ದೀಪಕ್ ಮಧುವನಹಳ್ಳಿ, ಮೃದುಲಾ ಮತ್ತು ಗುರುನಂದನ್ 
ಸಿನಿಮಾ ಸುದ್ದಿ

ರಾಜು ಜೇಮ್ಸ್ ಬಾಂಡ್ ಗೆ ಮೃದುಲಾ ನಾಯಕಿ

ರಾಜು ಜೇಮ್ಸ್ ಬಾಂಡ್ ಗೆ ನಾಯಕಿ ಸಿಕ್ಕಿದ್ದಾಳೆ. ದೀಪಕ್ ಮಧುವನಹಳ್ಳಿ ನಿರ್ದೇಶನದ ಚಿತ್ರದಲ್ಲಿ ರಾಜು ಕನ್ನಡ...

ರಾಜು ಜೇಮ್ಸ್ ಬಾಂಡ್ ಗೆ ನಾಯಕಿ ಸಿಕ್ಕಿದ್ದಾಳೆ. ದೀಪಕ್ ಮಧುವನಹಳ್ಳಿ ನಿರ್ದೇಶನದ ಚಿತ್ರದಲ್ಲಿ ರಾಜು ಕನ್ನಡ ಮೀಡಿಯಂ ಖ್ಯಾತಿಯ ಗುರುನಂದನ್ ನಟಿಸುತ್ತಿದ್ದಾರೆ. ಉತ್ತರ ಕರ್ನಾಟಕ ಹುಡುಗಿಯ ಪಾತ್ರಕ್ಕೆ ನಾಯಕಿ ಹುಡುಕಾಟ ನಡೆಸುತ್ತಿದ್ದ ಚಿತ್ರತಂಡ ಆಡಿಶನ್ ಬಳಿಕ ಮೃದುಲಾ ಅವರನ್ನು ಆಯ್ಕೆ ಮಾಡಿಕೊಂಡಿದೆ. ಪಂಜಾಬ್ ನಲ್ಲಿ ನಡೆದ ಬ್ಯಾಂಕ್ ದರೋಡೆಯ ನೈಜ ಘಟನೆಯನ್ನಾಧರಿಸಿದ ಚಿತ್ರ ಇದಾಗಿದ್ದು ಕನ್ನಡ ಪ್ರೇಕ್ಷಕರಿಗೆ ತಕ್ಕಂತೆ ಬದಲಾವಣೆ ಮಾಡಲಾಗುತ್ತದೆ.

ಕರ್ಮ ಬ್ರೊ ನಿರ್ಮಾಣದಲ್ಲಿ ಚಿತ್ರ ತಯಾರಾಗುತ್ತಿದ್ದು ನಾಳೆ ಮುಹೂರ್ತ ನಡೆಯಲಿದೆ. ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಕ್ಯಾಮರಾಕ್ಕೆ ಚಾಲನೆ ನೀಡಲಿದ್ದಾರೆ. ರೆಬೆಲ್ ಸ್ಟಾರ್ ಅಂಬರೀಷ್ ಕ್ಲಾಪ್ ಮಾಡಲಿದ್ದಾರೆ. ಜಿ ಟಿ ದೇವೇಗೌಡರಿಂದ ಟೀಸರ್ ಬಿಡುಗಡೆಯಾಗಲಿದೆ. ಸೆಪ್ಟೆಂಬರ್ ಮೊದಲ ವಾರದಿಂದ ಚಿತ್ರ ಶೂಟಿಂಗ್ ಪ್ರಾರಂಭವಾಗಲಿದೆ.

ಅನಿವಾಸಿ ಭಾರತೀಯರಾದ ಕಿರಣ್ ಭರ್ತೂರ್ ಮತ್ತು ಮಂಜುನಾಥ್ ವಿಶ್ವಕರ್ಮ ಚಿತ್ರ ತಯಾರಿಸುತ್ತಿದ್ದು ರಾಜು ಜೇಮ್ಸ್ ಬಾಂಡ್ ಗೆ ಚಿತ್ರಕಥೆ ಮತ್ತು ಸಂಭಾಷಣೆಯನ್ನು ಜಗದೀಶ್ ನಾಡನಳ್ಳಿ ಬರೆಯಲಿದ್ದಾರೆ. ಮನೋಹರ್ ಜೋಶಿ ಅವರ ಛಾಯಾಗ್ರಹಣ ಮತ್ತು ಸಂಗೀತ ಅನೂಪ್ ಸೀಳಿನ್ ಮತ್ತು ಅಕ್ಷಯ್ ಪಿ ರಾವ್ ಸಂಕಲನ ಒದಗಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT