ಜಗ್ಗೇಶ್ 
ಸಿನಿಮಾ ಸುದ್ದಿ

'ತೋತಾಪುರಿ' ತೊಟ್ ಕೀಳೋಕೆ ಜಗ್ಗೇಶ್ ರೆಡಿ!

ನೀರ್‌ದೋಸೆ' ಚಿತ್ರದ ಯಶಸ್ಸಿನ ನಂತರ ನಿರ್ದೇಶಕ ವಿಜಯ ಪ್ರಸಾದ್‌ ಮತ್ತು ನಟ ಜಗ್ಗೇಶ್ ತೋತಾಪುರಿ ಮೂಲಕ ಒಂದಾಗಿದ್ದಾರೆ....

ಬೆಂಗಳೂರು: ನೀರ್‌ದೋಸೆ' ಚಿತ್ರದ ಯಶಸ್ಸಿನ ನಂತರ ನಿರ್ದೇಶಕ ವಿಜಯ ಪ್ರಸಾದ್‌ ಮತ್ತು ನಟ ಜಗ್ಗೇಶ್ ತೋತಾಪುರಿ ಮೂಲಕ ಒಂದಾಗಿದ್ದಾರೆ. ಶಿವಲಿಂಗ ಖ್ಯಾತಿಯ ಕೆ,ಎ ಸುರೇಶ್ ತೋತಾಪುರಿ ನಿರ್ಮಾಪಕರಾಗಿದ್ದಾರೆ. ಟೈಟಲ್ ನಲ್ಲೇ ಸಾಕಷ್ಟು ಕುತೂಹಲ ಮೂಡಿಸಿರುವ ತೋತಾಪುರಿ ಎಂಬುದು ಮಾವಿನ ಹಣ್ಣಿನ ತಳಿಯಾಗಿದೆ. ಜಗ್ಗೇಶ್‌ ಅವರಿಗೆ ಮತ್ತೂಂದು ವಿಭಿನ್ನ ಚಿತ್ರ ಸಿಕ್ಕಂತಾಗಿದೆ. "ತೋತಾಪುರಿ' ಚಿತ್ರಕ್ಕೆ "ತೊಟ್‌ ಕೀಳ್‌ಬೇಕಷ್ಟೇ' ಎಂಬ ಟ್ಯಾಗ್‌ಲೈನ್‌ ಕೂಡಾ ಇದೆ.
ತೋತಾಪುರಿ'ಯಲ್ಲಿ ವಿಜಯ ಪ್ರಸಾದ್‌ ಏನು ಹೇಳಲು ಹೊರಟಿದ್ದಾರೆಂದು ನೀವು ಕೇಳಬಹುದು. ಈ ಬಾರಿಯೂ ವಿಜಯಪ್ರಸಾದ್‌ ಒಂದು ವಿಭಿನ್ನವಾದ ಕಥೆಯನ್ನೇ ಆಯ್ಕೆ ಮಾಡಿಕೊಂಡಿದ್ದಾರೆ.
ಕಾಮಿಡಿ, ಡ್ರಾಮಾ, ವಿಡಂಬನಾತ್ಮಕವಾಗಿ ಸಾಗುವ ಈ ಕಥೆಯಲ್ಲಿ ಜಗ್ಗೇಶ್‌ ಕೃಷಿಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಜಗ್ಗೇಶ್‌ ಅವರ ಗೆಟಪ್‌ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಚಿತ್ರದ ಶೀರ್ಷಿಕೆಯ ಬಗ್ಗೆ ಮಾತನಾಡುವ ನಿರ್ದೇಶಕ ವಿಜಯಪ್ರಸಾದ್‌, "ಟೈಟಲ್‌ ಕಥೆಗೆ ಅನುಗುಣವಾಗಿದೆ. ಶೀರ್ಷಿಕೆಯಲ್ಲಿ ಆಕರ್ಷಣೆ ಇರಬೇಕೆಂಬುದು ಒಂದು ಕಾರಣವಾದರೆ, ಕಥೆಗೆ "ತೋತಾಪುರಿ' ತುಂಬಾ ಸೂಕ್ತವಾಗಿದೆ. ಸಿನಿಮಾ ನೋಡಿದ ಮೇಲೆ ನಿಮಗೆ ಮನದಟ್ಟಾಗುತ್ತದೆ' ಎನ್ನುವುದು ಜಗ್ಗೇಶ್ ಮಾತುಪ. 
ಸಮಾಜದಲ್ಲಿರುವ ಜಾತಿ ರಾಜಕಾರಣದ ಬಗ್ಗೆ ಸಿನಿಮಾದಲ್ಲಿ ವಿಡಂಬನಾತ್ಮಕವಾಗಿ ಚಿತ್ರಿಸಲಾಗಿದೆ,  ಜಾತಿ ಹಾಗೂ ಮೈ ಬಣ್ಣ ಹೇಗೆ ಸಮಾಜದಲ್ಲಿ ಪಾತ್ರ ವಹಿಸುತ್ತದೆ ಎಂಬ ಬಗ್ಗೆ ಚಿತ್ರದಲ್ಲಿ ಹೇಳಲಾಗುತ್ತದೆ, 
ತಮ್ಮ ಪಾತ್ರಗಳ ಆಯ್ಕೆಯಲ್ಲಿ ಚ್ಯೂಸಿಯಾಗಿರುವ ಜಗ್ಗೇಶ್, ತಮ್ಮ  ಸಂವೇದನಾ ಶೀಲತೆಗೆ ಹೊಂದಿಕೊಳ್ಳುವ ಪಾತ್ರ ಇದಾಗಿದ್ದರಿಂದ ಸಿನಿಮಾಗೆ ಸಹಿ ಮಾಡಿದ್ದೇನೆ, ನನ್ನ ನಟನೆಗೆ ಚಿತ್ರದಲ್ಲಿ ಸ್ಕೋಪ್ ಇದೆ, ಅದಕ್ಕಾಗಿ ನಾನು ಒಪ್ಪಿಕೊಂಡೆ, ರಾಜ್ ಕುಮಾರ್ ಅನುಯಾಯಿಯಾಗಿರುವ ನಾನು, ಪಾತ್ರಕ್ಕೆ ವಯಸ್ಸು ಮುಖ್ಯವಲ್ಲ ಎಂಬುದನ್ನು ಮನಗಂಡಿರುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT