ನಟ ಶ್ರೀರೆಡ್ಡಿ ಮತ್ತು ಮಾ ಅಸೋಸಿಯೇಷನ್ 
ಸಿನಿಮಾ ಸುದ್ದಿ

ಕಾಸ್ಟಿಂಗ್ ಕೌಚ್ ವಿರೋಧಿಸಿ ಅರೆ ಬೆತ್ತಲಾಗಿದ್ದ ನಟಿಗೆ ಸದಸ್ಯತ್ವ ಇಲ್ಲ: ತೆಲುಗು ಚಲನಚಿತ್ರ ಕಲಾವಿದರ ಸಂಘ

ತೆಲುಗು ಚಿತ್ರರಂಗದಲ್ಲಿ ಕೆಲವು ನಿರ್ಮಾಪಕರು ಮತ್ತು ನಿರ್ದೇಶಕರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದ ನಟಿ ಶ್ರೀ ರೆಡ್ಡಿಗೆ ಸದಸ್ಯತ್ವ ನೀಡಲು ಸಾಧ್ಯವಿಲ್ಲ ಎಂದು ಮೂವಿ ಆರ್ಟಿಸ್ಟ್​ ಅಸೋಸಿಯೇಷನ್​ (ಎಂಎಎ) ತಿಳಿಸಿದೆ.

ಹೈದರಾಬಾದ್​: ತೆಲುಗು ಚಿತ್ರರಂಗದಲ್ಲಿ ಕೆಲವು ನಿರ್ಮಾಪಕರು ಮತ್ತು ನಿರ್ದೇಶಕರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದ ನಟಿ ಶ್ರೀ ರೆಡ್ಡಿಗೆ ಸದಸ್ಯತ್ವ ನೀಡಲು ಸಾಧ್ಯವಿಲ್ಲ ಎಂದು ಮೂವಿ ಆರ್ಟಿಸ್ಟ್​ ಅಸೋಸಿಯೇಷನ್​ (ಎಂಎಎ) ತಿಳಿಸಿದೆ.
ಶ್ರೀ ರೆಡ್ಡಿ ಅವರು ಸಾರ್ವಜನಿಕವಾಗಿ ತೋರಿದ ವರ್ತನೆಯಿಂದಾಗಿ ಸಂಘ ಮುಜುಗರಕ್ಕೀಡಾಗಿದ್ದು, ಅವರ ದುರ್ವರ್ತನೆಯಿಂದಾಗಿಯೇ ಅವರಿಗೆ ಸದಸ್ಯತ್ವ ನೀಡಲು ಸಾದ್ಯವಿಲ್ಲ. ಅವರು ಈ ಮೊದಲು ಸಂಘದ ಸದಸ್ಯತ್ವಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಅವರು ಸಲ್ಲಿಸಿದ್ದ ಅರ್ಜಿ ಸಮರ್ಪಕವಾಗಿರಲಿಲ್ಲ ಎಂದು ಸಂಘದ ಅಧಿಕಾರಿ ಶಿವಾಜಿ ರಾಜ ಅವರು ತಿಳಿಸಿದ್ದಾರೆ. ಒಂದು ವೇಳೆ ಶ್ರೀರೆಡ್ಡಿ ಕುರಿತು ಸಂಘ ಮೃದು ಧೋರಣೆ ಅನುಸರಿಸಿದರೆ, ಭವಿಷ್ಯದ ನಟ ನಟಿಯರೂ ಇದೇ ದಾರಿ ತುಳಿಯುವ ಅಪಾಯವಿದೆ. ಹೀಗಾಗಿ ಶ್ರೀರೆಡ್ಡಿ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಶ್ರೀ ರೆಡ್ಡಿ ಅವರು ಶನಿವಾರ ತೆಲುಗು ಫಿಲಂ ಚೇಂಬರ್​ ಆಫ್​ ಕಾಮರ್ಸ್​ ಕಚೇರಿಯ ಮುಂದೆ ಚಿತ್ರ ನಿರ್ಮಾಪಕರು ಮತ್ತು ನಿರ್ದೇಶಕರ ವಿರುದ್ಧ ಘೋಷಣೆ ಕೂಗಿ ಅರಬೆತ್ತಲಾಗಿ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ಅವರು ಸಿನಿಮಾದಲ್ಲಿ ಅವಕಾಶ ನೀಡುವುದಾಗಿ ನಗ್ನವಾದ ಫೋಟೋ ಮತ್ತು ವಿಡಿಯೋ ಕಳುಹಿಸುವಂತೆ ಹಲವರು ಬೇಡಿಕೆ ಒಡ್ಡಿದ್ದರು. ಬೇರೆ ದಾರಿ ಕಾಣದೆ ಹಾಗೆ ನಡೆದುಕೊಂಡರೂ ಸಹ ನಂತರ ಸಿನಿಮಾದಲ್ಲಿ ಅವಕಾಶ ನೀಡಿರಲಿಲ್ಲ ಎಂದು ಆರೋಪಿಸಿದ್ದರು.
ಇನ್ನು ನಟಿ ಶ್ರೀರೆಡ್ಡಿ ವಿರುದ್ಧ ಹೈದರಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲ ಚಟುವಟಿಕೆ ಪ್ರಕರಣ ಸಂಬಂಧ ದೂರು ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT