ಕಮಲ್ ಹಾಸನ್ 
ಸಿನಿಮಾ ಸುದ್ದಿ

ಗಿಡಮೂಲಿಕೆ ಬಗ್ಗೆ ಟ್ವೀಟ್: ನಟ ಕಮಲ ಹಾಸನ್ ಗೆ ಸಂಕಷ್ಟ?

ಡೆಂಗ್ಯೂ ಹರಡುವಿಕೆಯನ್ನು ತಡೆಗಟ್ಟಲು ಬಳಕೆ ಮಾಡಲಾಗುವ ಗಿಡಮೂಲಿಕೆ ನಿಲವೇಂಬು ಕುಡಿನೀರ್ ನ್ನು ಹಂಚದಂತೆ ತಮ್ಮ ಅಭಿಮಾನಿಗಳಿಗೆ ಕರೆ ನೀಡಿ ನಟ ಕಮಲ ಹಾಸನ್ ಟ್ವೀಟ್ ಮಾಡಿದ್ದು, ಈ ಸಂಬಂಧ...

ಚೆನ್ನೈ:  ಡೆಂಗ್ಯೂ ಹರಡುವಿಕೆಯನ್ನು ತಡೆಗಟ್ಟಲು ಬಳಕೆ ಮಾಡಲಾಗುವ ಗಿಡಮೂಲಿಕೆ ನಿಲವೇಂಬು ಕುಡಿನೀರ್ ನ್ನು ಹಂಚದಂತೆ ತಮ್ಮ ಅಭಿಮಾನಿಗಳಿಗೆ ಕರೆ ನೀಡಿ ನಟ ಕಮಲ ಹಾಸನ್ ಟ್ವೀಟ್ ಮಾಡಿದ್ದು, ಈ ಸಂಬಂಧ ಕ್ರಿಮಿನಲ್ ಪ್ರಕರಣ ಎದುರಿಸುವ ಸಾಧ್ಯತೆ ಇದೆ. 
ಗಿಡಮೂಲಿಕೆಗಳ ಫಲಕಾರಿತ್ವದ ಬಗ್ಗೆ ವಿವಾದ ಉಂಟಾಗಿದ್ದು, ಕಮಲ್ ಹಾಸನ್ ಟ್ವೀಟ್ ಗೆ ಸಂಬಂಧಿಸಿದಂತೆ ಅಡ್ವೊಕೇಟ್ ಜಿ. ದೇವರಾಜನ್ ಎಂಬುವವರು ಮದ್ರಾಸ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿರುವ ನ್ಯಾ.ಎಂಎಸ್ ರಮೇಶ್ ಮೇಲ್ನೋಟಕ್ಕೆ ಅಪರಾಧ ಕಂಡುಬಂದರೆ ಪ್ರಕರಣ ದಾಖಲಿಸುವಂತೆ ಚೆನ್ನೈ ಸಿಟಿ ಪೊಲೀಸರಿಗೆ ಸೂಚನೆ ನೀಡಿದ್ದಾರೆ. 
ಡೆಂಗ್ಯೂ ತಡೆಗಟ್ಟಲು ಬಳಕೆ ಮಾಡುತ್ತಿರುವ ಗಿಡಮೂಲಿಕೆಗಳಿಂದ ಅಡ್ಡಪರಿಣಾಮಗಳು ಉಂತಾಗುತ್ತವೆ, ಆದ್ದರಿಂದ ಆ ಗಿಡಮೂಲಿಕೆಗಳನ್ನು ಬಳಕೆ ಮಾಡದಂತೆ ಅಭಿಮಾನಿಗಳಿಗೆ ಕಮಲ್ ಹಾಸನ್ ಕರೆ ನೀಡಿದ್ದರು. ಗಿಡಮೂಲಿಕೆಯ ಬಗ್ಗೆ ಟ್ವೀಟ್ ಮಾಡಿರುವ ಕಮಲ್ ಹಾಸನ್, ಅದರಿಂದ ಅಡ್ದ ಪರಿಣಾಮಗಳು ಉಂಟಾಗುತ್ತವೆ ಎಂಬುದಕ್ಕೆ ನಿರ್ದಿಷ್ಟ ಆಧಾರ ನೀಡಿಲ್ಲ. ಒಂದು ವೇಳೆ ಕಮಲ ಹಾಸನ್ ಅವರೇ ನಿಲವೇಂಬು ಕುಡಿನೀರ್ ನ್ನು ಸೇವಿಸಿ ಅಡ್ಡಪರಿಣಾಮ ಎದುರಿಸಿದ್ದರೆ ಅದರ ಬಗ್ಗೆ ಮಾಹಿತಿ ನೀಡಿ ನಂತರ ಹೇಳಬೇಕಿತ್ತು ಎಂದು ಅಡ್ವೊಕೇಟ್ ಜಿ.ದೇವರಾಜನ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT