ಹಿರೇಗೌಡ 
ಸಿನಿಮಾ ಸುದ್ದಿ

ತಿಥಿ ಸಂಭಾಷಣೆಕಾರ ಈರೇಗೌಡರ ಬಲೆಕೆಂಪಾ ಚಿತ್ರದಲ್ಲಿ ನೈಜ್ಯ ಚಿತ್ರಣ ಅನಾವರಣ

ರಾಷ್ಟ್ರ ಪ್ರಶಸ್ತಿ ಪಡೆದ ತಿಥಿ ಚಿತ್ರಕ್ಕೆ ಸಂಭಾಷಣೆ ಬರೆದಿದ್ದ ಈರೇಗೌಡ ಅವರು ಬಲೆ ಕೆಂಪಾ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ...

ರಾಷ್ಟ್ರ ಪ್ರಶಸ್ತಿ ಪಡೆದ ತಿಥಿ ಚಿತ್ರಕ್ಕೆ ಸಂಭಾಷಣೆ ಬರೆದಿದ್ದ ಈರೇಗೌಡ ಅವರು ಬಲೆ ಕೆಂಪಾ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. 
ಬಲೆ ಕೆಂಪಾ ಚಿತ್ರದ ಪೋಸ್ಟ್ ಪ್ರೋಡಕ್ಷನ್ ನಲ್ಲಿ ತೊಡಗಿರುವ ಈರೇಗೊಡ್ ಅವರು ಮಂಡ್ಯ, ಬೆಂಗಳೂರು ಮತ್ತು ಮುಂಬೈನಲ್ಲಿ ಸುತ್ತು ಹಾಕುತ್ತಿದ್ದಾರೆ. ಇನ್ನು ಈರೇಗೌಡ ಅವರು ತಮ್ಮ ಚಿತ್ರಕ್ಕಾಗಿ ಬಾಲಿವುಡ್ ನಿರ್ಮಾಪಕರೊಬ್ಬರಿಗೆ ಗಾಳ ಹಾಕಿದ್ದು ಅವರು ಕನ್ನಡದಲ್ಲಿ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರಂತೆ. 
ನಿರ್ಮಾಪಕರು ನಿರ್ದೇಶಕರಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಿದ್ದಾರೆ. ನಿರ್ಮಾಪಕರು ಚಿತ್ರದ ಪ್ರಮೋಷನ್ ಗಾಗಿ ಭಾರೀ ಕಸರತ್ತು ನಡೆಸಲಿದ್ದು ಚಿತ್ರದ ಕೆಲಸಗಳು ಪೂರ್ಣಗೊಳ್ಳುವುದನ್ನೇ ಕಾಯುತ್ತಿದ್ದಾರೆ ಎಂಬುದನ್ನು ಈರೇಗೌಡ ಅವರ ಆಪ್ತರು ಹೇಳಿದ್ದಾರೆ. 
ಬಲೆಕೆಂಪಾ ಚಿತ್ರಕ್ಕಾಗಿ ನಿರ್ದೇಶಕರು ಮಂಡ್ಯದವರನ್ನೇ ಆಯ್ಕೆ ಮಾಡಿಕೊಳ್ಳಲಿದ್ದು ಈ ಕಲಾವಿದರೆಲ್ಲಾ ಇದೇ ಮೊದಲ ಬಾರಿಗೆ ಕ್ಯಾಮರಾ ಮುಂದೆ ಅಭಿನಯಿಸುತ್ತಿದ್ದಾರಂತೆ. ಬಲೆಕೆಂಪಾ ಚಿತ್ರ ತಿಥಿ ಚಿತ್ರದಂತೆ ಇರುವುದಿಲ್ಲ. ಬದಲಿಗೆ ಚಿತ್ರದ ಮೇಕಿಂಗ್ ತಿಥಿಯಂತೆ ಇರಲಿದೆಯಂತೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT