ಸನಲ್ ಕಮಾರ್ ಶಶಿಧರನ್ 
ಸಿನಿಮಾ ಸುದ್ದಿ

ಉದ್ದೇಶ ಸಾಧನೆಗಾಗಿ ಸರ್ಕಾರದಿಂದ ಕಾನೂನಿನ ದುರುಪಯೋಗ: 'ಎಸ್ ದುರ್ಗಾ' ನಿರ್ದೇಶಕ

ಮಲೆಯಾಳಂ ಚಿತ್ರ 'ಎಸ್ ದುರ್ಗಾ'ದ ನಿರ್ದೇಶಕ ಸನಲ್ ಕುಮಾರ್ ಶಶಿಧರನ್ ಅವರು ಬುಧವಾರ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು,...

ಪಣಜಿ: ಮಲೆಯಾಳಂ ಚಿತ್ರ 'ಎಸ್ ದುರ್ಗಾ'ದ ನಿರ್ದೇಶಕ ಸನಲ್ ಕುಮಾರ್ ಶಶಿಧರನ್ ಅವರು ಬುಧವಾರ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಅಧಿಕಾರದಲ್ಲಿರುವ ಜನ ತಮ್ಮ ಉದ್ದೇಶ ಸಾಧನೆಗಾಗಿ ಏನೂ ಬೇಕಾದರೂ ಮಾಡುತ್ತಾರೆ ಎಂದು ಆರೋಪಿಸಿದ್ದಾರೆ.
ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ(ಸಿಬಿಎಫ್ ಸಿ) ಕೇರಳ ಹೈಕೋರ್ಟ್ ಆದೇಶವನ್ನೂ ಧಿಕ್ಕರಿಸಿ ಗೋವಾದಲ್ಲಿ ನಡೆದ ಭಾರತೀಯ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ(ಐಎಫ್‌ಎಫ್‌ಐ)ದಲ್ಲಿ ಮಲಯಾಳಂನ ವಿವಾದಾತ್ಮಕ ಚಿತ್ರ 'ಎಸ್‌ ದುರ್ಗಾ' (ಸೆಕ್ಸಿ ದುರ್ಗಾ) ಪ್ರದರ್ಶಿಸಲು ಅನುಮತಿ ನೀಡಿದೆ, ಮರು ಪರಿಶೀಲಿಸುವಂತೆ ಆದೇಶ ನೀಡಿದೆ.
ಸಿಬಿಎಫ್ ಸಿ ನಿರ್ಧಾರಕ್ಕೆ ಫೇಸ್ ಬುಕ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಚಿತ್ರದ ನಿರ್ದೇಶಕ ಸನಲ್ ಕುಮಾರ್ ಶಶಿಧರನ್ ಅವರು, ನನ್ನ ಚಿತ್ರ ಐಎಫ್‌ಎಫ್‌ಐ ನಲ್ಲಿ ಪ್ರದರ್ಶನ ಕಾಣದಿರುವ ಬಗ್ಗೆ ಬೇಸರ ಇಲ್ಲ. ಆದರೆ ಅಧಿಕಾರದಲ್ಲಿರುವವರು ನ್ಯಾಯಾಂಗವನ್ನು ವಿರೋಧಿಸುತ್ತಾರೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದಿದ್ದಾರೆ.
'ನನಗೆ ಸ್ವಲ್ಪವೂ ಬೇಸರ ಆಗಿಲ್ಲ. ಆದರೆ ಮತ್ತೊಂದು ಕಡೆ ಸಂತೋಷವಾಗಿದೆ. ಏಕೆಂದರೆ ಸಂಘ ಅಧಿಕಾರಕ್ಕೆ ಏನಾಗುತ್ತೆ? ಎಂದು ನನಗೆ ಹಲವರು ಪ್ರಶ್ನಿಸುತ್ತಿದ್ದರು. ನನ್ನ ಚಿತ್ರದಿಂದ ಅವರಿಗೆಲ್ಲ ಉತ್ತರ ಸಿಕ್ಕಿದೆ 'ಎಸ್ ದುರ್ಗಾ' ನಿರ್ದೇಶಕ ಹೇಳಿದ್ದಾರೆ.
ಅಧಿಕಾರದಲ್ಲಿರುವ ಜನ ತಮಗೆ ಇಷ್ಟವಾಗದಿರುವುದನ್ನು ಹಾಳು ಮಾಡಲು ಏನು ಬೇಕಾದರೂ ಮಾಡುತ್ತಾರೆ ಮತ್ತು ಕಾನೂನು ಹಾಗೂ ನ್ಯಾಯಾಂಗವನ್ನು ದುರುಪಯೋಗಪಡಿಸಿಕೊಳ್ಳುತ್ತಾರೆ ಎಂಬುದಕ್ಕೆ ನನ್ನ ಚಿತ್ರ ಸಾಕ್ಷಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT