ಎರಡು ಕನಸು ಚಿತ್ರದ ಪೋಸ್ಟರ್ 
ಸಿನಿಮಾ ಸುದ್ದಿ

ಎರಡು ಕನಸು ಚಿತ್ರದ ನಿರ್ದೇಶಕ ಮದನ್ ಬಂಧನ

ಎರಡು ಕನಸು ಚಿತ್ರದ ಪ್ರಮೋಶನ್ ಸರಿಯಾಗಿ ಮಾಡಿಲ್ಲ ಎಂಬ ಕಾರಣಕ್ಕೆ ಪ್ರಚಾರಕ ಪರಮೇಶ್ ಎಂಬುವರನ್ನು ಅಪಹರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಬೆಂಗಳೂರು: ಎರಡು ಕನಸು ಚಿತ್ರದ ಪ್ರಮೋಶನ್ ಸರಿಯಾಗಿ ಮಾಡಿಲ್ಲ ಎಂಬ ಕಾರಣಕ್ಕೆ ಪ್ರಚಾರಕ ಪರಮೇಶ್ ಎಂಬುವರನ್ನು ಅಪಹರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಮದನ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. 
ಕಳೆದ ನಾಲ್ಕು ದಿನಗಳ ಹಿಂದೆ ಬಸವೇಶ್ವರ ನಗರದ ಮನೆಯಿಂದ ಪರಮೇಶ್ ರನ್ನು ಮದನ್ ತನ್ನ ಸ್ನೇಹಿತರೊಂದಿಗೆ ಅಪಹರಣ ಮಾಡಿಸಿದ್ದ ಮೂರು ದಿನ ಕಳೆದರು ಪರಮೇಶ್ ಮನೆಗೆ ಬಾರದಿದ್ದರಿಂದ ಪರಮೇಶ್ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನನ್ವಯ ಮಾಗಡಿ ರಸ್ತೆ ಪೊಲೀಸರು ಮದನ್ ನನ್ನು ಬಂಧಿಸಿದ್ದಾರೆ. 
ಎರಡು ಕನಸು ಚಿತ್ರದ ಪ್ರಮೋಶನ್ ಗಾಗಿ ಮದನ್ ಪರಮೇಶ್ ಗೆ 16.3 ಲಕ್ಷ ರುಪಾಯಿ ನೀಡಿದ್ದರು. ಚಿತ್ರ ಇತ್ತೀಚೆಗಷ್ಟೇ ತೆರೆಕಂಡು ಸೋಲು ಕಂಡಿತ್ತು. ಈ ಸೋಲಿಗೆ ಪ್ರಮೋಶನ್ ಸರಿಯಾಗಿ ಮಾಡದೇ ಇರುವುದೇ ಕಾರಣ ಎಂದು ನಿರ್ದೇಶಕ ಮದನ್ ಪರಮೇಶ್ ರನ್ನು 8 ಲಕ್ಷ ರುಪಾಯಿ ವಾಪಸ್ ಕೊಡುವಂತೆ ಕೇಳಿದ್ದಾರೆ. ಇದಕ್ಕೆ ಪರಮೇಶ್ ನಿರಾಕರಿಸಿದ್ದರಿಂದ ಅವರನ್ನು ಅಪಹರಣ ಮಾಡಲಾಗಿದೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: NDA ಸೀಟು ಹಂಚಿಕೆ ಅಂತಿಮ; ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ಇದೆಂಥಾ ಕ್ರೌರ್ಯ: ಮದ್ಯ ಮಾರಾಟ ನಿಷೇಧ ಉಲ್ಲಂಘಿಸಿದ್ದ ಬ್ರಾಹ್ಮಣನ ಟೀಕಿಸಿ ಪೋಸ್ಟ್; OBC ವ್ಯಕ್ತಿಗೆ ಅದೇ ಬ್ರಾಹ್ಮಣನ ಪಾದ ತೊಳೆದು ನೀರು ಕುಡಿಯುವ ಶಿಕ್ಷೆ!

ಗುಜರಾತ್‌ನಲ್ಲಿ ಎಎಪಿ ರೈತರ ರ್ಯಾಲಿಯಲ್ಲಿ ಹಿಂಸಾಚಾರ; ಕಲ್ಲು ತೂರಿದ ರೈತರು, 3 ಪೊಲೀಸರಿಗೆ ಗಾಯ

SCROLL FOR NEXT