ದೀಪಕ್ ಮಧುವನಹಳ್ಳಿ, ಮೃದುಲಾ ಮತ್ತು ಗುರುನಂದನ್ 
ಸಿನಿಮಾ ಸುದ್ದಿ

ರಾಜು ಜೇಮ್ಸ್ ಬಾಂಡ್ ಗೆ ಮೃದುಲಾ ನಾಯಕಿ

ರಾಜು ಜೇಮ್ಸ್ ಬಾಂಡ್ ಗೆ ನಾಯಕಿ ಸಿಕ್ಕಿದ್ದಾಳೆ. ದೀಪಕ್ ಮಧುವನಹಳ್ಳಿ ನಿರ್ದೇಶನದ ಚಿತ್ರದಲ್ಲಿ ರಾಜು ಕನ್ನಡ...

ರಾಜು ಜೇಮ್ಸ್ ಬಾಂಡ್ ಗೆ ನಾಯಕಿ ಸಿಕ್ಕಿದ್ದಾಳೆ. ದೀಪಕ್ ಮಧುವನಹಳ್ಳಿ ನಿರ್ದೇಶನದ ಚಿತ್ರದಲ್ಲಿ ರಾಜು ಕನ್ನಡ ಮೀಡಿಯಂ ಖ್ಯಾತಿಯ ಗುರುನಂದನ್ ನಟಿಸುತ್ತಿದ್ದಾರೆ. ಉತ್ತರ ಕರ್ನಾಟಕ ಹುಡುಗಿಯ ಪಾತ್ರಕ್ಕೆ ನಾಯಕಿ ಹುಡುಕಾಟ ನಡೆಸುತ್ತಿದ್ದ ಚಿತ್ರತಂಡ ಆಡಿಶನ್ ಬಳಿಕ ಮೃದುಲಾ ಅವರನ್ನು ಆಯ್ಕೆ ಮಾಡಿಕೊಂಡಿದೆ. ಪಂಜಾಬ್ ನಲ್ಲಿ ನಡೆದ ಬ್ಯಾಂಕ್ ದರೋಡೆಯ ನೈಜ ಘಟನೆಯನ್ನಾಧರಿಸಿದ ಚಿತ್ರ ಇದಾಗಿದ್ದು ಕನ್ನಡ ಪ್ರೇಕ್ಷಕರಿಗೆ ತಕ್ಕಂತೆ ಬದಲಾವಣೆ ಮಾಡಲಾಗುತ್ತದೆ.

ಕರ್ಮ ಬ್ರೊ ನಿರ್ಮಾಣದಲ್ಲಿ ಚಿತ್ರ ತಯಾರಾಗುತ್ತಿದ್ದು ನಾಳೆ ಮುಹೂರ್ತ ನಡೆಯಲಿದೆ. ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಕ್ಯಾಮರಾಕ್ಕೆ ಚಾಲನೆ ನೀಡಲಿದ್ದಾರೆ. ರೆಬೆಲ್ ಸ್ಟಾರ್ ಅಂಬರೀಷ್ ಕ್ಲಾಪ್ ಮಾಡಲಿದ್ದಾರೆ. ಜಿ ಟಿ ದೇವೇಗೌಡರಿಂದ ಟೀಸರ್ ಬಿಡುಗಡೆಯಾಗಲಿದೆ. ಸೆಪ್ಟೆಂಬರ್ ಮೊದಲ ವಾರದಿಂದ ಚಿತ್ರ ಶೂಟಿಂಗ್ ಪ್ರಾರಂಭವಾಗಲಿದೆ.

ಅನಿವಾಸಿ ಭಾರತೀಯರಾದ ಕಿರಣ್ ಭರ್ತೂರ್ ಮತ್ತು ಮಂಜುನಾಥ್ ವಿಶ್ವಕರ್ಮ ಚಿತ್ರ ತಯಾರಿಸುತ್ತಿದ್ದು ರಾಜು ಜೇಮ್ಸ್ ಬಾಂಡ್ ಗೆ ಚಿತ್ರಕಥೆ ಮತ್ತು ಸಂಭಾಷಣೆಯನ್ನು ಜಗದೀಶ್ ನಾಡನಳ್ಳಿ ಬರೆಯಲಿದ್ದಾರೆ. ಮನೋಹರ್ ಜೋಶಿ ಅವರ ಛಾಯಾಗ್ರಹಣ ಮತ್ತು ಸಂಗೀತ ಅನೂಪ್ ಸೀಳಿನ್ ಮತ್ತು ಅಕ್ಷಯ್ ಪಿ ರಾವ್ ಸಂಕಲನ ಒದಗಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT