ಅಪೂರ್ವ ಮತ್ತು ರವಿಚಂದ್ರನ್ 
ಸಿನಿಮಾ ಸುದ್ದಿ

ರವಿಚಂದ್ರನ್ ನಿರ್ದೇಶನದ 'ರಾಜೇಂದ್ರ ಪೊನ್ನಪ್ಪ' ಸಿನಿಮಾದಲ್ಲಿ ವಕೀಲೆಯಾಗಿ ಅಪೂರ್ವ

ರವಿಚಂದ್ರನ್ ಅವರ ಅಪೂರ್ವ ಸಿನಿಮಾಗೆ ನಾಯಕಿಯಾಗಿದ್ದ ನಟಿ ಅಪೂರ್ವ ಎರಡು ವರ್ಷಗಳ ನಂತರ ನಟನೆಯತ್ತ ಮುಖ ಮಾಡಿದ್ದಾರೆ....

ಬೆಂಗಳೂರು: ರವಿಚಂದ್ರನ್ ಅವರ ಅಪೂರ್ವ ಸಿನಿಮಾಗೆ ನಾಯಕಿಯಾಗಿದ್ದ ನಟಿ ಅಪೂರ್ವ ಎರಡು ವರ್ಷಗಳ ನಂತರ ನಟನೆಯತ್ತ ಮುಖ ಮಾಡಿದ್ದಾರೆ.
ಕ್ರೇಜಿಸ್ಟಾರ್ ರವಿಚಂದ್ರನ್ ನಿರ್ದೇಶನದ ರಾಜೇಂದ್ರ ಪೊನ್ನಪ್ಪ ಸಿನಿಮಾದಲ್ಲಿ  ವಕೀಲೆಯಾಗಿ ರವಿಚಂದ್ರನ ಜೊತೆ ಕಾಣಿಸಿಕೊಳ್ಳುತ್ತಿದ್ದಾರೆ,  ರಾಧಿಕಾ ಕುಮಾರಸ್ವಾಮಿ ಕೂಡ ಸಿನಿಮಾದಲ್ಲಿ ನಟಿಸಿದ್ದಾರೆ. ಸಿನಿಮಾ ಈಶ್ವರಿ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗುತ್ತಿದೆ.
ಪ್ರಧಾನ ಪಾತ್ರದಲ್ಲಿ ನಟಿಸುತ್ತಿರುವ ರವಿಚಂದ್ರನ್  ಸಂಗೀತ ಸಂಯೋಜನೆ ಕೂಡ ಮಾಡಿದ್ದಾರೆ. ಸದ್ಯ ಸಿನಿಮಾ ಶೂಟಿಂಗ್ ನಡೆಯುತ್ತಿದ್ದು, ಮುಂದಿನ 10 ದಿನಗಳಲ್ಲಿ ಅಪೂರ್ವ ಸಿನಿಮಾ ಸೆಟ್ ಗೆ ಬರಲಿದ್ದಾರೆ.
ಅಪೂರ್ವ ನಂತರ ಯಾವುದೇ ಸಿನಿಮಾಗಳಲ್ಲಿ ನಟಿಸಲು ಅಪೂರ್ವ ಆಸಕ್ತಿ ಹೊಂದಿಲ್ಲ ಎಂಬ ಮಾತುಗಳು ಕೇಳಿ ಬಂದಿದ್ದವು, ಉತ್ತಮ ಪ್ರಾಜೆಕ್ಟ್ ಗಾಗಿ ಕಾಯುತ್ತಿದ್ದ ಆಕೆ ನಟನೆಗೆ ತಯಾರಿ ಮಾಡಿಕೊಳ್ಳುತ್ತಿದ್ದರು, ಆದರೆ ರಾಜೇಂದ್ರ ಪೊನ್ನಪ್ಪ ಸಿನಿಮಾದಲ್ಲಿ ನಟಿಸಲು ಅಪೂರ್ವ ಎರಡನೇ ಮಾತಿಲ್ಲದೇ ಒಪ್ಪಿಕೊಂಡಿದ್ದಾರೆ, ಏಕೆಂದರೇ ರವಿಚಂದ್ರನ್ ಅಪೂರ್ವ ಅವರ ಗಾಡ್ ಫಾದರ್ ಆಗಿರುವ ಕಾರಣ ವಕೀಲೆ ಪಾತ್ರಕ್ಕೆ ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT