ಹರ್ಷಿಕಾ ಪೂಣಚ್ಚ 
ಸಿನಿಮಾ ಸುದ್ದಿ

ಸಸ್ಪೆನ್ಸ್ ಥ್ರಿಲ್ಲರ್ 'ಉದ್ಘರ್ಷ'ಕ್ಕೆ ಸುನೀಲ್ ಕುಮಾರ್ ದೇಸಾಯಿ ನಿರ್ದೇಶನ!

ಕನ್ನಡ ಸಸ್ಪೆನ್ಸ್ ಚಿತ್ರಗಳ ನಿರ್ಮಾಣದಲ್ಲಿ ಹೆಸರಾದ ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ ಸೃಷ್ಟಿಯಾಗಿರುವ "ಉದ್ಘರ್ಷ" ಬಿಡುಗಡೆಗೆ ಮುನ್ನವೇ ಸಾಕಷ್ಟು ಕುತೂಹಲ ಮೂಡಿಸಿದೆ.

ಬೆಂಗಳೂರು: ಕನ್ನಡ ಸಸ್ಪೆನ್ಸ್ ಚಿತ್ರಗಳ ನಿರ್ಮಾಣದಲ್ಲಿ ಹೆಸರಾದ ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ ಸೃಷ್ಟಿಯಾಗಿರುವ "ಉದ್ಘರ್ಷ" ಬಿಡುಗಡೆಗೆ ಮುನ್ನವೇ ಸಾಕಷ್ಟು ಕುತೂಹಲ ಮೂಡಿಸಿದೆ.
"ತರ್ಕ", "ನಿಷ್ಕರ್ಷ", "ಉತ್ಕರ್ಷ" ಸೇರಿ ಹಲು ಚಿತ್ರಗಳನ್ನು ತಯಾರಿಸಿರುವ ದೇಸಾಯಿ ಈ ಚಿತ್ರವನ್ನು ಸಹ ಕನ್ನಡ ಹಾಗೂ ತೆಲುಗಿನಲ್ಲಿ ಏಕಕಾಲಕ್ಕೆ ತಯಾರಿಸುತ್ತಿದ್ದಾರೆ. ಚಿತ್ರವು ತಮಿಳು ಹಾಗೂ ಮಲಯಾಳಂ ಗೆ ಡಬ್ ಆಗುತ್ತದೆಂದು ಅವರು ಹೇಳಿದರು.
ಒಂದು ಆಕ್ಷನ್-ಥ್ರಿಲ್ಲರ್ ಕಥೆಯನ್ನು ಹೊಂದಿರುವ "ಉದ್ಘ್ಹರ್ಷ"ದಲ್ಲಿ ಸಿಂಗಂ - 3  ಖ್ಯಾತಿಯ ಠಾಕೂರ್ ಅನೂಪ್ ಸಿಂಗ್, ಕಬಾಲಿಯ ಧನ್ಸಿಕಾ, ಬಾಹುಬಲಿ ಚಿತ್ರದ ಪ್ರಭಾಕರ್ ಇದ್ದ್ದಾರೆ.
ತನ್ಯಾ ಹೋಪ್, ಶ್ರದ್ದಾ ದಾಸ್, ಕಿಶೋರ್, ವಂಶಿ ಕೃಷ್ಣ, ಸೇರಿ ಅನೇಕ ನಟರು ಅಭಿನಯಿಸಿದ ಈ ಚಿತ್ರದಲ್ಲಿ ಹರ್ಷಿಕಾ ಪೂಣಚ್ಚ ಸಹ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಡಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಈ ಚುತ್ರಕ್ಕೆ ಬಾಲಿವುಡ್ ಸಂಗೀರ ನಿರ್ದೇಶಕ ಸಂಜಯ್ ಚೌಧರಿ ಹಿನ್ನೆಲೆ ಸಂಗೀತ ಒದಗಿಸಿದ್ದಾರೆ. ಚಿತ್ರಕ್ಕೆ ಕೆಂಪರಾಜು ಸಂಕಲನ, ರವಿವರ್ಮ ಸಾಹಸ ನಿರ್ದೇಶನವಿದೆ.ವಿಷ್ಣುವರ್ಧನ್ ಹಾಗು ಪಿ. ರಾಜನ್ ಛಾಯಾಗ್ರಹಣವಿರುವ ಈ ಚಿತ್ರ ಹೈದರಾಬಾದ್, ಮಡಿಕೇರಿ, ಕೇರಳ ಹಾಗೂ ಬೆಂಗಳೂರುಗಳಲ್ಲಿ ಚಿತ್ರೀಕರಣಗೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT