ಚಿತ್ರದ ಪೋಸ್ಟರ್ 
ಸಿನಿಮಾ ಸುದ್ದಿ

ಹೈದ್ರಾಬಾದ್ ನಲ್ಲಿ 'ಅಯೋಗ್ಯ' ಚಿತ್ರ ಪ್ರದರ್ಶನಕ್ಕೆ ಸಂಕಷ್ಟ!

ಅಯೋಗ್ಯ ಚಿತ್ರ ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದ್ದು, ಬ್ಲಾಕ್ ಬುಸ್ಟರ್ ಎಂಬ ಪ್ರಶಂಸೆಗೂ ಪಾತ್ರವಾಗಿದೆ. ಆದರೆ. ಹೈದಾರಾಬಾದಿನಲ್ಲಿ ಚಿತ್ರ ಪ್ರದರ್ಶನಕ್ಕೆ ಹೋರಾಟ ಎದುರಾಗಿದೆ.

ಇತ್ತೀಚಿಗೆ ತೆರೆಕಂಡ ಮಹೇಶ್ ಕುಮಾರ್ ನಿರ್ದೇಶನದ ನೀನಾಸಾಂ ಸತೀಶ್ ಹಾಗೂ ರಚಿತಾ ರಾಮ್ ಅಭಿಯನದ  ಅಯೋಗ್ಯ ಚಿತ್ರ  ರಾಜ್ಯಾದ್ಯಂತ  ಯಶಸ್ವಿಯಾಗಿ ಪ್ರದರ್ಶನವಾಗುತ್ತಿದ್ದು, ಬ್ಲಾಕ್ ಬುಸ್ಟರ್ ಎಂಬ ಪ್ರಶಂಸೆಗೂ ಪಾತ್ರವಾಗಿದೆ. ಆದರೆ. ಹೈದಾರಾಬಾದಿನಲ್ಲಿ  ಚಿತ್ರ ಪ್ರದರ್ಶನಕ್ಕೆ ಹೋರಾಟ ಎದುರಾಗಿದೆ.

ಇತ್ತೀಚಿಗೆ ತೆರೆಕಂಡ ತೆಲುಗು, ಮತ್ತು ತಮಿಳು ಚಿತ್ರಗಳು ಹೈದಾರಾಬಾದಿನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿವೆ ಆದರೆ ಹಂಚಿಕೆದಾರರು ಕನ್ನಡ ಚಿತ್ರ ಬಿಡುಗಡೆಗೆ  ಆಸಕ್ತಿ ತೋರುತ್ತಿಲ್ಲ. ಅಲ್ಲಿನ ಮಲ್ಟಿಪ್ಲೆಕ್ಸ್ ಗಳಾಗಲೀ ಅಥವಾ  ಚಿತ್ರಮಂದಿರಗಳಾಗಲೀ ಒಂದು ಬಾರಿಯೂ ಆಯೋಗ್ಯ ಪ್ರದರ್ಶನಕ್ಕೆ  ಅವಕಾಶ ನೀಡುತ್ತಿಲ್ಲ ಎಂದು  ಹೊರ ರಾಜ್ಯಗಳಲ್ಲಿ ಚಿತ್ರ ಬಿಡುಗಡೆಯ ಹಕ್ಕು ತೆಗೆದುಕೊಂಡಿರುವ  ಹಂಚಿಕೆದಾರ ಯಶಸ್ ನಾಗ್ ಹೇಳುತ್ತಿದ್ದಾರೆ ಎಂದು  ಮಹೇಶ್ ಕುಮಾರ್ ಹೇಳಿದ್ದಾರೆ.

ಒಂದು ವೇಳೆ ತೆಲುಗು ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಕಂಡುಬರದಿದ್ದರೆ ಮಾತ್ರ ಕನ್ನಡ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಈ ವಿಚಾರದಲ್ಲಿ  ಹೈದ್ರಾಬಾದ್ ಚಲನಚಿತ್ರ ವಾಣಿಜ್ಯ ಮಂಡಳಿ ಕೂಡಾ ಏನನ್ನೂ ಹೇಳುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ತೆಲುಗು ಚಿತ್ರಗಳನ್ನು ಕರ್ನಾಟಕದಲ್ಲಿ ಅದ್ದೂರಿಯಾಗಿ  ಬಿಡುಗಡೆ ಆಗುವುದಲ್ಲದೇ, ಬೃಹತ್ ಪ್ರಮಾಣದಲ್ಲಿ ಗಳಿಕೆ ಮಾಡುತ್ತವೆ. ಈ ಸಂಬಂಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಎದುರು ಪ್ರತಿಭಟನೆ ನಡೆಸಿ ಪರ್ಯಾಯ ಮಾರ್ಗದ ಬಗ್ಗೆ ನೆರವು ಪಡೆಯಲಾಗುವುದು ಎಂದು ಮಹೇಶ್ ಕುಮಾರ್ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT