ಅಪರ್ಣಾ 
ಸಿನಿಮಾ ಸುದ್ದಿ

30 ವರ್ಷಗಳ ನಂತರ ಮತ್ತೆ ಬೆಳ್ಳಿತೆರೆಗೆ ನಟಿ ಅಪರ್ಣಾ

ಗ್ರಾಮಾಯಣ ಚಿತ್ರಕ್ಕೆ ಉತ್ತಮ ಕಲಾವಿದರ ಆಯ್ಕೆಯಲ್ಲಿ ನಿರ್ದೇಶಕ ದೇವರ್ನೂರು ಚಂದ್ರು ನಿರತರಾಗಿದ್ದಾರೆ...

ಗ್ರಾಮಾಯಣ ಚಿತ್ರಕ್ಕೆ ಉತ್ತಮ ಕಲಾವಿದರ ಆಯ್ಕೆಯಲ್ಲಿ ನಿರ್ದೇಶಕ ದೇವರ್ನೂರು ಚಂದ್ರು ನಿರತರಾಗಿದ್ದಾರೆ. ವಿನಯ್ ರಾಜ್ ಕುಮಾರ್ ನಾಯಕನಾಗಿ ಮತ್ತು ಅಮೃತಾ ಐಯ್ಯರ್ ನಾಯಕಿಯಾಗಿ ಅಭಿನಯಿಸುತ್ತಿರುವ ಈ ಚಿತ್ರದಲ್ಲಿ ಹಿರಿಯ ಕಲಾವಿದೆ ಅಪರ್ಣಾ ಕೂಡ ನಟಿಸಲಿದ್ದಾರೆ.

ಈ ಮೂಲಕ ಸುಮಾರು 30 ವರ್ಷಗಳ ನಂತರ ಕನ್ನಡ ಸಿನಿಮಾದಲ್ಲಿ ಮತ್ತೆ ಅವರು ಬಣ್ಣ ಹಚ್ಚುತ್ತಿದ್ದಾರೆ.ಗ್ರಾಮಾಯಣದಲ್ಲಿ ತಾಯಿಯ ಪಾತ್ರವನ್ನು ಅವರು ಮಾಡುತ್ತಿದ್ದು, ಅದು ಚಿತ್ರದ ಕೇಂದ್ರಬಿಂದುವಾಗಿದೆ.

ಪುಟ್ಟಣ್ಣ ಕಣಗಾಲ್ ಅವರ 1984ರಲ್ಲಿ ತೆರೆಕಂಡ ಮಸಣದ ಹೂವು ಚಿತ್ರದಲ್ಲಿ ಮೊದಲ ಬಾರಿಗೆ ಅಭಿನಯಿಸಿದ್ದ ಅಪರ್ಣಾ ನಂತರ 1989ರಲ್ಲಿ ಇನ್ಸ್ ಪೆಕ್ಟರ್ ವಿಕ್ರಮ್, ನಮ್ಮೂರ ರಾಜ ಮತ್ತು ಒಂದಾಗಿ ಬಾಳುವಿನಲ್ಲಿ ನಟಿಸಿದ್ದರು. ನಂತರ ಅಪರ್ಣಾ ಸಿನಿಮಾ ತೊರೆದು ರೇಡಿಯೊ, ಧಾರವಾಹಿಗಳಲ್ಲಿ ಮತ್ತು ಕಾರ್ಯಕ್ರಮ ನಿರೂಪಣೆಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಂಡರು. ಸೃಜನ್ ಲೋಕೇಶ್ ಅವರ ಕಾಮಿಡಿ ರಿಯಾಲಿಟಿ ಶೋ ಮಜಾ ಟಾಕೀಸ್ ನಲ್ಲಿ ಕೂಡ ಕಾಣಿಸಿಕೊಳ್ಳುತ್ತಿದ್ದಾರೆ.

ಗ್ರಾಮಾಯಣದ ಚಿತ್ರೀಕರಣ ಸೆಪ್ಟೆಂಬರ್ 18ರಿಂದ ಆರಂಭವಾಗಲಿದೆ. ಸೆಪ್ಟೆಂಬರ್ 6ರಂದು ಚಿತ್ರದ ಮೊದಲ ಟೀಸರ್ ಬಿಡುಗಡೆಯಾಗಲಿದೆ.

ಚಿತ್ರವನ್ನು ಎನ್ ಎಲ್ಎಲ್ ಮೂರ್ತಿ ನಿರ್ಮಿಸುತ್ತಿದ್ದಾರೆ. ನಾಯಕಿ ಅಮೃತಾ ಐಯ್ಯರ್ ಬೆಂಗಳೂರು ಹುಡುಗಿಯಾಗಿದ್ದು ಸೈಂಟ್ ಜೋಸೆಫ್ ಕಾಲೇಜಿನಲ್ಲಿ ಓದುತ್ತಿದ್ದಾರೆ. ತಮಿಳಿನಲ್ಲಿ ಕಲ್ಲಿ ಇವರ ಚೊಚ್ಚಲ ಚಿತ್ರ. ನಂತರ ಪಡೈವೀರನ್ ನಲ್ಲಿ ಅಭಿನಯಿಸಿದ್ದರು, ಇದು ಅವರಿಗೆ ಮೂರನೇ ಚಿತ್ರವಾಗಿದ್ದು ಕನ್ನಡದಲ್ಲಿ ಮೊದಲನೆಯದ್ದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT