ನಿಖಿಲ್ ಕುಮಾರ್ 
ಸಿನಿಮಾ ಸುದ್ದಿ

'ಜಾಗ್ವರ್' ನಿಖಿಲ್ ಕುಮಾರ್ 3ನೇ ಚಿತ್ರಕ್ಕೆ ಹರ್ಷ ನಿರ್ದೇಶನ

ಸ್ಯಾಂಡಲ್ವುಡ್ ನ ಬಹುಕೋಟಿ ವೆಚ್ಚದ ಕುರುಕ್ಷೇತ್ರ ಚಿತ್ರದಲ್ಲಿ ಅಭಿಮನ್ಯು ಪಾತ್ರದಲ್ಲಿ ಅಭಿನಯಿಸುತ್ತಿರುವ ಜಾಗ್ವರ್ ನಿಖಿಲ್ ಕುಮಾರ್ ಅವರ ಮೂರನೇ ಚಿತ್ರವನ್ನು ಹರ್ಷ...

ಸ್ಯಾಂಡಲ್ವುಡ್ ನ ಬಹುಕೋಟಿ ವೆಚ್ಚದ ಕುರುಕ್ಷೇತ್ರ ಚಿತ್ರದಲ್ಲಿ ಅಭಿಮನ್ಯು ಪಾತ್ರದಲ್ಲಿ ಅಭಿನಯಿಸುತ್ತಿರುವ ಜಾಗ್ವರ್ ನಿಖಿಲ್ ಕುಮಾರ್ ಅವರ ಮೂರನೇ ಚಿತ್ರವನ್ನು ಹರ್ಷ ನಿರ್ದೇಶನ ಮಾಡಲಿದ್ದಾರೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ.
ಇದಕ್ಕೆ ಪುಷ್ಠಿ ನೀಡುವಂತೆ ನಿಖಲ್ ಕುಮಾರ್ ಸಹ ಸಿಟಿ ಎಕ್ಸ್ ಪ್ರೆಸ್ ಗೆ ನೀಡಿದ ಸಂದರ್ಶನದಲ್ಲಿ ಇದನ್ನು ಸ್ಪಷ್ಟಪಡಿಸಿದ್ದಾರೆ. ನಿರ್ದೇಶಕ ಹರ್ಷ ಜತೆ ಹಲವು ಬಾರಿ ಕಥೆ ಕುರಿತಂತೆ ಚರ್ಚೆಗಳು ನಡೆದಿದ್ದು ಯೋಜನೆ ಅಂತಿಮಗೊಂಡಿದೆ. ನವೆಂಬರ್ ಕೊನೆಯ ವಾರದಲ್ಲಿ ಅಥವಾ ಡಿಸೆಂಬರ್ ನಲ್ಲಿ ಚಿತ್ರದ ಶೂಟಿಂಗ್ ಪ್ರಾರಂಭಗೊಳ್ಳಲಿದೆ. 
ಹರ್ಷ ಅವರ ಫಿಲ್ಮಂ ಮೇಕಿಂಗ್ ಶೈಲಿ ನನಗೆ ತುಂಬಾ ಇಷ್ಟ. ನಾಡಪ್ರಭು ಕೆಂಪೇಗೌಡ ಕುರಿತಾದ ನಾಟಕವೊಂದರಲ್ಲಿ ಅವರೊಂದಿಗೆ ಕೆಲಸ ಮಾಡಲು ಉತ್ಸುಕನಾಗಿದ್ದೇನೆ ಎಂದರು. ಇನ್ನು ಚಿತ್ರದ ಕುರಿತಂತೆ ಅಧಿಕೃತ ಮಾಹಿತಿ ಮುಂದಿನ ದಿನಗಳಲ್ಲಿ ಹೊರಬೀಳಲಿದೆ ಎಂದರು. 
ಸದ್ಯ ಹರ್ಷ ಸ್ಯಾಂಡಲ್ವುಡ್ ನ ರಾಜರತ್ನ ಪುನೀತ್ ರಾಜ್ ಕುಮಾರ್ ಅಭಿನಯದ ಅಂಜನಿಪುತ್ರ ಚಿತ್ರದ ನಿರ್ದೇಶನದಲ್ಲಿ ಬಿಸಿಯಾಗಿದ್ದಾರೆ. ಅಂಜನಿಪುತ್ರ ನಂತರ ಹರ್ಷ ನಿಖಿಲ್ ಕುಮಾರ್ ಗೆ ಆಕ್ಷನ್ ಕಟ್ ಹೇಳಲಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

RSS centenary: ಪ್ರಪ್ರಥಮ ಬಾರಿಗೆ 'ಭಾರತ ಮಾತೆ'ಯ ಚಿತ್ರವುಳ್ಳ ರೂ.100 ನಾಣ್ಯ! ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಮೈಸೂರು: ಮುಂದಿನ ವರ್ಷಗಳಲ್ಲೂ ನಾನೇ ದಸರಾದಲ್ಲಿ ಪುಷ್ಪಾರ್ಚನೆ: ಡಿಕೆಶಿ ಕನಸಿಗೆ 'ಕೊಳ್ಳಿ' ಇಟ್ರಾ ಸಿದ್ದರಾಮಯ್ಯ?

DA hike: ಕೇಂದ್ರ ಸರ್ಕಾರಿ ನೌಕರರಿಗೆ 'ದಸರಾ ಗಿಫ್ಟ್' ; ಶೇ. 3 ರಷ್ಟು ಹೆಚ್ಚುವರಿ ತುಟ್ಟಿ ಭತ್ಯೆ, ಕೇಂದ್ರ ಸಂಪುಟ ಅನುಮೋದನೆ

Pakistan Army ವಿರುದ್ಧ ತಿರುಗಿ ಬಿದ್ದ POK ಜನತೆ, ಸೇನಾಧಿಕಾರಿಗಳ Kidnap, ಸೇನಾ ಟ್ರಕ್ ನದಿಗೆ! Video

Asia Cup 2025: BCCI ವಾಗ್ದಂಡನೆ ಎಚ್ಚರಿಕೆಗೆ ಹೆದರಿದ Mohsin Naqvi, UAE Boardಗೆ ಭಾರತದ ಟ್ರೋಫಿ ಹಸ್ತಾಂತರ: ವರದಿ

SCROLL FOR NEXT