ಚಿತ್ರದ ಪೋಸ್ಟರ್ 
ಸಿನಿಮಾ ಸುದ್ದಿ

ಕುತೂಹಲ ಮೂಡಿಸಿದೆ ಸುನೀಲ್ ಕುಮಾರ್ ದೇಸಾಯಿ ನಿರ್ದೇಶನದ 'ಉದ್ಘರ್ಷ' ಪೋಸ್ಟರ್!

ಸಸ್ಪೆನ್ಸ್-ಥ್ರಿಲ್ಲರ್ ಚಿತ್ರ ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ ಅವರು ಎರಡು ವರ್ಷಗಳ ಬಳಿಕ ಮತ್ತೆ ಕಮ್ ಬ್ಯಾಕ್ ಮಾಡಿದ್ದು ಇದೀಗ ಉದ್ಘರ್ಷ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ...

ಸಸ್ಪೆನ್ಸ್-ಥ್ರಿಲ್ಲರ್ ಚಿತ್ರ ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ ಅವರು ಎರಡು ವರ್ಷಗಳ ಬಳಿಕ ಮತ್ತೆ ಕಮ್ ಬ್ಯಾಕ್ ಮಾಡಿದ್ದು ಇದೀಗ ಉದ್ಘರ್ಷ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.
ಸುನೀಲ್ ಕುಮಾರ್ ದೇಸಾಯಿ ಅವರು ಉದ್ಘರ್ಷ ಚಿತ್ರದ ಫಸ್ಟ್ ಲುಕ್ ನಲ್ಲಿ ರಕ್ತ ಸಿಕ್ತ ಹುಡುಗಿಯೊಬ್ಬಳ ಕಾಲುಗಳನ್ನು ತೋರಿಸಿ ಪೋಸ್ಟರ್ ನಲ್ಲೇ ಕುತೂಹಲ ಕೆರಳಿಸಿದ್ದಾರೆ. ಚಿತ್ರದ ಪೋಸ್ಟರ್ ಗೆ ಸಿನಿ ಪ್ರಿಯರು ಫಿದಾ ಆಗಿದ್ದಾರೆ. ಇನ್ನು ಚಿತ್ರದ ಮೇಲೆ ಕುತೂಹಲ ಹುಟ್ಟಿಸುವಲ್ಲಿ ನಿರ್ದೇಶಕರು ಯಶಸ್ವಿಯಾಗಿದ್ದಾರೆ. 
ಚಿತ್ರದಲ್ಲಿ ಕೇವಲ 20 ನಿಮಿಷಗಳ ಡೈಲಾಗ್ ಮಾತ್ರ ಇರುತ್ತದೆ. ಇನ್ನುಳಿದಂತೆ ಹಿನ್ನಲೆ ಸಂಗೀತ ಹಾಗೂ ಕಲಾವಿದರ ನಟನೆಯಿಂದ ಚಿತ್ರ ಮುಂದುರೆಯುತ್ತದೆ ಎಂದು ಸುನೀಲ್ ಕುಮಾರ್ ದೇಸಾಯಿ ಅವರು ಹೇಳಿದ್ದಾರೆ. 
ಸುನೀಲ್ ಕುಮಾರ್ ದೇಸಾಯಿ ಅವರು ಈ ಹಿಂದೆ ತರ್ಕ, ಉತ್ಕರ್ಷ, ಸಂಘರ್ಷ, ನಿಷ್ಕರ್ಷ ಮುಂತಾದ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರಗಳನ್ನು ನಿರ್ದೇಶಿಸಿ ಯಶಸ್ಸು ಕಂಡಿದ್ದರು. ಆ ಬಳಿಕ ಮರ್ಮ, ಕ್ಷಣ ಕ್ಷಣ ಮತ್ತು ರೇ ಚಿತ್ರಗಳು ಅಂದುಕೊಂಡಂತ ಯಶಸ್ಸು ಕಾಣಲಿಲ್ಲ. ಇದೀಗ ಮತ್ತೆ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ ನಿರ್ದೇಶನಕ್ಕೆ ಮುಂದಾಗಿದ್ದಾರೆ. 
ಉದ್ಘರ್ಷ ಚಿತ್ರ ಕನ್ನಡ, ತೆಲುಗು ಮತ್ತು ತಮಿಳಿನಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿದೆ. ಚಿತ್ರದಲ್ಲಿ ಠಾಕೂರ್ ಅನೂಪ್ ಸಿಂಗ್, ಅನೂಪ್, ಧನ್ಸಿಕಾ, ತಾನ್ಯ ಹೋಪ್, ಕಬೀರ್ ಸಿಂಗ್ ದುಹಾನ್, ಹರ್ಷಿಕಾ ಪೂಣಚ್ಚ ಸೇರಿದಂತೆ ದೊಡ್ಡ ತಾರಾ ದಂಡೆ ಚಿತ್ರದಲ್ಲಿ ಕಾಣಿಸಲಿದೆ. 
ಚಿತ್ರವನ್ನು ದೇವರಾಜ್ ಎಂಬುವರು ನಿರ್ಮಾಣ ಮಾಡುತ್ತಿದ್ದು ಬಾಲಿವುಡ್ ನ ಖ್ಯಾತ ಸಂಗೀತ ನಿರ್ದೇಶಕ ಸಂಜೋಯ್ ಚೌಧರಿ ಸಂಗೀತ ನೀಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇರಳಂನ ತ್ರಿಶೂರ್‌ನಲ್ಲಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ: ತಮಿಳು ನಾಡಿನ ಎಂಟು ಮಂದಿ ಸಾವು, 7 ಎಂಜಿನಿಯರಿಂಗ್ ವಿದ್ಯಾರ್ಥಿಗಳು; Video

ಮತ್ತೊಂದು ಮಹಾಯುದ್ಧದ ಭೀತಿ: ಇರಾನ್‌ನ 'Pickaxe Mountain' ಧ್ವಂಸಕ್ಕೆ ಅಮೆರಿಕ ಸ್ಕೆಚ್, "ಶೀಘ್ರದಲ್ಲೇ ದಾಳಿ" ಎಂದ ಡೊನಾಲ್ಡ್ ಟ್ರಂಪ್..!

China ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅಮೆರಿಕಕ್ಕೆ; ಸೆ.24ರಂದು ಶ್ವೇತಭವನದಲ್ಲಿ ಔತಣಕೂಟ, Iran ಸಂಘರ್ಷವನ್ನು ‘ಸಣ್ಣ ವಿಚಾರ’ ಎಂದ Trump

ಒಬ್ಬ ರಾಜಿನಾಮೆ ಕೊಟ್ಟರೇನು? ನಮ್ಮ ಸರ್ಕಾರದಲ್ಲಿ 100 ನಾಗೇಂದ್ರ ಇದ್ದಾರೆ; ಸಿಎಂ ಡಿಕೆ ಶಿವಕುಮಾರ್

Park Billiಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಕ್ಷೇಪ: ಸ್ಪಷ್ಟನೆ ಕೋರಿ ಸರ್ಕಾರಕ್ಕೆ ವಾಪಸ್..!