ಶ್ರೇಯಸ್ ಮಂಜು 
ಸಿನಿಮಾ ಸುದ್ದಿ

ಇಮ್ರಾನ್ ಸರ್ಧಾರಿಯ ಚಿತ್ರಕ್ಕೆ ನಿರ್ಮಾಪಕ ಕೆ ಮಂಜು ಪುತ್ರ ಶ್ರೇಯಸ್ ಮಂಜು ಆಯ್ಕೆ

ಸ್ಯಾಂಡಲ್ ವುಡ್ ನ ನಿರ್ಮಾಪಕ ಕೆ.ಮಂಜು ಅವರ ಪುತ್ರ ಶ್ರೇಯಸ್ ಮಂಜು ಅವರನ್ನು ಬೆಳ್ಳಿ ತೆರೆ ಗೆ ಪರಿಚಯಿಸಲು ಸಿದ್ದತೆಗಳು ಪ್ರಾರಂಭವಾಗಿದೆ ಎಂದು .........

ಬೆಂಗಳೂರು: ಸ್ಯಾಂಡಲ್ ವುಡ್ ನ ನಿರ್ಮಾಪಕ ಕೆ.ಮಂಜು ಅವರ ಪುತ್ರ ಶ್ರೇಯಸ್ ಮಂಜು ಅವರನ್ನು ಬೆಳ್ಳಿ ತೆರೆ ಗೆ ಪರಿಚಯಿಸಲು  ಸಿದ್ದತೆಗಳು ಪ್ರಾರಂಭವಾಗಿದೆ ಎಂದು ಗಾಂಧಿನಗರದಲ್ಲಿ ಸುದ್ದಿಯೊಂದು ಹರಿದಾಡುತ್ತಿತ್ತು,  ಅದಕ್ಕೀಗ ಸ್ಪಷ್ಟ ರೂಪ ಸಿಕ್ಕಿದ್ದು ಯುವ ಪ್ರತಿಭೆ ಶ್ರೇಯಸ್,  ನೃತ್ಯ ನಿರ್ದೇಶಕ ಇಮ್ರಾನ್ ಸರ್ಧಾರಿಯಾ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ನೂತನ  ಚಿತ್ರಕ್ಕೆ ಆಯ್ಕೆ ಆಗಿದ್ದಾರೆ.
ಆದರೆ ಈ ಕುರಿತಂತೆ ಅಧಿಕೃತ ಘೋಷಣೆ ಮಾಡಲು ನಿರ್ಮಾಪಕ ಮಂಜು ಇನ್ನೂ ತಕ್ಕ ಸಮಯಕ್ಕಾಗಿ ಕಾಯುತ್ತಿದ್ದಾರೆ, ಸ್ಕ್ರಿಪ್ಟ್ ಮತ್ತು ಶೂಟಿಂಗ್ ಸಿದ್ಧತೆ ಕೆಲಸಗಳು ವೇಗವಾಗಿ ನಡೆಯುತ್ತಿದ್ದು ನಿರ್ದೇಶಕನೊಂದಿಗಿನ ಚರ್ಚೆಯ ನಂತರ ಹೆಚ್ಚಿನ ವಿವರಗಳನ್ನು ಬಹಿರಂಗ ಪಡಿಸಲಾಗುತ್ತದೆ ಎನ್ನಲಾಗಿದೆ. 
ಎಲ್ಲವೂ ಅಂದುಕೊಂದಂತೆಯೇ ನಡೆದಲ್ಲಿ ಶ್ರೇಯಸ್ ಮತ್ತು ನಿರ್ದೇಶಕ ಇಮ್ರಾನ್ ಅವರುಗಳ ಪ್ರಥಮ ಚಿತ್ರದ ಕೆಲಸ ಜ. 2018ರಿಂದ ಪ್ರಾರಂಭಗೊಳ್ಳಲಿದೆ.
 'ಉಪ್ಪು ಹುಳಿ ಖಾರ ' ಚಿತ್ರದ ಬಿಡುಗಡೆಗೆ ಸಜ್ಜಾಗುತ್ತಿರುವ ಇಮ್ರಾನ್ ಚಿತ್ರಕಥೆಗಾಗಿ ಕೆಲಸ ಮಾಡುತ್ತಿದ್ದಾರೆ, ಇದು ಸುಮಧುರ ಪ್ರೇಮಕಾವ್ಯವಾಗಿದ್ದು ಜತೆಗೆ ಮಾಸ್ ಮನರಂಜನೆಯೂ ಇರಲಿದೆ ಎಂದುಅವರು ವಿವರಿಸಿದರು.
 "ಶ್ರೇಯಸ್ ನ ಪ್ರಥಮ ಚಿತ್ರರೊಮ್ಯಾಂತಿಕ್ ಲವ್ ಸ್ಟೋರಿಯಾಗುವುದರೊಡನೆ ಆಕ್ಷನ್ ಮತ್ತು ಉತ್ತಮ ದೃಷ್ಯಾವಳಿಗಳನ್ನು ಒಳಗೊಳ್ಳಲಿದೆ. ಭಾರತ ಮತ್ತು ವಿದೇಶದಲ್ಲಿ ಚಿತ್ರೀಕರಣ ನಡೆಯಲಿದೆ" ಎಂದು ಚಿತ್ರರಂಗದ ಮೂಲಗಳಿಂದ ಮಾಹಿತಿ ಸಿಕ್ಕಿದೆ.
ಶ್ರೇಯಸ್ ತನ್ನ ಮೊದಲ ಪ್ರಯತ್ನಕ್ಕೆ ಮುನ್ನ ಸಾಕಷ್ಟು ಆಯ್ಕೆ ನಡೆಸಿದ್ದರು. ಸರಿಯಾದ ಕಥೆ ನಿರ್ಧರಿಸಲು ಸಮಯವನ್ನು ತೆಗೆದುಕೊಂಡಿದ್ದರು. ಅದೇ ವೇಳೆ, ಅವರು ತಮ್ಮ ನಟನಾ ಕೌಶಲ್ಯ ಮತ್ತು ನೃತ್ಯ ತರಬೇತಿ ಪಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇರಳದಲ್ಲಿ ಸಂಪುಟ ಹಂಚಿಕೆ ಗೊಂದಲ: ಕಾಂಗ್ರೆಸ್ ಹೈಕಮಾಂಡ್ ಸಲಹೆ ತಿರಸ್ಕರಿಸಿದ CM ಸತೀಶನ್, ಖಾತೆ ಹಂಚಿಕೆಯಲ್ಲಿ ಭಿನ್ನಮತ ಸ್ಫೋಟ..!

ಅಮೆರಿಕಾ ಜೊತೆ ಒಪ್ಪಂದಕ್ಕೆ ಇರಾನ್‌ ಕಾತರ, ಶೀಘ್ರದಲ್ಲೇ ಯುದ್ಧ ಅಂತ್ಯ: ತೈಲ ಬೆಲೆ ಭಾರೀ ಕುಸಿತ; ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ನಮ್ಮ ನೋವನ್ನು ಆನಂದಿಸುತ್ತೀರಾ: ನನಗೆ ವಯಸ್ಸಾಗಿದೆ, ಆದರೆ ಹೋರಾಡೋದು ಮರೆತಿಲ್ಲ; ಸಲ್ಮಾನ್ ಖಾನ್ ಎಚ್ಚರಿಕೆ!

ಆನೇಕಲ್‌ನಲ್ಲಿ ಬೆಂಗಳೂರಿನ 2ನೇ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ರೈತರು, KRS ತೀವ್ರ ವಿರೋಧ!

ನಿಜಕ್ಕೂ ನಮ್ಮದು F…Good Team: ಲೈವ್​ನಲ್ಲೇ 'ಅಶ್ಲೀಲ ಪದ' ಬಳಸಿದ ರಿಷಭ್ ಪಂತ್, ವ್ಯಾಪಕ ಟೀಕೆ, Video!

SCROLL FOR NEXT