ಟಿಎಸ್ ರಂಗಾ 
ಸಿನಿಮಾ ಸುದ್ದಿ

ಪ್ರಸಿದ್ದ ರಂಗಕರ್ಮಿ, ನಿರ್ದೇಶಕ ಟಿಎಸ್ ರಂಗಾ ಇನ್ನಿಲ್ಲ

ಹಿರಿಯ ನಿರ್ದೇಶಕ, ರಂಗಕರ್ಮಿ ಟಿ.ಎಸ್‌. ರಂಗಾ (69) ಬೆಂಗಳೂರಿನ ತಮ್ಮ ನಿವಾಸದಲ್ಲಿ ಇಂದು ವಿಧಿವಶರಾಗಿದ್ದಾರೆ.

ಬೆಂಗಳೂರು: ಹಿರಿಯ ನಿರ್ದೇಶಕ, ರಂಗಕರ್ಮಿ ಟಿ.ಎಸ್‌. ರಂಗಾ (69) ಬೆಂಗಳೂರಿನ ತಮ್ಮ ನಿವಾಸದಲ್ಲಿ ಇಂದು ವಿಧಿವಶರಾಗಿದ್ದಾರೆ.
ಕೆಲವು ಕಾಲದಿಂಡ ಅನಾರೋಗ್ಯಕ್ಕೆ ತುತ್ತಾಗಿದ್ದ ರಂಗಾ ಪತ್ನಿ, ಮಗಳು, ಅಳಿಯ ಸೇರಿ ಅಪಾರ ಶಿಷ್ಯರನ್ನು ಅಗಲಿದ್ದಾರೆ.
ರಂಗಭೂಮಿಯ ಹಿನ್ನೆಲೆಯಿಂದ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದ ರಂಗಾ ಬಿ.ವಿ.ಕಾರಂತ್‌ ಅವರಿಂದ ತರಬೇತಿ ಹೊಂದಿದ್ದರು. ಹಯವದನ, ಸತ್ತವರ ನೆರಳು, ಇನ್ನೂ ಕೆಲವು ನಾಟಕಗಳಲ್ಲಿ ಅಭಿನಯಿಸಿದ್ದ ರಂಗಾ ಪ್ರಯೋಗ ಎನ್ನುವ ಹೆಸರಲ್ಲಿ ತಮ್ಮದೇ ರಂಗತಂಡವನ್ನು ಮುನ್ನೆಡೆಸಿದ್ದರು.
‘ಗೀಜಗನ ಗೂಡು’ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ್ದ ರಂಗಾ ತಮ್ಮ ಪ್ರಥಮ ಚಿತ್ರದಲ್ಲಿಯೇ ಉತ್ತಮ ಹೆಸರು ಗಳಿಸಿದ್ದರು. ಉತ್ತರ ಕರ್ನಾಟಕದ ಕಥೆಯನ್ನಾಧರಿಸಿದ್ದ ಈ ಚಿತ್ರಭಾರತೀಯ ಪನೋರಮಾ ಚಿತ್ರೋತ್ಸವದಲ್ಲಿ ಪ್ರದರ್ಶನ ಕಂಡ ಮೊದಲ ಚಿತ್ರ ಎನ್ನುವ ಖ್ಯಾತಿ ಗಳಿಸಿತ್ತು.
ಮುಂದೆ ’ಸಾವಿತ್ರಿ' ಚಿತ್ರದ ಮುಖೇನ ಹಳ್ಳಿಗರ ಜೀವನ ಪದ್ದತಿಯನ್ನು ತೆರೆದಿಡುವ ಪ್ರಯತ್ನ ಮಾಡಿದ್ದರು. 
ಕನ್ನಡ ಮಾತ್ರವಲ್ಲ ಹಿಂದಿಯಲ್ಲಿಯೂ ಚಿತ್ರ ತಯಾರಿಸಿದ್ದ ರಂಗಾ ಹಿಂದಿಯಲ್ಲಿ ‘ಗಿದ್ದ್‌’ ಚಿತ್ರವನ್ನು ನಿರ್ದೇಶಿಸಿದ್ದರು ಇದರಲ್ಲಿ ಬಾಲಿವುಡ್ ನ ಖ್ಯಾತ ನಟರಾದ  ಓಂ ಪುರಿ, ನಾನಾ ಪಾಟೇಕರ್‌, ಸ್ಮಿತಾ ಇನ್ನೂ ಮೊದಲಾದವರು ಅಭಿನಯಿಸಿದ್ದರು.
1982ರಲ್ಲಿ ಗದಗ ಸುತ್ತಮುತ್ತ ಪರಿಶಿಷ್ಟ ಜಾತಿ–ಪಂಗಡದವರ ಕುರಿತು ‘ನೊಂದವರ ಹಾಡು’ ಸಾಕ್ಯ್ಷಚಿತ್ರದ ಮೂಲಕ ಉಮಾಶ್ರೀ ಅವರನ್ನು ಮೊಟ್ಟ ಮೊದಲ ಬಾರಿಗೆ ಕ್ಯಾಮೆರಾ ಎದುರು ನಿಲ್ಲಿಸಿದ ಅಗ್ಗಳಿಕೆ ರಂಗಾ ಅವರದ್ದಾಗಿತ್ತು.
 ಟಿ.ಎಸ್‌.ನಾಗಾಭರಣ ನಿರ್ದೇಶನದ, 'ಗ್ರಹಣ’ (1978) ಚಿತ್ರದ ಚಿತ್ರಕಥೆಗಾಗಿ ರಂಗಾ ರಾಷ್ಟ್ರ ಪ್ರಶಸ್ತಿಯನ್ನು ಪಡೆದಿದ್ದರು. 
ನಿರ್ದೇಶಕ ನಾಗಾಭರಣ, ನಟರಾದ ಸುಂದರ್ ರಾಜ್ ಸೇರಿ ಹಲವು ಗಣ್ಯರು ನಿಧನರಾದ ರಂಗಾ ಅವರ ಅಂತಿಮ ದರ್ಶನ ಪಡೆದರು.ಭಾನುವಾರ ಸಂಜೆ ರಂಗಾ ಅವರ ಅಂತ್ಯ ಸಂಸ್ಕಾರ ಸಹ ಜರುಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT