ಸಿಮ್ರಾನ್ ನಾಟೇಕರ್ 
ಸಿನಿಮಾ ಸುದ್ದಿ

'ನೋ ಸ್ಮೋಕಿಂಗ್' ಹುಡುಗಿ ಸಿಮ್ರಾನ್‌ ನಾಟೇಕರ್‌ 'ಕಾಜಲ್ ' ಮೂಲಕ ಸ್ಯಾಂಡಲ್ ವುಡ್ ಪ್ರವೇಶ

ಥಿಯೇಟರ್ ಗಳಲ್ಲಿ ಪ್ರತಿ ಚಿತ್ರದ ಆರಂಭಕ್ಕೂ ಮುನ್ನ ‘ಈ ನಗರಕ್ಕೆ ಏನಾಗಿದೆ?’ ಎನ್ನುವ ಜಾಹೀರಾತಿನಲ್ಲಿ ಮುದ್ದು ಹುಡುಗಿ ಪಾತ್ರದಲ್ಲಿ ನಟಿಸಿದ್ದ ...

ಬೆಂಗಳೂರು: ಥಿಯೇಟರ್ ಗಳಲ್ಲಿ  ಪ್ರತಿ ಚಿತ್ರದ ಆರಂಭಕ್ಕೂ ಮುನ್ನ ‘ಈ ನಗರಕ್ಕೆ ಏನಾಗಿದೆ?’ ಎನ್ನುವ ಜಾಹೀರಾತಿನಲ್ಲಿ ಮುದ್ದು ಹುಡುಗಿ ಪಾತ್ರದಲ್ಲಿ ನಟಿಸಿದ್ದ ಸಿಮ್ರಾನ್‌ ನಾಟೇಕರ್‌ ಸದ್ಯ ‘ಕಾಜಲ್‌’ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಪ್ರವೇಶಿಸಿದ್ದಾರೆ..
8 ವರ್ಷವಿರುವಾಗ ಧೂಮಪಾನ ನಿಷೇಧ ಕುರಿತ ಜಾಹೀರಾತಿನಲ್ಲಿ ನಟಿಸಿದ್ದ ಸಿಮ್ರಾನ್ ಕನ್ನಡದ ಕಾಜಲ್ ಸಿನಿಮಾದಲ್ಲಿ ಸಂತೋಷ್ ಬಾಲರಾಜ್ ಗೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಆನೇಕಲ್ ಬಾಲರಾಜ್ ನಿರ್ಮಿಸುತ್ತಿರುವ ಸಿನಿಮಾಗೆ ಸುಮಂತ್ ಕ್ರಾಂತಿ ನಿರ್ದೇಶನ ಮಾಡಿದ್ದಾರೆ, ಧೂಮಪಾನ ನಿಷೇದ ಕುರಿತ ಜಾಹೀರಾತಿನಲ್ಲಿ ತಂದೆಯ ಆರೋಗ್ಯದ ಬಗ್ಗೆ ಕಳವಳ ವ್ಯಕ್ತ ಪಡಿಸುವ ಮುಗ್ಧ ಬಾಲಕಿ ಪಾತ್ರದಲ್ಲಿ ಸಿಮ್ರಾನ್ ನಟಿಸಿದ್ದಾರೆ, ಮೊದಲು ನಟನೆಗೆ ಬರಬೇಕು ಎಂಬ ಯಾವುದೇ ಯೋಜನೆ ಇರಲಿಲ್ಲ, ಆದರೆ ಹಲವು ಟಿವಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ನಂತರ ಸಿನಿಮಾ ಜಗತ್ತಿಗೆ ಕಾಲಿಡಬೇಕೆಂಬ ಬಯಕೆಯಾಯಿತು ಎಂದು ಹೇಳಿದ್ದಾರೆ.
ನನಗೆ ಹಿಂದಿನಿಂದಲೂ ದಕ್ಷಿಣ ಭಾರತದ ಸಿನಿಮಾಗಳಲ್ಲಿ ನಟಿಸಬೇಕೆಂಬ ಆಸೆ ಇತ್ತು. ಆದರೆ ಹೇಗೆ ಮತ್ತು ಯಾರನ್ನು ಸಂಪರ್ಕಿಸಬೇಕೆಂದು ಗೊತ್ತಿರಲಿಲ್ಲ. ಆ ಸಂದರ್ಭದಲ್ಲಿ ನನಗೆ "ಕಾಜಲ್‌' ಚಿತ್ರದ ಅವಕಾಶ ಬಂತು. ಕಥೆ ಹಾಗೂ ನನ್ನ ಪಾತ್ರ ಇಷ್ಟವಾಗಿ ಒಪ್ಪಿಕೊಂಡೆ. ನಿಜ ಹೇಳಬೇಕೆಂದರೆ ನಾನು "ಬಾಹುಬಲಿ' ಚಿತ್ರ ನೋಡಿ ಫಿದಾ ಆಗಿದ್ದೆ. ಆ ನಂತರ ನನಗೆ ಸೌತ್‌ ಇಂಡಿಯನ್‌ ಸಿನಿಮಾಗಳಲ್ಲಿ ನಟಿಸಬೇಕೆಂಬ ಆಸೆ ಬಂತು ಎಂದು ತಿಳಿಸಿದ್ದಾರೆ. 
‘ಕಾಜೋಲ್’ ಚಿತ್ರದಲ್ಲಿ ಅನಿವಾಸಿ ಭಾರತೀಯ (ಎನ್‌ಆರ್‌ಐ) ಪಾತ್ರದಲ್ಲಿ ನಟಿಸಿದ್ದೇನೆ. ಇದೊಂದು ಸುಮಧುರ ಪ್ರೇಮ ಕಥನ. ಅಮೆರಿಕಾದಿಂದ ಇಲ್ಲಿನ ಹಳ್ಳಿಯೊಂದಕ್ಕೆ ಬರುವ ಹುಡುಗಿಯಾಗಿ ಕಾಣಿಸಿಕೊಂಡಿದ್ದೇನೆ. ಇಲ್ಲಿಗೆ ಬಂದ ನಂತರ ಏನೆಲ್ಲಾ ಆಗುತ್ತದೆ, ಅಮೆರಿಕಾದಲ್ಲಿ ಹುಟ್ಟಿ ಬೆಳೆದ ನಾನು ಇಲ್ಲಿನ ವಾತಾರವರಣಕ್ಕೆ ಹೇಗೆ ಹೊಂದಿಕೊಳ್ಳುತ್ತೇನೆ ಎಂಬ ಅಂಶದೊಂದಿಗೆ ನನ್ನ ಪಾತ್ರ ಸಾಗುತ್ತದೆ ಎಂದು ವಿವರಿಸಿದ್ದಾರೆ. 
ಕಾಜಲ್ ಗಾಗಿ ಮೂರು ಹಿಂದಿ ಚಿತ್ರಗಳನ್ನು ತಿರಸ್ಕರಿಸಿ ಕನ್ನಡ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. 
ಪ್ರಿಯಾಂಕಾ ಚೋಪ್ರಾ ತನ್ನ ರೋಲ್ ಮಾಡೆಲ್ ಎಂದು ಸಿಮ್ರಾನ್ ಹೇಳಿದ್ದಾರೆ. 9ನೇ ತರಗತಿ ಪರೀಕ್ಷೆ ಬರೆದಿರುವ ಸಿಮ್ರಾನ್ ಬಾಲಿವುಡ್ ಕನಸು ಕಂಡಿದ್ದಾರೆ,
ಮುಂಬಯಿಯಲ್ಲಿ ನನಗೆ ಟಿವಿ ಶೋ ಇದೆ, ಹೀಗಿದ್ದರೂ ಕಾಜಲ್ ಸಿನಿಮಾಗಾಗಿ ಡೇಟ್ ಹೊಂದಾಣಿಕೆ ಮಾಡಿಕೊಳ್ಳುತ್ತೇನೆ, ಕೆಲಸ ಮಾಡುವುದು ನನ್ನ ಅಭಿರುಚಿ, ಟಿವಿಯಲ್ಲಿ ನನ್ನ ನೋಡಿಕೊಳ್ಳುದಕ್ಕಿಂತ 70 ಮಿಮೀಟರ್ ಪರದೆ ಮೇಲೆ ನೋಡಲು ನನಗೆ ಹೆಮ್ಮೆಯಾಗುತ್ತದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT