ದುನಿಯಾ ವಿಜಯ್ 
ಸಿನಿಮಾ ಸುದ್ದಿ

ಕನ್ನಡ ರಾಜ್ಯೋತ್ಸವಕ್ಕೆ ಕನಕ ಮೊದಲ ಟ್ರೇಲರ್ ಬಿಡುಗಡೆ

ಆರ್ .ಚಂದ್ರು ನಿರ್ದೇಶನದ ದುನಿಯಾ ವಿಜಯ್ ನಟನೆಯ ಕನಕ ಸಿನಿಮಾ ಶೂಟಿಂಗ್ ಪೂರ್ಣದೊಂಡಿದ್ದು, ನವೆಂಬರ್ 1ರ ಕರ್ನಾಟಕ ರಾಜ್ಯೋತ್ಸವದಂದು...

ಬೆಂಗಳೂರು: ಆರ್ ಚಂದ್ರು ನಿರ್ದೇಶನದ ದುನಿಯಾ ವಿಜಯ್ ನಟನೆಯ ಕನಕ ಸಿನಿಮಾ ಶೂಟಿಂಗ್ ಪೂರ್ಣದೊಂಡಿದ್ದು, ನವೆಂಬರ್ 1ರ  ಕರ್ನಾಟಕ ರಾಜ್ಯೋತ್ಸವದಂದು, ಸಿನಿಮಾದ ಮೊದಲ ಟ್ರೇಲರ್ ರಿಲೀಸ್ ಆಗಲಿದೆ.
ವಿಜಯ್, ಸಿನಿಮಾದಲ್ಲಿ ರಾಜ್ ಕುಮಾರ್ ಅವರ ಅಭಿಮಾನಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ, ಹೀಗಾಗಿ ಕನ್ನಡ ರಾಜ್ಯೋತ್ಸವದಂದು ಟ್ರೇಲರ್ ಬಿಡುಗಡೆಯಾಗಲಿದೆ. 
ದುನಿಯಾ ವಿಜಿ ಹಾಗೂ ಹರಿಪ್ರಿಯಾ ನಟಿಸಿರುವ ಸಿನಿಮಾ. ದುನಿಯಾ ವಿಜಿ ಆಟೋ ಡ್ರೈವರ್ ಆಗಿ, ರಾಜ್ ಅಭಿಮಾನಿಯಾಗಿ ಕಾಣಿಸಿಕೊಂಡಿರುವ ಸಿನಿಮಾ ಸೆಟ್ಟೇರಿದ ದಿನದಿಂದ ಕುತೂಹಲ ಹುಟ್ಟಿಸಿದೆ. 
ತಾಜ್‍ಮಹಲ್, ಚಾರ್‍ಮಿನಾರ್, ಮೈಲಾರಿ, ಬ್ರಹ್ಮ, ಮಳೆ.. ಹೀಗೆ ವಿಭಿನ್ನ ಚಿತ್ರಗಳನ್ನು ಕಮರ್ಷಿಯಲ್ ಚೌಕಟ್ಟಿನಲ್ಲಿ ಕಟ್ಟಿಕೊಟ್ಟ ನಿರ್ದೇಶಕ ಆರ್. ಚಂದ್ರು. ಹೀಗಾಗಿಯೇ ಚಂದ್ರು ಮತ್ತು ದುನಿಯಾ ವಿಜಿ ಜುಗಲ್‍ಬಂದಿ ಭಾರಿ ನಿರೀಕ್ಷೆ ಹುಟ್ಟುಹಾಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT