ಕೃತಿಕಾ ಜಯಕುಮಾರ್ 
ಸಿನಿಮಾ ಸುದ್ದಿ

ಕನ್ನಡದಲ್ಲಿ ಉತ್ತಮ ಕಥೆಗಾಗಿ ಇಷ್ಟು ದಿನ ಕಾಯುತ್ತಿದ್ದೆ: ಕೃತಿಕಾ ಜಯಕುಮಾರ್

ಬಾಕ್ಸರ್ ನಂತರ ತಮ್ಮ ಮುಂದಿನ ಚಿತ್ರಗಳನ್ನು ಆಯ್ಕೆ ಮಾಡಿಕೊಳ್ಳುವಲ್ಲಿ ಚ್ಯೂಸಿಯಾಗಿರುವ ಯುವ ನಟಿ ಕೃತಿಕಾ ...

ಬಾಕ್ಸರ್ ನಂತರ ತಮ್ಮ ಮುಂದಿನ ಚಿತ್ರಗಳನ್ನು ಆಯ್ಕೆ ಮಾಡಿಕೊಳ್ಳುವಲ್ಲಿ ಚ್ಯೂಸಿಯಾಗಿರುವ ಯುವ ನಟಿ ಕೃತಿಕಾ ಜಯಕುಮಾರ್, ಉತ್ತಮ ಕಥೆಗಾಗಿ ಕಾಯುತ್ತಿದ್ದರು. ಇದೀಗ ಕೃತಿಕಾ, ಕವಚ ಚಿತ್ರದಲ್ಲಿ ಶಿವರಾಜ್ ಕುಮಾರ್ ಅವರ ಜೊತೆ ನಟಿಸುತ್ತಿದ್ದಾರೆ.
ಈ ವಾರ ಶೂಟಿಂಗ್ ನಲ್ಲಿ ಭಾಗಿಯಾಗಲಿರುವ ಕೃತಿಕಾ ಸಿಟಿ ಎಕ್ಸ್ ಪ್ರೆಸ್ ಜೊತೆ ಮಾತನಾಡಿ, ಸ್ಯಾಂಡಲ್ ವುಡ್ ಗೆ ಮತ್ತೆ ಮರಳಿರುವುದಕ್ಕೆ ಬಹಳ ಸಂತೋಷವಾಗಿದ್ದೇನೆ. ಇಲ್ಲಿಯೇ ಹುಟ್ಟಿ ಬೆಳೆದಿರುವುದರಿಂದ ನಾನು ಮಾಡುವ ಕನ್ನಡ ಚಿತ್ರಗಳು ಅತ್ಯುತ್ತಮವಾಗಿರಬೇಕು ಎಂದು ಬಯಸುತ್ತೇನೆ. ಅದು ಎಲ್ಲ ಕಮರ್ಷಿಯಲ್ ಚಿತ್ರಗಳಂತೆ ಇರಬಾರದು ಎಂದು ನನ್ನ ಅನಿಸಿಕೆಯಾಗಿದೆ. ನಾನು ಉತ್ತಮ ಕಥೆಗಾಗಿ ಕಾಯುತ್ತಿದ್ದರಿಂದ ಬಾಕ್ಸರ್ ನಂತರ ಇಷ್ಟು ಸಮಯವಾಯಿತು ಎಂದರು.
ಕೃತಿಕಾ ಅವರ ಎರಡನೇ ಚಿತ್ರ ಕೂಡ ರಿಮೇಕ್ ಆಗಿದೆ. ರಿಮೇಕ್ ಚಿತ್ರದ ಬಗ್ಗೆ ನನಗೆ ಬೇಸರವಿಲ್ಲ. ರಿಮೇಕ್ ಚಿತ್ರಗಳನ್ನು ಕೂಡ ಸ್ವಲ್ಪ ಬದಲಾಯಿಸಿ ಬೇರೆ ಭಾಷೆಗಳಲ್ಲಿ ಮಾಡಲಾಗಿದೆ. ಉತ್ತಮ ಚಿತ್ರವೊಂದು ಯಾವ ಭಾಷೆಯಲ್ಲಿದ್ದರೂ ಜನರಿಗೆ ಇಷ್ಟವಾಗುತ್ತದೆ. ನನ್ನನ್ನು ಈ ಚಿತ್ರಕ್ಕೆ ಸಂಪರ್ಕಿಸಿದಾಗ ಮೂಲ ಚಿತ್ರವನ್ನು ನೋಡಿದೆ. ಅದು ಅಭಿನಯಿಸಲು ಒಳ್ಳೆಯ ಸಿನಿಮಾ ಎನ್ನಿಸಿತು. ನನ್ನ ಪಾತ್ರ ಕೂಡ ಚಿತ್ರದಲ್ಲಿ ಚೆನ್ನಾಗಿದೆ. ಶಿವಣ್ಣ ಅವರ ಜೊತೆ ಅಭಿನಯಿಸುವುದೆಂದು ಗೊತ್ತಾದ ಮೇಲಂತೂ ತುಂಬಾ ಖುಷಿಯಾಯಿತು. ಇದೊಂದು ನನಗೆ ದೊಡ್ಡ ಅವಕಾಶ. ನನಗೆ ವಾಪಸ್ ಸ್ಯಾಂಡಲ್ ವುಡ್ ಗೆ ಬರಲು ಒಳ್ಳೆಯ ಅವಕಾಶ ಎಂದು ಖುಷಿಯಿಂದ ಹೇಳುತ್ತಾರೆ.
ತೆಲುಗು ಚಿತ್ರರಂಗದಲ್ಲಿ ಈಗಾಗಲೇ ಗುರುತಿಸಿಕೊಂಡಿರುವ ಕೃತಿಕಾ ಜಯಕುಮಾರ್, ಕಾಲಿವುಡ್ ಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ತಮಿಳಿನಲ್ಲಿ ಸಂತನ ದೇವನ್ ನಲ್ಲಿ ಆರ್ಯಗೆ ನಾಯಕಿಯಾಗಿ ನಟಿಸುತ್ತಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

SCROLL FOR NEXT