ವಿ.ನಾಗೇಂದ್ರ ಪ್ರಸಾದ್ 
ಸಿನಿಮಾ ಸುದ್ದಿ

ಕನ್ನಡ ಚಿತ್ರ ನಿರ್ದೇಶಕರ ಸಂಘದ ಚುನಾವಣೆ: ಅಧ್ಯಕ್ಷರಾಗಿ ವಿ.ನಾಗೇಂದ್ರ ಪ್ರಸಾದ್‌ ಆಯ್ಕೆ

ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಚುನಾವಣೆ ಮುಗಿದಿದ್ದು ಫಲಿತಾಂಶ ಹೊರಬಿದ್ದಿದೆ. ನಟ, ನಿರ್ದೇಶಕ, ಚಿತ್ರ ಸಾಹಿತಿ ವಿ.ನಾಗೇಂದ್ರ ಪ್ರಸಾದ್ ಸತತ ಎರಡನೇ ಬಾರಿಗೆ.....

ಬೆಂಗಳೂರು: ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಚುನಾವಣೆ ಮುಗಿದಿದ್ದು ಫಲಿತಾಂಶ ಹೊರಬಿದ್ದಿದೆ. ನಟ, ನಿರ್ದೇಶಕ, ಚಿತ್ರ ಸಾಹಿತಿ ವಿ.ನಾಗೇಂದ್ರ ಪ್ರಸಾದ್ ಸತತ ಎರಡನೇ ಬಾರಿಗೆ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಭಾನುವಾರ ಬೆಳಿಗ್ಗೆ ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ಗುರುರಾಜ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಚುನಾವಣೆ ಪ್ರಕ್ರಿಯೆ ನಡೆದಿತ್ತು. ಹಿರಿಯ ನಿರ್ದೇಶಕ ಭಗವಾನ್ ಫಲಿತಾಂಶ ಘೋಷಣೆ ಮಾಡಿದರು.
ಒಟ್ಟು  125 ನಿರ್ದೇಶಕರು ಮತದಾನ ಮಾಡಿದ್ದು ಇದರಲ್ಲಿ 10 ಅಸಿಂಧುವಾಗಿದೆ. ನಾಗೇಂದ್ರ ಪ್ರಸಾದ್‌ 100 ಮತ ಗಳಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿದಿದ್ದಾರೆ.
ಸಂಘದ ಉಪಾಧ್ಯಕ್ಷರಾಗಿ ಸಾಧು ಕೋಕಿಲಾ, ರೂಪಾ ಅಯ್ಯರ್,ಆಯ್ಕೆಗೊಂಡಿದ್ದರೆ ಶರಣ್ ಕಬ್ಬೂರ್, ನಾಗೇಂದ್ರ ಕಾರ್ಯದರ್ಶಿಗಳಾಗಿ ಚುನಾಯಿತರಾದರು. ನಾಗೇಶ್ ಟಿ.ಎನ್ ಸಂಘದ ಖಜಾಂಚಿಯಾಗಿ ನೇಮಕವಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT