ವಿಕ್ಕಿ 
ಸಿನಿಮಾ ಸುದ್ದಿ

ಓರ್ವ ನಟನಾಗಿ, ನನ್ನ ಸಾಮರ್ಥ್ಯದ ಬಗ್ಗೆ ನನಗೆ ಗೊತ್ತಿರಬೇಕು: ವಿಕ್ಕಿ

ಕೆ ವಿಕ್ಕಿಯವರಿಗೆ ಲಕ್ಕಿಯಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿದೆ. ಸೂರಿ ನಿರ್ದೇಶನದ ಕೆಂಡಸಂಪಿಗೆ ....

ಬೆಂಗಳೂರು: ಕೆ ವಿಕ್ಕಿಯವರಿಗೆ ಲಕ್ಕಿಯಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿದೆ. ಸೂರಿ ನಿರ್ದೇಶನದ ಕೆಂಡಸಂಪಿಗೆ ಚಿತ್ರದಲ್ಲಿ ತಮ್ಮ ನಟನಾ ಸಾಮರ್ಥ್ಯ ತೋರಿಸಿದ್ದ ಹೊಸ ಮುಖ ವಿಕ್ಕಿ ಕಾಲೇಜ್ ಕುಮಾರ್ ಚಿತ್ರದ ಮೂಲಕ ಬೆಳ್ಳಿ ತೆರೆಗೆ ಮತ್ತೆ ಪ್ರವೇಶಿಸಿದ್ದಾರೆ. ಚಿತ್ರದ ಟ್ರೇಲರ್ ಪ್ರೇಕ್ಷಕರ ಮನಗೆದ್ದಿದೆ.
ಈ ಚಿತ್ರದ ನಟನೆ ನಂತರ ವಿಕ್ಕಿಯವರಿಗೆ ಹಲವು ಚಿತ್ರಗಳ ಆಫರ್ ಗಳು ಬರುತ್ತಿದ್ದರೂ ಕೂಡ ಆಯ್ಕೆಯತ್ತ ಗಮನಹರಿಸುತ್ತಿದ್ದಾರೆ. ಕೆಂಡಸಂಪಿಗೆ ಬಂದು ಸುಮಾರು ಎರಡು ವರ್ಷಗಳ ನಂತರ ಕಾಲೇಜ್ ಕುಮಾರ ಚಿತ್ರದಲ್ಲಿ ಅಭಿನಯಿಸಿರುವ ವಿಕ್ಕಿ ಇಷ್ಟು ನಿಧಾನ ಮಾಡಿರುವುದಕ್ಕೆ ಕಾರಣ ನೀಡುತ್ತಾರೆ.
ನಿರ್ದೇಶಕನಾಗಬೇಕೆಂಬ ಆಸೆಯಿಂದ ಚಿತ್ರರಂಗಕ್ಕೆ ಬಂದ ನಾನು ಸೂರಿಯವರ ಜೊತೆ ಕೆಲಸ ಮಾಡಲು ಆರಂಭಿಸಿದೆ. ಅವರು ನಾನು ನಟನಾಗಬಹುದೆಂದು ಗುರುತಿಸಿ ಕೆಂಡಸಂಪಿಗೆಯನ್ನು ಮಾಡಿಸಿದರು. ಎರಡನೇ ಚಿತ್ರಕ್ಕೆ ಸಹಿ ಮಾಡುವ ಮುನ್ನ ನಿರ್ದೇಶಕನಾಗಬೇಕೆ ಅಥವಾ ನಟನೆಯಲ್ಲಿ ಮುಂದುವರಿಯಬೇಕೆ ಎಂದು ನನಗೆ ಗೊಂದಲವುಂಟಾಯಿತು. ನಟನೆಯಲ್ಲಿ ಸ್ವಲ್ಪ ವರ್ಷಗಳ ಕಾಲ ಇರುವಂತೆ ಕೆಲವು ಸ್ನೇಹಿತರು ಸಲಹೆ ನೀಡಿದರು. ಹೀಗಾಗಿ ಕಾಲೇಜು ಕುಮಾರದಲ್ಲಿ ಅಭಿನಯಿಸಿದೆ ಎನ್ನುತ್ತಾರೆ.
ನಟನಾಗಿ ನನ್ನ ಸಾಮರ್ಥ್ಯದ ಬಗ್ಗೆ ನನಗೆ ತಿಳಿದಿರಬೇಕು. ನನ್ನನ್ನು ಯಾರೂ ಹೀರೊ ತರ ಪರಿಗಣಿಸುವುದಿಲ್ಲ. ಪಕ್ಕದ ಮನೆಯ ಹುಡುಗನ ತರಹ ನನ್ನನ್ನು ಪರಿಗಣಿಸುತ್ತಾರೆ. ಹೀರೋನಾದವನಿಗೆ ಉತ್ತಮ ಶರೀರ, ಒಂದು ಸೂಕ್ತ ದೈಹಿಕ ಭಾಷೆ ಮತ್ತು ಇಮೇಜ್ ಇರಬೇಕು ಇವೆಲ್ಲ ನನ್ನಲ್ಲಿಲ್ಲ, ಆದರೆ ನನ್ನಲ್ಲಿ ಬೇರೆ ನಟರಲ್ಲಿ ಇಲ್ಲದಂತಹ ಗುಣವನ್ನು ಪ್ಲಸ್ ಆಗಿ ತೆಗೆದುಕೊಳ್ಳುತ್ತೇನೆ. ಜನರು ನನ್ನನ್ನು ಸೋದರನಾಗಿ, ಸ್ನೇಹಿತನಾಗಿ ಮತ್ತು ಮನೆಯ ಮಗನಾಗಿ ಕಾಣುತ್ತಾರೆ ಎನ್ನುತ್ತಾರೆ ವಿಕ್ಕಿ.
ಮುಂದಿನ ಚಿತ್ರಕ್ಕೆ ರಾಮ ರಾಮ ರೆ ಖ್ಯಾತಿಯ ಸತ್ಯಪ್ರಕಾಶ್ ಸ್ಕೃಪ್ಟ್ ಬರೆದಿದ್ದು ಅದರಲ್ಲಿ ನಟಿಸುವ ಸಾಧ್ಯತೆಯಿದೆ ಎನ್ನುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT