ವಿಜಯ್ ದೇವರಕೊಂಡ, ಅನುಪಮ ಪರಮೇಶ್ವರನ್ 
ಸಿನಿಮಾ ಸುದ್ದಿ

ಕೇರಳ ಪ್ರವಾಹ ಪೀಡಿತರ ನೆರವಿಗೆ ನಿಂತ ರೀಲ್ ಹೀರೋ ವಿಜಯ್, ನಟಿ ಅನುಪಮ!

ಟಾಲಿವುಡ್ ನಟ ವಿಜಯ್ ದೇವರಕೊಂಡ ಹಾಗೂ ನಟಿ ಅನುಪಮ ಪರಮೇಶ್ವರನ್ ಇದೀಗ ತಮ್ಮ ಮಾನವೀಯ ಕಾರ್ಯದ ಮೂಲಕ ಮತ್ತೊಮ್ಮೆ ಎಲ್ಲರ ಮನಗೆದ್ದಿದ್ದಾರೆ...

ಹೈದರಾಬಾದ್/ತಿರುವನಂತಪುರಂ: ಟಾಲಿವುಡ್ ನಟ ವಿಜಯ್ ದೇವರಕೊಂಡ ಹಾಗೂ ನಟಿ ಅನುಪಮ ಪರಮೇಶ್ವರನ್ ಇದೀಗ ತಮ್ಮ ಮಾನವೀಯ ಕಾರ್ಯದ ಮೂಲಕ ಮತ್ತೊಮ್ಮೆ ಎಲ್ಲರ ಮನಗೆದ್ದಿದ್ದಾರೆ. 
ಮಹಾ ಮಳೆಗೆ ಕೇರಳ ಅಕ್ಷರಶಃ ತತ್ತರಿಸಿ ಹೋಗಿದೆ. ರಾಜ್ಯದ ಹಲವೆಡೆ ಪ್ರವಾಸ ಸಂಭವಿಸಿದೆ. ಇನ್ನು ರಾಜ್ಯದ ಜಲಾಶಯಗಳೆಲ್ಲ ತುಂಬಿ ಹರಿಯುತ್ತಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ವಿಜಯ್ ದೇವರಕೊಂಡ ಮತ್ತು ಅನುಪಮ ಕೇರಳಿಗರಿಗೆ ನೆರವಿನ ಹಸ್ತ ಚಾಚಿದ್ದಾರೆ. 
ವಿಜಯ್ ದೇವರಕೊಂಡ ಅವರು ಕೇರಳದ ಪ್ರವಾಹ ಪೀಡಿತ ಪರಿಹಾರ ಕಾರ್ಯಕ್ಕೆ 5 ಲಕ್ಷ ರುಪಾಯಿ ನೀಡಿದ್ದರೆ, ಅನುಪಮ ಅವರು 1 ಲಕ್ಷ ರುಪಾಯಿ ಪರಿಹಾರ ನೀಡಿದ್ದಾರೆ. 
ಈ ಬಗ್ಗೆ ಟ್ವೀಟರ್ ನಲ್ಲಿ ಬರೆದುಕೊಂಡಿರುವ ವಿಜಯ್, ರಜಾ ದಿನಗಳಲ್ಲಿ ಕೇರಳ ನನ್ನ ನೆಚ್ಚಿನ ತಾಣವಾಗಿತ್ತು. ನಾನು ಕೇರಳದಲ್ಲಿ ಹಲವರನ್ನು ಭೇಟಿ ಮಾಡಿದ್ದೇನೆ. ಮಾತ್ರವಲ್ಲದೆ ನನ್ನ ಹಲವು ಆಪ್ತರು ಅಲ್ಲಿದ್ದಾರೆ. ವೈಯಕ್ತಿಕವಾಗಿ ಹಣವನ್ನು ಹೇಗೆ ತಲುಪಿಸಬೇಕೆಂದು ತಿಳಿಯುತ್ತಿಲ್ಲ ಎಂದು ಬರೆದುಕೊಂಡಿದ್ದಾರೆ. 
ವಿಜಯ್ ಮತ್ತು ಅನುಪಮ ಅವರ ಈ ಕಾರ್ಯಕ್ಕೆ ಅಭಿಮಾನಿಗಳು ಫುಲ್ ಖುಷಿಯಾಗಿದ್ದು ಭಾರೀ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT