ಹುಚ್ಚ ವೆಂಕಟ್ 
ಸಿನಿಮಾ ಸುದ್ದಿ

ರಾಜರಾಜೇಶ್ವರಿ ನಗರದಿಂದ ಸ್ವತಂತ್ರ್ಯ ಅಭ್ಯರ್ಥಿಯಾಗಿ ಹುಚ್ಚ ವೆಂಕಟ್ ಸ್ಪರ್ಧೆ

ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನ ಸಭಾ ಕ್ಷೇತ್ರದಿಂದ ಈ ಬಾರಿ ಸ್ವತಂತ್ರ ಅಭ್ಯರ್ಥಿಯಾಗಿ ನಿಲ್ಲುತ್ತಿದ್ದೇನೆ. ಆದರೆ ಮತದಾರರಿಗೆ...

ಮಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನ ಸಭಾ ಕ್ಷೇತ್ರದಿಂದ ಈ ಬಾರಿ ಸ್ವತಂತ್ರ ಅಭ್ಯರ್ಥಿಯಾಗಿ ನಿಲ್ಲುತ್ತಿದ್ದೇನೆ. ಆದರೆ ಮತದಾರರಿಗೆ ಮತ ಹಾಕಲು ಡ್ರಿಂಕ್ಸ್ ಕೊಡಲ್ಲ, ಸೀರೆ ಹಂಚಲ್ಲ, ಮತವನ್ನು ಬೇಡಲ್ಲ, ಕೈಯಂತೂ ಮುಗಿಯಲ್ಲ, ಮನೆ ಮನೆಗೆ ಕ್ಯಾನ್‌ವಾಸ್ ಮಾಡಲ್ಲ. ಕ್ಷೇತ್ರಕ್ಕೆ ಏನು ಬೇಕು, ಏನು ಮಾಡಬೇಕು ತಿಳಿದುಕೊಂಡರೆ ಸಾಕು ಎಂದು ನಟ ಹುಚ್ಚ ವೆಂಕಟ್ ಹೇಳಿದ್ದಾರೆ.
ಮಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಮಾತನಾಡಿದ ಅವರು, ನನ್ನ ಗುರಿ ಪ್ರಧಾನ ಮಂತ್ರಿ ಆಗೋದು. ಈಗಿನಿಂದಲೇ ಪ್ರಯತ್ನ ಪಟ್ಟರೆ ಒಂದು ದಿನ ಖಂಡಿತ ಪ್ರಧಾನಿ ಆಗುತ್ತೇನೆ' ಎನ್ನುವ ಮೂಲಕ ಹುಚ್ಚ ವೆಂಕಟ್ ರಾಜಕೀಯದಲ್ಲಿ ಮುಂದೆ ಸಾಗುವ ಕುರಿತು ಭರವಸೆಯ ಮಾತುಗಳನ್ನಾಡಿದರು.
ಮತದಾರರ ಹಣದಿಂದಲೇ ಸಿಎಂ, ಪಿಎಂ, ಎಂಎಲ್‌ಎಗಳಿಗೆ ಸಂಬಳ ಹೋಗುತ್ತದೆ. ಅವರು ಸರಿಯಾಗಿ ಕೆಲಸ ಮಾಡದೇ ಇದ್ದಾರೆ ಅವರನ್ನು ಕಿತ್ತು ಹಾಕಿ. ನಾನು ಸಿನಿಮಾ ರಂಗದಲ್ಲಿ ಒಳ್ಳೆಯ ಕೆಲಸ ಮಾಡಿದ್ದೇನೆ. ಅಲ್ಲಿ ಯಾರಿಗೂ ಕೈ ಮುಗಿದಿಲ್ಲ. ಅದೇ ರೀತಿಯಲ್ಲಿ ರಾಜಕೀಯದಲ್ಲೂ ಮಾಡುತ್ತೇನೆ. ನಾನು ಯಾರಿಗೂ ದುಡ್ಡು ಕೊಟ್ಟು ತಮಟೆ ಹೊಡೆಸೋಲ್ಲ. ಭಾಷಣಕ್ಕೆ ಹಣ ಕೊಟ್ಟು ಚಪ್ಪಾಳೆ, ವಿಶಲ್ ಹೊಡೆಸಲ್ಲ. ಸರಕಾರದ ದುಡ್ಡು, ಬೆಂಬಲ ಸಿಕ್ಕರೆ ಸಮಾಜಕ್ಕೆ ಒಳ್ಳೆಯದನ್ನು ಮಾಡಬಹುದು ಎಂದರು.
ನಾನು ಪ್ರಧಾನಿಯಾದರೇ ರಸ್ತೆಗಳಲ್ಲಿ ಹೆಣ್ಣು ಮಕ್ಕಳು ಸೀರೆ ಅಥವಾ ಸಲ್ವಾರ್ ತೊಟ್ಟು ಓಡಾಡಬೇಕು ಎಂಬ ಕಾನೂನು ತರುತ್ತೇನೆ ಎಂದು ಹುಚ್ಚ ವೆಂಕಟ್ ಆಶಯ ವ್ಯಕ್ತ ಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ಸತತ 4ನೇ ಬಾರಿ CNG ದರ ಏರಿಕೆ: ಕೆಜಿಗೆ 2 ರೂ. ಹೆಚ್ಚಳ, ವಾಹನ ಸವಾರರಿಗೆ ಶಾಕ್‌

ಗೃಹಲಕ್ಷ್ಮಿ ಯೋಜನೆಯಲ್ಲಿ 100 ಕೋಟಿ ರೂ.ದುರ್ಬಳಕೆ: ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರ ಚಿಂತನೆ..!

Main Tera Hero: ರಿರಿಲೀಸ್; ಗರ್ಲ್ ಫ್ರೆಂಡ್ ಗಾಗಿ ಅಭಿಮಾನಿಯ ಡ್ಯಾನ್ಸ್ , ವಿಡಿಯೋ ವೈರಲ್, ವರುಣ್ ಧವನ್ ಹೇಳಿದ್ದೇನು?

ವಿಜಯ್ ಸಿಎಂ ಆಗುತ್ತಿದ್ದಂತೆಯೇ ಆಂಧ್ರದಲ್ಲಿ ಗಂಭೀರವಾದ DCM ಪವನ್ ಕಲ್ಯಾಣ್ ! JSP ಕಾರ್ಯಕರ್ತರಿಗೆ ಖಡಕ್ ಸೂಚನೆ

SCROLL FOR NEXT