ತರುಣ್ ಸುದೀರ್-ದರ್ಶನ್ 
ಸಿನಿಮಾ ಸುದ್ದಿ

ತರುಣ್ ಸುದೀರ್ ನಿರ್ದೇಶನದ ದರ್ಶನ್ ಚಿತ್ರಕ್ಕೆ ಉಮಾಪತಿ ನಿರ್ಮಾಪಕ

ದರ್ಶನ್ ಮತ್ತು ನಿರ್ದೇಶಕ ತರುಣ್ ಸುದೀರ್ ಸಿನಿಮಾ ಮಾಡುತ್ತಿರುವುದು ಹಳೆ ವಿಷಯ. ಇದಕ್ಕೆ ಉಮಾಪತಿ...

ದರ್ಶನ್ ಮತ್ತು ನಿರ್ದೇಶಕ ತರುಣ್ ಸುದೀರ್ ಸಿನಿಮಾ ಮಾಡುತ್ತಿರುವುದು ಹಳೆ ವಿಷಯ. ಇದಕ್ಕೆ ಉಮಾಪತಿ ಬಂಡವಾಳ ಹೂಡುತ್ತಿದ್ದಾರೆ ಎಂಬುದು ಇತ್ತೀಚಿನ ಸುದ್ದಿ.

ಆರಂಭದಲ್ಲಿ ಉಮಾಪತಿ ನಿರ್ದೇಶಕ ಪ್ರೇಮ್ ಅವರ ಚಿತ್ರವನ್ನು ನಿರ್ಮಾಣ ಮಾಡುತ್ತಾರೆ ಎನ್ನಲಾಗುತ್ತಿತ್ತು. ಆದರೆ ಇದೀಗ ತರುಣ್ ನಿರ್ದೇಶನದ ದರ್ಶನ್ ಸಿನಿಮಾಕ್ಕೆ ಉಮಾಪತಿ ಬಂಡವಾಳ ಹೂಡುತ್ತಿದ್ದಾರೆ.

ಚೌಕ ನಿರ್ದೇಶಕ ತರುಣ್ ಸುದೀರ್ ವರ್ಷದ ಹಿಂದೆಯೇ ದರ್ಶನ್ ರಿಂದ ಗ್ರೀನ್ ಸಿಗ್ನಲ್ ಪಡೆದಿದ್ದರು. ಈಗಾಗಲೇ ಸ್ಕ್ರಿಪ್ಟ್ ಸಿದ್ದವಾಗಿದ್ದು ಯಾವಾಗ ಬೇಕಾದರೂ ಯೋಜನೆ ಆರಂಭಿಸಬಹುದು. ಮುನಿರತ್ನ ಅವರ ಕುರುಕ್ಷೇತ್ರದ ಡಬ್ಬಿಂಗ್ ಮತ್ತು ಹೊಸ ಚಿತ್ರ ಯಜಮಾನದಲ್ಲಿ ಬ್ಯುಸಿಯಾಗಿರುವ ದರ್ಶನ್ ಏಪ್ರಿಲ್ 6ರಿಂದ ಎರಡನೇ ಶೆಡ್ಯೂಲ್ ಚಿತ್ರೀಕರಣ ಆರಂಭಿಸಲಿದ್ದಾರೆ. ಅವರ ಮುಂದಿನ ಚಿತ್ರ ನಿರ್ಮಾಪಕ ಸಂದೇಶ್ ನಾಗರಾಜ್ ಜೊತೆಗೆ, ನಂತರ ಸುದೀರ್ ಪ್ರಾಜೆಕ್ಟ್ ನ್ನು ಕೈಗೆತ್ತಿಕೊಳ್ಳಲಿದ್ದಾರೆ.

ಚಿತ್ರದ ಬಗ್ಗೆ ಹೆಚ್ಚಿನ ವಿವರ ನೀಡುವುದು ಸದ್ಯಕ್ಕೆ ಸಾಧ್ಯವಿಲ್ಲವಾದರೂ ಇದರ ಅಧಿಕೃತ ಘೋಷಣೆಗೆ ತರುಣ್ ಸುಧೀರ್ ಮತ್ತು ಉಮಾಪತಿ ಕಾಯುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT