ಕಥಾ ಸಂಗಮ ಪೋಸ್ಟರ್ 
ಸಿನಿಮಾ ಸುದ್ದಿ

ರಿಷಬ್ ಶೆಟ್ಟಿ ಕಥಾ ಸಂಗಮಕ್ಕೆ ಚಂದ್ರಜಿತ್ ಬೆಳ್ಳಿಯಪ್ಪ ಸಾಥ್

ಎಂಜಿನೀಯರ್ ಕೆಲಸ ಬಿಟ್ಟು ನಿರ್ಮಾಪಕರಾಗಿರುವ ಚಂದ್ರಜಿತ್ ಬೆಳ್ಳಿಯಪ್ಪ ರಕ್ಷಿತ್ ಶೆಟ್ಟಿ ಮತ್ತು ರಿಷಬ್ ಶೆಟ್ಟಿ ಕ್ಯಾಂಪ್ ಸೇರಿದ್ದಾರೆ. ರಿಷಬ್ ಶೆಟ್ಟಿ ನಿರ್ದೇಶನದ ಕಥಾ ...

ಬೆಂಗಳೂರು: ಎಂಜಿನೀಯರ್ ಕೆಲಸ ಬಿಟ್ಟು ನಿರ್ಮಾಪಕರಾಗಿರುವ ಚಂದ್ರಜಿತ್ ಬೆಳ್ಳಿಯಪ್ಪ ರಕ್ಷಿತ್ ಶೆಟ್ಟಿ ಮತ್ತು ರಿಷಬ್ ಶೆಟ್ಟಿ ಕ್ಯಾಂಪ್ ಸೇರಿದ್ದಾರೆ. ರಿಷಬ್ ಶೆಟ್ಟಿ ನಿರ್ದೇಶನದ ಕಥಾ ಸಂಗಮಕ್ಕೆ ಚಂದ್ರಜಿತ್ ಕೈಜೋಡಿಸಿದ್ದಾರೆ.
ಕಥಾ ಸಂಗಮ ಸಿನಿಮಾವನ್ನು ಹಿರಿಯ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರಿಗೆ ಅರ್ಪಿಸಲಾಗುತ್ತಿದೆ. 7 ಸಣ್ಣ ಕಥೆಗಳನ್ನು ಒಟ್ಟುಗೂಡಿಸಿ ಈ ಸಿನಿಮಾ ತಯಾರಾಗುತ್ತಿದೆ. ಈ ಸಿನಿಮಾಗಾಗಿ 7 ನಿರ್ದೇಶಕರು ಕೆಲಸ ಮಾಡಲಿದ್ದಾರೆ. 
ಈ ಸಿನಿಮಾದಲ್ಲಿ  ಕಿಶೋರ್, ಯಜ್ಞಾ ಶೆಟ್ಟಿ ಮತ್ತು ಬಾಲನಟಿ ಮೃದುನಿಕಾ ಅಭಿನಯಿಸಲಿದ್ದಾರೆ, ಗಂಡ, ಹೆಂಡತಿ ಹಾಗೂ ಮಗುವಿನ ಕಥೆಯುಳ್ಳ ಸಿನಿಮಾ ಇದಾಗಿದೆ.
ಮಗಳೊಬ್ಬಳು ತನ್ನ ತಂದೆಯನ್ನು ಯಾವಾಗಲೂ ಹೀರೋ ಎಂಬಂತೆ ನೋಡುತ್ತಾಳೆ, ಆದರೆ ತನ್ನ ಮಗಳಿಗಾಗಿ ಆತ ತಾನು ಹೀರೋ ಎಂಬದನ್ನು ತೋರಿಸುವ ಅಗತ್ಯವಿಲ್ಲ, ಪ್ರತಿಯೊಬ್ಬ ತಂದೆಯೂ ತಮ್ಮ ಮಕ್ಕಳಿಗೆ ಸಣ್ಣ ಪುಟ್ಟ ಸಂತೋಷ ನೀಡಲು ಪ್ರಯತ್ನಿಸುತ್ತಿರುತ್ತಾರೆ. ಯಜ್ಞಾ ಶೆಟ್ಟಿ ಒಬ್ಬ ರಕ್ಷಣಾತ್ಮಕ ತಾಯಿಯ ಪಾತ್ರದಲ್ಲಿ ನಟಿಸಿದ್ದಾರೆ.
ಗಗನ್ ಬಡೇರಿಯಾ ಸಂಗೀತ ನೀಡಿದ್ದು, ಅರವಿಂದ್ ಕಶ್ಯಪ್ ಸಿನಿಮಾಟೋಗ್ರಫಿ ಇದೆ, ಸದ್ಯ ಸಿನಿಮಾ ಇನ್ನೂ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಪರಂವಾ ಸ್ಟುಡಿಯೋ ಪ್ರೊದಕ್ಷನ್ ನಲ್ಲಿ ಕೆಲಸ ಮಾಡುವುದು ದೊಡ್ಡ ಜವಾಬ್ದಾರಿಯಾಗಿದೆ ಎಂದು ಚಂದ್ರಜಿತ್ ಹೇಳಿದ್ದಾರೆ.
ನಾನೊಬ್ಬ ಬರಹಗಾರ, ಯಾವತ್ತೂ ನಾನು ನಿರ್ದೇಶಕವಾಗಬೇಕು ಎಂದು ಬಯಸಿರಲಿಲ್ಲ, ಈ ಅವಕಾಶ ನನಗೆ ನೀಡಿದ್ದಕ್ಕೆ ಚಂದ್ರಜಿತ್ ಸಂತಸ ವ್ಯಕ್ತ ಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT