ಒಂದಲ್ಲಾ ಎರಡಲ್ಲಾ ಚಿತ್ರದ ಪೋಸ್ಟರ್ 
ಸಿನಿಮಾ ಸುದ್ದಿ

ತಾಂತ್ರಿಕ ದೋಷದಿಂದ 'ಒಂದಲ್ಲಾ ಎರಡಲ್ಲಾ' ಚಿತ್ರಕ್ಕೆ ಭಾರೀ ನಷ್ಟ!

ಚಿತ್ರಕಥೆಯಿಂದ ಒಂದಲ್ಲಾ ಎರಡಲ್ಲಾ ಸಿನಿಮಾ ಪ್ರೇಕ್ಷಕರ ಬಾಯಲ್ಲಿ ಹರಿದಾಡುತ್ತಿದ್ದರೂ ಕೂಡ ನಿರ್ದೇಶಕ ...

ಚಿತ್ರಕಥೆಯಿಂದ ಒಂದಲ್ಲಾ ಎರಡಲ್ಲಾ ಸಿನಿಮಾ ಪ್ರೇಕ್ಷಕರ ಬಾಯಲ್ಲಿ ಹರಿದಾಡುತ್ತಿದ್ದರೂ ಕೂಡ ನಿರ್ದೇಶಕ ಸತ್ಯಪ್ರಕಾಶ್ ತೃಪ್ತರಾಗಿಲ್ಲ. ಕಾರಣ, ಚಿತ್ರ ನಿರ್ಮಾಪಕರಿಗೆ ಮೊದಲ ದಿನ ಮೊದಲ ಶೋ ಬಿಡುಗಡೆಯಲ್ಲಿ ಡಿಜಿಟಲ್ ಸೇವಾ ಪೂರೈಕೆದಾರರಿಂದ ಎದುರಾದ ತಾಂತ್ರಿಕ ದೋಷ.

ಇದರಿಂದ ಅನೇಕ ಪ್ರೇಕ್ಷಕರು ಸಿನಿಮಾ ನೋಡಲು ಸಾಧ್ಯವಾಗಲಿಲ್ಲ. ಆಗಸ್ಟ್ 24ರಂದು ಕರ್ನಾಟಕಾದ್ಯಂತ ಸುಮಾರು 20 ಕೇಂದ್ರಗಳಲ್ಲಿ ಒಂದಲ್ಲಾ ಎರಡಲ್ಲಾ ಸಿನಿಮಾ ಪ್ರದರ್ಶನ ಕಾಣಲಿಲ್ಲ.

ಚಿತ್ರವನ್ನು ಪ್ರಚಾರ ಮಾಡಲು ಮೊದಲ ದಿನ ಎಲ್ಲಾ ಥಿಯೇಟರ್ ಗಳಿಗೆ ಭೇಟಿ ನೀಡುವ ಯೋಜನೆಯಲ್ಲಿ ಚಿತ್ರತಂಡವಿತ್ತು. ಆದರೆ ತಾಂತ್ರಿಕ ದೋಷ ಕಂಡುಬಂದ ಹಿನ್ನಲೆಯಲ್ಲಿ ಕೊನೆ ಕ್ಷಣದಲ್ಲಿ ರದ್ದುಪಡಿಸಲಾಯಿತು. ಮರುದಿನವಾದರೂ ಎಲ್ಲಾ ಕಡೆ ಚಿತ್ರ ಬಿಡುಗಡೆಯಾಗಲಿ ಎಂಬ ನಿಟ್ಟಿನಲ್ಲಿ ಕೆಲಸ ಮಾಡುವಲ್ಲಿ ಚಿತ್ರತಂಡ ಗಮನ ಹರಿಸಿತು.

ತಾಂತ್ರಿಕ ದೋಷದಿಂದ ಗಳಿಕೆ ಮೇಲೆ ತೀವ್ರ ಪೆಟ್ಟು ಬಿತ್ತು. ಅನೇಕ ಪ್ರೇಕ್ಷಕರನ್ನು ಕಳೆದುಕೊಂಡೆವು. ನನ್ನ ರಾಮ ರಾಮ ರೇ ಚಿತ್ರ ನೋಡಿದವರು ಈ ಚಿತ್ರದ ಮೊದಲ ಶೋ ನೋಡಲು ಬಂದಿದ್ದರು. ಆದರೆ ಅವರೆಲ್ಲರೂ ನಿರಾಶೆಯಿಂದ ಮರಳಬೇಕಾಯಿತು ಎನ್ನುತ್ತಾರೆ ನಿರ್ದೇಶಕ ಸತ್ಯಪ್ರಕಾಶ್.

ಇದೀಗ ರಾಜ್ಯಾದ್ಯಂತ 70 ಚಿತ್ರಮಂದಿರಗಳಲ್ಲಿ ಚಿತ್ರ ತೆರೆಕಂಡಿದೆ. ಚಿತ್ರ ನಿರ್ಮಾಪಕರು ನಿರಾಳರಾಗಿದ್ದಾರೆ. ನಮಗೆ ಉತ್ತಮ ಅಭಿಪ್ರಾಯಗಳು ಕೇಳಿಬರುತ್ತಿವೆ. ಆದರೂ ಆದ ನಷ್ಟವನ್ನು ತುಂಬುವುದು ಹೇಗೆ ಎಂದು ನೋಡುತ್ತಿದ್ದೇವೆ. ಬಾಯಿಮಾತಿನಿಂದ ಪ್ರಚಾರದಿಂದಲೇ ಪ್ರೇಕ್ಷಕರು ಬಂದು ಚಿತ್ರ ವೀಕ್ಷಿಸಬೇಕಾಗಿದೆ ಎಂದರು ಸತ್ಯ ಪ್ರಕಾಶ್.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT