ಬಹುಭಾಷಾ ನಟ ಪ್ರಕಾಶ್ ರಾಜ್ 
ಸಿನಿಮಾ ಸುದ್ದಿ

ಜನಪ್ರಿಯತೆ ಇದೆ ಎಂದ ಮಾತ್ರಕ್ಕೆ ನಟರು ರಾಜಕೀಯ ಪ್ರವೇಶಿಸುವುದು ಸೂಕ್ತವಲ್ಲ: ಪ್ರಕಾಶ್ ರೈ

ಚಿತ್ರ ನಟರು ರಾಜಕೀಯಕ್ಕೆ ಸೇರ್ಪಡೆಗೊಳ್ಳುತ್ತಿರುವದು ದುರಂತ ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ...

ಬೆಂಗಳೂರು: ಜನಪ್ರಿಯತೆ ಇದೆ ಎಂದ ಮಾತ್ರಕ್ಕೆ ನಟರು, ಕಲಾವಿದರು, ರಾಜಕೀಯ ಪ್ರವೇಶಿಸುವುದು ಸೂಕ್ತವಲ್ಲ ಎಂದು ಬಹುಭಾಷಾ ನಟ ಪ್ರಕಾಶ್ ರೈ ಅಭಿಪ್ರಾಯಪಟ್ಟಿದ್ದಾರೆ. 
ನ.12 ರಂದು ಬೆಂಗಳೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿರುವ ಪ್ರಕಾಶ್ ರೈ, ಜನಪ್ರಿಯತೆ ಇದೆ ಎಂಬ ಮಾತ್ರಕ್ಕೆ ನಟರು ರಾಜಕಾರಣವನ್ನು ಆಯ್ಕೆ ಮಾಡುತ್ತಿರುವುದು ದೇಶದಲ್ಲಿ ನಡೆಯುತ್ತಿರುವ ದುರಂತ ಎಂದು ಪ್ರಕಾಶ್ ರೈ ಹೇಳಿದ್ದಾರೆ. ಇನ್ನು ಅಭಿಮಾನಿಗಳು ಸಹ ತಮ್ಮ ನೆಚ್ಚಿನ ನಟ ಎಂದು ಮತದಾನ ಮಾಡದೇ, ಜವಾಬ್ದಾರಿಯುತ ನಾಗರಿಕರಾಗಿ ಮತದಾನ ಮಾಡಬೇಕಿದೆ ಎಂದು ರೈ ಕರೆ ನೀಡಿದ್ದಾರೆ. 
ಮಾಧ್ಯಮ ಸಂವಾದದಲ್ಲಿ ಮಾತನಾಡಿರುವ ಅವರು, ರಾಜಕೀಯಕ್ಕೆ ಸೇರ್ಪಡೆಗೊಳ್ಳುವ ಯಾವುದೇ ಉದ್ದೇಶ ನನಗಿಲ್ಲ. ನಾನು ಯಾವುದೇ ರಾಜಕೀಯ ಪಕ್ಷಕ್ಕೂ ಸೇರ್ಪಡೆಗೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ. ನಾನು ಯಾವುದೇ ಪಂಥ, ಬ್ರ್ಯಾಂಡ್'ಗೆ ಸೇರಿದವನಲ್ಲ. ಪ್ರಚಾರಕ್ಕಾಗಿ ನಾನು ಹೇಳಿಕೆಗಳನ್ನು ನೀಡುವುದಿಲ್ಲ. ಯಾವುದೇ ಪಕ್ಷದ ಮಲೆ ನನಗೆ ನಂಬಿಕೆ ಇಲ್ಲ ಎಂದಿದ್ದಾರೆ. 
ಕೆಲ ದಿನಗಳ ಹಿಂದಷ್ಟೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಪ್ರಕಾಶ್ ರಾಜ್ ಅವರು ಟೀಕಿಸಿದ್ದರು. ಇದಕ್ಕೆ ಬಿಜೆಪಿ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್