ಕವಿತಾ ಲಕ್ಷ್ಮೀ 
ಸಿನಿಮಾ ಸುದ್ದಿ

ಕಿರುತೆರೆ ನಟಿಯಾಗಿದ್ದರು ಸ್ಟ್ರೀಟ್ ಕ್ಯಾಂಟಿನ್ ಓಪನ್ ಮಾಡಿದ್ದು ಯಾಕೆ ಗೊತ್ತಾ?

ಕಿರುತೆರೆ ನಟಿಯೊಬ್ಬರು ಮಗನ ಶಿಕ್ಷಣಕ್ಕಾಗಿ ಕ್ಯಾಂಟೀನ್ ಓಪನ್ ಮಾಡಿ ಈಗ ದೇಶಾದ್ಯಂತ ಸುದ್ದಿಯಾಗಿದ್ದಾರೆ...

ತಿರುವನಂತಪುರಂ: ಕಿರುತೆರೆ ನಟಿಯೊಬ್ಬರು ಮಗನ ಶಿಕ್ಷಣಕ್ಕಾಗಿ ಕ್ಯಾಂಟೀನ್ ಓಪನ್ ಮಾಡಿ ಈಗ ದೇಶಾದ್ಯಂತ ಸುದ್ದಿಯಾಗಿದ್ದಾರೆ. 
ಸಿನಿಮಾ, ಧಾರಾವಾಹಿ ನಟ-ನಟಿಯರೆಂದರೇ ವೈಭವಯುತ, ಆಡಂಬರದ ಜೀವನ ನಡೆಸುತ್ತಾರೆ ಎಂಬ ಮಾತಿಗೆ ಈ ನಟಿ ತದ್ವಿರುದ್ಧವಾಗಿದ್ದಾರೆ. ಮಲೆಯಾಳಂ ಧಾರವಾಹಿಗಳಲ್ಲಿ ಅಭಿನಯಿಸುತ್ತಿರುವ ಕವಿತಾ ಲಕ್ಷ್ಮೀ ಎಂಬುವರಿಗೆ ಜೀವನದಲ್ಲಿ ಈಗ ಆರ್ಥಿಕ ಸಂಕಷ್ಟ ಎದುರಾಗಿದ್ದು ಇದರಿಂದಾಗಿ ಮೆಟ್ಟಿನಿಲ್ಲಲು ಹೈವೇ ಪಕ್ಕದಲ್ಲಿ ಕ್ಯಾಂಟಿನ್ ಆರಂಭಿಸಿದ್ದಾರೆ. 
ಬೆಳಗಿನ ಸಮಯದಲ್ಲಿ ಧಾರವಾಹಿಗಳಲ್ಲಿ ಅಭಿನಯಿಸುತ್ತಿರುವ ಕವಿತಾ ಲಕ್ಷ್ಮಿ ಅವರು ಸಂಜೆಯಾದರೆ ಸಾಕು ಶೂಟಿಂಗ್ ಮುಗಿಸಿಕೊಂಡು ತಿರುವನಂತಪುರದ ಹೈವೇ ಪಕ್ಕದಲ್ಲಿ ದೋಸೆ ಕ್ಯಾಂಟಿನ್ ನಲ್ಲಿ ಕೆಲಸ ಆರಂಭಿಸುತ್ತಾರೆ. 
13 ವರ್ಷಗಳ ಹಿಂದೆಯೇ ಗಂಡನಿಗೆ ವಿಚ್ಛೇದನ ನೀಡಿದ್ದ ಕವಿತಾ ಲಕ್ಷ್ಮೀ ಅವರು ಇಬ್ಬರು ಮಕ್ಕಳ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ತಮ್ಮ ಮಕ್ಕಳಿಗೆ ವಿದೇಶದಲ್ಲಿ ಶಿಕ್ಷಣ ಕೊಡಿಸುವ ಸಲುವಾಗಿ ಅವರು ಸ್ಟ್ರೀಟ್ ಕ್ಯಾಂಟಿನ್ ಆರಂಭಿಸಿದ್ದು ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕವಿತಾರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಎಲ್ಲರ ಹುಬ್ಬೇರಿಸಿದ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT