ರಕ್ಷಿತ್ ಶೆಟ್ಟಿ 
ಸಿನಿಮಾ ಸುದ್ದಿ

ಕೆ.ಮಂಜು, ರಕ್ಷಿತ್ ಶೆಟ್ಟಿಯಿಂದ ಸದ್ಯದಲ್ಲಿಯೇ ಚಿತ್ರಕ್ಕೆ ಚಾಲನೆ

ನಾಲ್ಕು ವರ್ಷಗಳ ಹಿಂದೆ ಮಾಡಿಕೊಂಡ ಒಪ್ಪಂದವೊಂದಕ್ಕೆ ಬದ್ಧರಾಗಿದ್ದಾರೆ ನಿರ್ಮಾಪಕ ಮಂಜು ಮತ್ತು...

ನಾಲ್ಕು ವರ್ಷಗಳ ಹಿಂದೆ ಮಾಡಿಕೊಂಡ ಒಪ್ಪಂದವೊಂದಕ್ಕೆ ಬದ್ಧರಾಗಿದ್ದಾರೆ ನಿರ್ಮಾಪಕ ಮಂಜು ಮತ್ತು ನಟ ರಕ್ಷಿತ್ ಶೆಟ್ಟಿ. ಅದು ಯಾವ ಸಿನಿಮಾ, ನಿರ್ದೇಶಕರು ಯಾರು ಎಂಬಿತ್ಯಾದಿಗೆ ನಿರ್ಮಾಪಕ ಮಂಜು ಉತ್ತರಿಸಿದ್ದಾರೆ.

ಯೋಗರಾಜ್ ಭಟ್ಟರು ನನಗೊಂದು ಕಥೆಯನ್ನು ವಿವರಿಸಿದ್ದಾರೆ. ಅದು ರಕ್ಷಿತ್ ಶೆಟ್ಟಿಗೆ ಹೊಂದಿಕೆಯಾಗುತ್ತದೆ ಎಂದು ಭಾವಿಸಿದ್ದೇನೆ. ನಾವೆಲ್ಲರೂ ಒಟ್ಟು ಸೇರಿದರೆ ಚಿತ್ರ ಮಾಡಬಹುದು. ಈಗ ರಕ್ಷಿತ್ ಶೆಟ್ಟಿ ಮತ್ತು ನಾನು ಸಿನಿಮಾವೊಂದನ್ನು ಮಾಡುತ್ತಿದ್ದೇವೆ ಎಂದು ಖಚಿತಪಡಿಸಿದರು.

ಎಲ್ಲವೂ ಅಂದುಕೊಂಡಂತೆ ಆಗುತ್ತಿದ್ದರೆ ನಾಲ್ಕು ವರ್ಷಗಳ ಹಿಂದೆಯೇ ನಾವು ಒಟ್ಟು ಸೇರಬೇಕಾಗಿತ್ತು. ಈಗ ರಕ್ಷಿತ್ ಶೆಟ್ಟಿ ಬೇರೆ ಚಿತ್ರಗಳಲ್ಲಿ ಬ್ಯುಸಿಯಾಗಿದ್ದರೂ ಕೂಡ ಮುಂದಿನ ವರ್ಷ ನಾವು ಒಟ್ಟಾಗಿ ಸಿನಿಮಾ ಮಾಡಲಿದ್ದೇವೆ ಎಂದರು.

ಕೆ ಮಂಜು ಅವರು ಇದೀಗ ತಮ್ಮ ಪುತ್ರನ ಪಡ್ಡೆಹುಲಿ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಅದನ್ನು ಗುರು ದೇಶಪಾಂಡೆ ನಿರ್ದೇಶಿಸುತ್ತಿದ್ದಾರೆ. ನಂತರ ರವಿಚಂದ್ರನ್ ಅವರ ಚಿತ್ರವೊಂದು ಬಾಕಿಯಿದೆ. ರಕ್ಷಿತ್ ಶೆಟ್ಟಿಯವರು ಅವನೇ ಶ್ರೀಮನ್ನಾರಾಯಣ, 777 ಚಾರ್ಲಿ ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಗ್ರೇಟರ್‌ ಬೆಂಗಳೂರು ಪಾಲಿಕೆ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಟಿಕೆಟ್‌: ಡಿಕೆ ಶಿವಕುಮಾರ್ ಘೋಷಣೆ

ಅನಂತ್‌ನಾಗ್‌: ಕೂಂಬಿಂಗ್ ಕಾರ್ಯಾಚರಣೆ ವೇಳೆ ಇಬ್ಬರು ಸೈನಿಕರು ನಾಪತ್ತೆ!

ಬೆಂಗಳೂರು: CJI ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲನ ವಿರುದ್ಧ ಎಫ್ಐಆರ್ ದಾಖಲು

ಸ್ವದೇಶಿ ಮಂತ್ರ: Gmailನಿಂದ Zoho Mailಗೆ ಅಮಿತ್ ಶಾ ಶಿಫ್ಟ್; ಟ್ರಂಪ್‌ಗೆ ಠಕ್ಕರ್

ತಾನು ಯಾವತ್ತಿಗೂ ವಿಮರ್ಶಾತೀತ ಎಂದೆಣಿಸುವುದರಲ್ಲಿ ಯಾವ ನ್ಯಾಯವಿದೆ? (ತೆರೆದ ಕಿಟಕಿ)

SCROLL FOR NEXT