ನಟಿ ಜಯಂತಿ 
ಸಿನಿಮಾ ಸುದ್ದಿ

ಕನ್ನಡ ಮಾಧ್ಯಮಗಳು ಜವಾಬ್ದಾರಿಯಿಂದ ವರ್ತಿಸಿವೆ: ನಟಿ ಜಯಂತಿ

ನಗರದ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ನಟಿ ಜಯಂತಿ ಶುಕ್ರವಾರ ಆಸ್ಪತ್ರೆಯಿಂದ ....

ಬೆಂಗಳೂರು: ನಗರದ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ನಟಿ ಜಯಂತಿ ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಇಂದು ಮಾಧ್ಯಮದ ಜತೆ ಮಾತನಾಡಿದ್ದಾರೆ.

ನಾನು ಆರೋಗ್ಯವಾಗಿದ್ದೇನೆ. ವಿಕ್ರಂ ಆಸ್ಪತ್ರೆಯ ವೈದ್ಯರು ನನ್ನನ್ನು ಚೆನ್ನಾಗಿ ನೋಡಿಕೊಂಡಿರುವುದಕ್ಕೆ ನಾನಿಂದು ಗುಣಮುಖಳಾಗಿ ಇಂದು ನಿಮ್ಮ ಮುಂದೆ ಕುಳಿತಿದ್ದೇನೆ. ನನ್ನ ಆರೋಗ್ಯಕ್ಕಾಗಿ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದಗಳು ಎಂದರು.

ಬೇರೆ ಭಾಷೆಯ ಚಾನೆಲ್ ಗಳು ನನ್ನ ಆರೋಗ್ಯದ ಬಗ್ಗೆ ಏನೇನೋ ವಿಷಯಗಳನ್ನು ಸುಳ್ಳು ವದಂತಿಗಳನ್ನು ಹಬ್ಬಿಸಿದವು. ಆದರೆ ಕನ್ನಡ ಮಾಧ್ಯಮಗಳು ಮತ್ತು ಟಿವಿ ಚಾನೆಲ್ ಗಳು ಬಹಳ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿದ್ದಾರೆ. ಇಂದು ನನಗೆ ಕನ್ನಡ ಮಾಧ್ಯಮಗಳ ಮುಂದೆ ಮಾತನಾಡಲು ಧೈರ್ಯ ಬಂದಿದೆ ಎಂದು ಜಯಂತಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಉಸಿರಾಟದ ತೊಂದರೆಯಿಂದ ಕಳೆದ 12  ದಿನಗಳ ಹಿಂದೆ ವಿಕ್ರಂ ಆಸ್ಪತ್ರೆಯಲ್ಲಿ ಜಯಂತಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರನ್ನು ಮನೆಗೆ ಕಳುಹಿಸಲಾಗುವುದು ಎಂದು ವಿಕ್ರಂ ಆಸ್ಪತ್ರೆ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT