ಉಪೇಂದ್ರ 
ಸಿನಿಮಾ ಸುದ್ದಿ

ರಾಜಕೀಯ ಎಂಟ್ರಿಗೂ ಮುನ್ನ ಇದು ಉಪೇಂದ್ರ ಅವರ ಕೊನೆಯ ಸಿನಿಮಾ!

ರಾಜಕೀಯ ಜೀವನ ಆರಂಭಿಸಲು ತಯಾರಾಗಿರುವ ನಟ ಉಪೇಂದ್ರ ಎಲ್ಲಾ ಸಿದ್ಧತೆಗಳಲ್ಲೂ ತೊಡಗಿದ್ದಾರೆ. ಇದರ ನಡುವೆ ಅಭಿಮಾನಿಗಳು ತೆರೆಯ ಮೇಲೆ...

ಬೆಂಗಳೂರು: ರಾಜಕೀಯ ಜೀವನ ಆರಂಭಿಸಲು ತಯಾರಾಗಿರುವ ನಟ ಉಪೇಂದ್ರ ಎಲ್ಲಾ ಸಿದ್ಧತೆಗಳಲ್ಲೂ ತೊಡಗಿದ್ದಾರೆ. ಇದರ ನಡುವೆ ಅಭಿಮಾನಿಗಳು ತೆರೆಯ ಮೇಲೆ ಉಪೇಂದ್ರ ಅವರನ್ನು ಕಣ್ತುಂಬಿಕೊಳ್ಳಲು ಕಾಯುತ್ತಿದ್ದಾರೆ. ಅಭಿಮಾನಿಗಳಿಗಾಗಿ  ಉಪೇಂದ್ರ ರಾಜಕೀಯ ಎಂಟ್ರಿಗೂ ಮುನ್ನ ಉಪ್ಪಿ-ರುಪ್ಪಿ ಸಿನಿಮಾದಲ್ಲಿ ನಟಿಸಲಿದ್ದಾರೆ.
ಸದ್ಯ ಶ್ರೀ ಹರಿ ನಿರ್ದೇಶನದ ಹೋಂ ಮಿನಿಸ್ಟರ್ ಸಿನಿಮಾ ಶೂಟಿಂಗ್ ನಲ್ಲಿ ಉಪೇಂದ್ರ ಬ್ಯುಸಿಯಾಗಿದ್ದಾರೆ, ಇದರ ಜೊತೆಗೆ  ಕೆ. ಮಾದೇಶ ನಿರ್ದೇಶನದ ಉಪ್ಪಿ-ರುಪ್ಪಿ ಸಿನಿಮಾಗಾಗಿ ಅಕ್ಟೋಬರ್ 8 ರಿಂದ ಡೇಟ್ಸ್ ನೀಡಿದ್ದು, 7 ದಿನಗಳು ಥಾಯ್ಲೆಂಡ್ ನಲ್ಲಿ ಶೂಟಿಂಗ್ ನಡೆಸಲಿದ್ದಾರೆ.
ಈಗಾಗಲೇ 15 ದಿನಗಳ ಕಾಲ ಶೂಟಿಂಗ್ ನಡೆಸಿದ್ದು, ಉಳಿದ ಕೆಲ ಭಾಗದ ಶೂಟಿಂಗ್ ಥಾಯ್ಲೆಂಡ್ ನಲ್ಲಿ ಮಾಡಲಾಗುವುದು ಎಂದು ನಿರ್ದೇಶಕ ಕೆ.ಮಾದೇಶ್ ಹೇಳಿದ್ದಾರೆ.
ನಮಗೆ ಸಮಯಾವಕಾಶ ಕಡಿಮೆಯಿದ್ದು, ನವೆಂಬರ್ ಒಳಗೆ ಸಿನಿಮಾ ಶೂಟಿಂಗ್ ಮುಗಿಸಬೇಕಿದೆ. ರಾಜಕೀಯ ಎಂಟ್ರಿಗೂ ಮುನ್ನ ಉಪ್ಪಿ-ರುಪ್ಪಿ ಸಿನಿಮಾದಲ್ಲಿ ಉಪೇಂದ್ರ ಅಭಿನಯಿಸುತ್ತಿದ್ದು, ಮೋದಿ ಅವರ ನೋಟು ಅಮಾನ್ಯೀಕರಣದಿಂದಾಗಿ ದೇಶದ ಮೇಲೆ ಉಂಟಾದ ಪರಿಣಾಮಗಳ ಕುರಿತಾದ ಸಿನಿಮಾವಾಗಿದೆ. ಈ ಚಿತ್ರದಲ್ಲಿ ಉಪೇಂದ್ರ ಅವರ ಪಾತ್ರ ಆಸಕ್ತಿದಾಯಕವಾಗಿದೆ. ಸಾಮಾನ್ಯ ವ್ಯಕ್ತಿಯೊಬ್ಬ ನಾಯಕನಾಗುವ ಚಿತ್ರಕತೆಯಾಗಿದೆ. ಅವರ ಪಾತ್ರ ಭ್ರಷ್ಟ ರಾಜಕಾರಣಿಗಳ ಮುಖಕ್ಕೆ ಹಿಡಿದ ಕನ್ನಡಿಯಾಗಿದೆ. ಕೇವಲ ಉಪೇಂದ್ರ ಅವರೊಬ್ಬರಿಂದ ಮಾತ್ರ ಈ ರಾಜಕೀಯ ಡ್ರಾಮಾ ಮಾಡಲು ಸಾಧ್ಯ ಎಂದು ಅಭಿಪ್ರಾ ಪಟ್ಟಿದ್ದಾರೆ.
ಎಂ,ಎಸ್ ರಮೇಶ್ ಜೊತೆ ಉಪೇಂದ್ರ ಕೂಡ ಕೆಲ ಸನ್ನಿವೇಶಗಳ ಚಿತ್ರಕಥೆ ಬರೆದಿದ್ದಾರೆ ಎಂದು ಅವರು ಹೇಳಿದ್ದಾರೆ. ಉಪ್ಪಿ-ರುಪ್ಪಿ ಸಿನಿಮಾವನ್ನು ವಿಜಯಲಕ್ಷ್ಮಿ ಅರಸ್ ನಿರ್ಮಿಸುತ್ತಿದ್ದಾರೆ, ರಚಿತಾ ರಾಮ್ ನಾಯಕಿಯಾಗಿ ನಟಿಸುತ್ತಿದ್ದಾರೆ, ಸಿನಿಮಾಗೆ ಸಾಧು ಕೋಕಿಲಾ ಸಂಗೀತ ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT