ಕಾವ್ಯ ಮಾಧವನ್ 
ಸಿನಿಮಾ ಸುದ್ದಿ

ಮಲೆಯಾಳಂ ನಟಿ ಅಪಹರಣ: ನಿರೀಕ್ಷಣಾ ಜಾಮೀನು ಕೋರಿದ ನಟ ದಿಲೀಪ್ ಪತ್ನಿ ಕಾವ್ಯ ಮಾಧವನ್

ಹಲವು ಕನ್ನಡ ಚಿತ್ರಗಳಲ್ಲೂ ನಟಿಸಿರುವ ದಕ್ಷಿಣ ಭಾರತದ ಖ್ಯಾತ ನಟಿಯ ಅಪಹರಣ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ...

ಕೊಚ್ಚಿ: ಹಲವು ಕನ್ನಡ ಚಿತ್ರಗಳಲ್ಲೂ ನಟಿಸಿರುವ ದಕ್ಷಿಣ ಭಾರತದ ಖ್ಯಾತ ನಟಿಯ ಅಪಹರಣ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ನಟ ದಿಲೀಪ್ ಅವರ ಪತ್ನಿ ಕಾವ್ಯ ಮಾಧವನ್ ಅವರು ನಿರೀಕ್ಷಣಾ ಜಾಮೀನು ಕೋರಿ ಶನಿವಾರ ಕೇರಳ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಮಲೆಯಾಳಂ ನಟಿ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಈಗಾಗಲೇ ಒಂದು ಬಾರಿ ಪೊಲೀಸ್ ವಿಚಾರಣೆ ಎದುರಿಸಿರುವ ಕಾವ್ಯ ಮಾಧವನ್ ಅವರನ್ನು ತನಿಖೆ ತಂಡ ಬಂಧಿಸುವು ಸಾಧ್ಯತೆ ಇದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಇಂದು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ ಪಲ್ಸರ್ ಸುನಿ ಅಲಿಯಾಸ್ ಸುನಿಲ್ ಕುಮಾರ್ ಗೂ ಹಾಗೂ ಕಾವ್ಯಾ ಮಾಧವನ್ ಗೂ ಸಂಪರ್ಕವಿರುವ ಬಗ್ಗೆ ಸಾಕ್ಷ್ಯಗಳು ದೊರೆತಿವೆ ಎಂದು ತನಿಖಾ ಅಧಿಕಾರಿಗಳು ಹೇಳಿದ್ದಾರೆ.
ತನಿಖಾ ತಂಡದ ಪ್ರಕಾರ, ಕಳೆದ ಫೆಬ್ರವರಿಯಲ್ಲಿ ನಟಿಯನ್ನು ಅಪಹರಿಸುವ ಮುನ್ನ ಕಾವ್ಯ ಮಾಧವನ್ ಅವರ ಮನೆಗೆ ಭೇಟಿ ನೀಡಿದ್ದ ಪಲ್ಸರ್ ಸುನಿ, ಅವರ ತಾಯಿಯಿಂದ 25 ಸಾವಿರ ರುಪಾಯಿ ಮುಂಗಡ ಪಡೆದಿದ್ದ ಎನ್ನಲಾಗಿದೆ.
ಈ ಹಿಂದೆ ಪೊಲೀಸರು ಕಾವ್ಯ ಮಾಧವನ್ ಅವರನ್ನು ದಿಲೀಪ್ ಅವರ ಸ್ವಗೃಹದಲ್ಲಿಯೇ ವಿಚಾರಣೆಗೊಳಪಡಿಸಿದ್ದು, 6 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ಕಾವ್ಯಾ ಅವರು ಹಲವು ಬಾರಿ ಕಣ್ಣೀರು ಹಾಕಿರುವುದಾಗಿ ತಿಳಿದುಬಂದಿತ್ತು.
ಫೆ.17 ರಂದು ರಾತ್ರಿ 7.30 ರ ಸುಮಾರಿಗೆ ತ್ರಿಶೂರ್​ನಿಂದ ಎರ್ನಾಕುಲಂಗೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ನಟಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಲಾಗಿತ್ತು. ನಂತರ ರಾತ್ರಿ ಪರಿವಟ್ಟಲಂ ಎಂಬಲ್ಲಿ ನಟಿಯನ್ನು ಕಾರಿನಲ್ಲೇ ಬಿಟ್ಟು ಆರೋಪಿಗಳು ಪರಾರಿಯಾಗಿದ್ದರು. ನಂತರ ನಟಿ ನಿರ್ದೇಶಕರೊಬ್ಬರ ಮನೆಗೆ ತೆರಳಿ ಅಲ್ಲಿಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣ ಸಾಕಷ್ಟು ಸುದ್ದಿಗೆ ಗ್ರಾಸವಾಗಿತ್ತು. ಪ್ರಕರಣ ಸಂಬಂಧ 11ನೇ ಆರೋಪಿಯಾಗಿ ನಟ ದಿಲೀಪ್ ಅವರನ್ನು ಜುಲೈ10 ರಂದು ಬಂಧಿಸಲಾಗಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT