ಧನಂಜಯ್-ಸೂರಿ 
ಸಿನಿಮಾ ಸುದ್ದಿ

ಪಾಪ್‌ಕಾರ್ನ್ ಮಂಕಿ ಟೈಗರ್ ಚಿತ್ರಕ್ಕಾಗಿ ಮತ್ತಿಬ್ಬರು ನಟಿಮಣಿಯರನ್ನು ಕರೆತಂದ ಸೂರಿ!

ದುನಿಯಾ ಸೂರಿ ನಿರ್ದೇಶನದ ಪಾಪ್‌ಕಾರ್ನ್ ಮಂಕಿ ಟೈಗರ್ ಚಿತ್ರಕ್ಕಾಗಿ ತಾರಾಗಣ ಆಯ್ಕೆಯಾಗಿ ಬ್ಯುಸಿಯಾಗಿದ್ದಾರೆ...

ದುನಿಯಾ ಸೂರಿ ನಿರ್ದೇಶನದ ಪಾಪ್‌ಕಾರ್ನ್ ಮಂಕಿ ಟೈಗರ್ ಚಿತ್ರಕ್ಕಾಗಿ ತಾರಾಗಣ ಆಯ್ಕೆಯಾಗಿ ಬ್ಯುಸಿಯಾಗಿದ್ದಾರೆ. 
ಅದಾಗಲೇ ಸೂರಿ ಧನಂಜಯ್ ಮತ್ತು ನಿವೇಧಿತರನ್ನು ನಾಯಕ-ನಾಯಕಿ ಆಯ್ಕೆ ಮಾಡಿದ್ದಾರೆ. ಇನ್ನು ಸಪ್ತಮಿ ಮತ್ತು ಅಮೃತ ಇಬ್ಬರು ನಟಿಮಣಿಯರನ್ನು ಚಿತ್ರಕ್ಕಾಗಿ ಸೂರಿ ಆಯ್ಕೆ ಮಾಡಿದ್ದಾರೆ. 
ಒಂದು ಚಿತ್ರವನ್ನು ನಿರ್ದೇಶನ ಮಾಡಬೇಕಾದರೆ ಆ ನಿರ್ದೇಶಕನಿಗೆ ಸ್ಪಷ್ಟತೆ ಇರಬೇಕು. ಇನ್ನು ಪಾತ್ರಕ್ಕೆ ಹೊಂದಿಕೊಳ್ಳುವಂತವರನ್ನು ಆಯ್ಕೆ ಮಾಡಿಕೊಂಡರೆ ಮಾತ್ರ ನಿರ್ದೇಶನಕ್ಕೆ ನ್ಯಾಯ ಒದಗಿಸಲು ಸಾಧ್ಯವಾಗುತ್ತದೆ. ಇದೇ ದೃಷ್ಟಿಯಿಂದ ನಾನು ಪಾತ್ರಧಾರಿಗಳನ್ನು ಅಂತಿಮಗೊಳಿಸಿದ್ದೇನೆ ಎಂದರು. 
ಟಗರು ಚಿತ್ರ ನಿರ್ಮಾಪಕ ಕೆಪಿ ಶ್ರೀಕಾಂತ್ ಅವರೇ ಪಾಪ್‌ಕಾರ್ನ್ ಮಂಕಿ ಟೈಗರ್ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಸಂಭಾಷಣೆ ಮಾಸ್ತಿ ಮಂಜು ಬರೆಯುತ್ತಿದ್ದು, ಚರಣ್ ರಾಜ್ ಸಂಗೀತ ಸಂಯೋಜಿಸುತ್ತಿದ್ದಾರೆ. ಶೇಖರ್ ರ ಛಾಯಾಗ್ರಹಣವಿರಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT