ಶ್ರೇಯಸ್ ಮಂಜು 
ಸಿನಿಮಾ ಸುದ್ದಿ

ಇಮ್ರಾನ್ ಸರ್ಧಾರಿಯ ಚಿತ್ರಕ್ಕೆ ನಿರ್ಮಾಪಕ ಕೆ ಮಂಜು ಪುತ್ರ ಶ್ರೇಯಸ್ ಮಂಜು ಆಯ್ಕೆ

ಸ್ಯಾಂಡಲ್ ವುಡ್ ನ ನಿರ್ಮಾಪಕ ಕೆ.ಮಂಜು ಅವರ ಪುತ್ರ ಶ್ರೇಯಸ್ ಮಂಜು ಅವರನ್ನು ಬೆಳ್ಳಿ ತೆರೆ ಗೆ ಪರಿಚಯಿಸಲು ಸಿದ್ದತೆಗಳು ಪ್ರಾರಂಭವಾಗಿದೆ ಎಂದು .........

ಬೆಂಗಳೂರು: ಸ್ಯಾಂಡಲ್ ವುಡ್ ನ ನಿರ್ಮಾಪಕ ಕೆ.ಮಂಜು ಅವರ ಪುತ್ರ ಶ್ರೇಯಸ್ ಮಂಜು ಅವರನ್ನು ಬೆಳ್ಳಿ ತೆರೆ ಗೆ ಪರಿಚಯಿಸಲು  ಸಿದ್ದತೆಗಳು ಪ್ರಾರಂಭವಾಗಿದೆ ಎಂದು ಗಾಂಧಿನಗರದಲ್ಲಿ ಸುದ್ದಿಯೊಂದು ಹರಿದಾಡುತ್ತಿತ್ತು,  ಅದಕ್ಕೀಗ ಸ್ಪಷ್ಟ ರೂಪ ಸಿಕ್ಕಿದ್ದು ಯುವ ಪ್ರತಿಭೆ ಶ್ರೇಯಸ್,  ನೃತ್ಯ ನಿರ್ದೇಶಕ ಇಮ್ರಾನ್ ಸರ್ಧಾರಿಯಾ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ನೂತನ  ಚಿತ್ರಕ್ಕೆ ಆಯ್ಕೆ ಆಗಿದ್ದಾರೆ.
ಆದರೆ ಈ ಕುರಿತಂತೆ ಅಧಿಕೃತ ಘೋಷಣೆ ಮಾಡಲು ನಿರ್ಮಾಪಕ ಮಂಜು ಇನ್ನೂ ತಕ್ಕ ಸಮಯಕ್ಕಾಗಿ ಕಾಯುತ್ತಿದ್ದಾರೆ, ಸ್ಕ್ರಿಪ್ಟ್ ಮತ್ತು ಶೂಟಿಂಗ್ ಸಿದ್ಧತೆ ಕೆಲಸಗಳು ವೇಗವಾಗಿ ನಡೆಯುತ್ತಿದ್ದು ನಿರ್ದೇಶಕನೊಂದಿಗಿನ ಚರ್ಚೆಯ ನಂತರ ಹೆಚ್ಚಿನ ವಿವರಗಳನ್ನು ಬಹಿರಂಗ ಪಡಿಸಲಾಗುತ್ತದೆ ಎನ್ನಲಾಗಿದೆ. 
ಎಲ್ಲವೂ ಅಂದುಕೊಂದಂತೆಯೇ ನಡೆದಲ್ಲಿ ಶ್ರೇಯಸ್ ಮತ್ತು ನಿರ್ದೇಶಕ ಇಮ್ರಾನ್ ಅವರುಗಳ ಪ್ರಥಮ ಚಿತ್ರದ ಕೆಲಸ ಜ. 2018ರಿಂದ ಪ್ರಾರಂಭಗೊಳ್ಳಲಿದೆ.
 'ಉಪ್ಪು ಹುಳಿ ಖಾರ ' ಚಿತ್ರದ ಬಿಡುಗಡೆಗೆ ಸಜ್ಜಾಗುತ್ತಿರುವ ಇಮ್ರಾನ್ ಚಿತ್ರಕಥೆಗಾಗಿ ಕೆಲಸ ಮಾಡುತ್ತಿದ್ದಾರೆ, ಇದು ಸುಮಧುರ ಪ್ರೇಮಕಾವ್ಯವಾಗಿದ್ದು ಜತೆಗೆ ಮಾಸ್ ಮನರಂಜನೆಯೂ ಇರಲಿದೆ ಎಂದುಅವರು ವಿವರಿಸಿದರು.
 "ಶ್ರೇಯಸ್ ನ ಪ್ರಥಮ ಚಿತ್ರರೊಮ್ಯಾಂತಿಕ್ ಲವ್ ಸ್ಟೋರಿಯಾಗುವುದರೊಡನೆ ಆಕ್ಷನ್ ಮತ್ತು ಉತ್ತಮ ದೃಷ್ಯಾವಳಿಗಳನ್ನು ಒಳಗೊಳ್ಳಲಿದೆ. ಭಾರತ ಮತ್ತು ವಿದೇಶದಲ್ಲಿ ಚಿತ್ರೀಕರಣ ನಡೆಯಲಿದೆ" ಎಂದು ಚಿತ್ರರಂಗದ ಮೂಲಗಳಿಂದ ಮಾಹಿತಿ ಸಿಕ್ಕಿದೆ.
ಶ್ರೇಯಸ್ ತನ್ನ ಮೊದಲ ಪ್ರಯತ್ನಕ್ಕೆ ಮುನ್ನ ಸಾಕಷ್ಟು ಆಯ್ಕೆ ನಡೆಸಿದ್ದರು. ಸರಿಯಾದ ಕಥೆ ನಿರ್ಧರಿಸಲು ಸಮಯವನ್ನು ತೆಗೆದುಕೊಂಡಿದ್ದರು. ಅದೇ ವೇಳೆ, ಅವರು ತಮ್ಮ ನಟನಾ ಕೌಶಲ್ಯ ಮತ್ತು ನೃತ್ಯ ತರಬೇತಿ ಪಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: 48 ಗಂಟೆಗಳಲ್ಲಿ ಹೋರ್ಮುಜ್ ಜಲಸಂಧಿ ತೆರೆಯದಿದ್ದರೆ ಇರಾನ್‌ನಲ್ಲಿ ನರಕ ಸೃಷ್ಟಿಸುತ್ತೇವೆ; Trump ಕೊನೇಯ ಎಚ್ಚರಿಕೆ!

IPL 2026: ಅಹಮದಾಬಾದ್ ಮೈದಾನದಲ್ಲಿ RR ವಿರುದ್ಧ ಅತ್ಯಧಿಕ ರನ್ ಚೇಸ್‌ನಲ್ಲಿ ಕೊನೆಯ ಓವರ್‌ನಲ್ಲಿ ಸೋತ Gujarat Titans

ವಿದೇಶಗಳ Mk-84 ಗೆ ಪರ್ಯಾಯ, ಆತ್ಮನಿರ್ಭರತೆಗೆ ಉತ್ತೇಜನ: ದೇಶೀಯವಾಗಿ 1000-kg ವಾಯುಬಾಂಬ್‌ ತಯಾರಿಸಲಿರುವ ಭಾರತ!

ಮಾಗಡಿ Congress ಶಾಸಕ ಹೆಚ್​​.ಸಿ ಬಾಲಕೃಷ್ಣಗೆ ಕೋರ್ಟ್ ಶಾಕ್​​: ಜಾಮೀನು ರಹಿತ ವಾರೆಂಟ್ ಜಾರಿ

'ನೀವೇನು ಸುರಕ್ಷಿತ ಅಲ್ಲ': ಟ್ರಂಪ್ 48 ಗಂಟೆಗಳ ಕೊನೆ ಎಚ್ಚರಿಕೆ ಬೆನ್ನಲ್ಲೆ CIA Station ಗೆ ಡ್ರೋನ್ ನುಗ್ಗಿಸಿ ಇರಾನ್; 1 ನಿಮಿಷದ ಅಂತರದಲ್ಲಿ 2 ಸ್ಫೋಟ!

SCROLL FOR NEXT