿಂದಲೂ ಚೈತನ್ಯ ಜೊತೆಗೆ ಕೆಲಸ ಮಾಡಲು ನಾನು ಹಾತೊರೆಯುತ್ತಿದ್ದೆ. ಮಾಮೂಲಿತನವನ್ನು ತೊರೆದು ಚಿಂತಿಸುವ ನಿರ್ದೇಶಕ ಚೈತನ್ಯ" ಎನ್ನುತ್ತಾರೆ ಸಂಗೀತ. 
ಉಳಿದ ತಾರಾಗಣವನ್ನು ಅಂತಿಮಗೊಳಿಸುತ್ತಿರುವ ನಿರ್ದೇಶಕ ಚೈತನ್ಯ ಜೂನ್ ಅಂತ್ಯಕ್ಕೆ ನೂತನ ಚಿತ್ರದ ಚಿತ್ರೀಕರಣ ಪ್ರಾರಂಭಿಸಲಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT