ದರ್ಶನ್ 
ಸಿನಿಮಾ ಸುದ್ದಿ

ಸೆಪ್ಟಂಬರ್ 10 ರಿಂದ ದರ್ಶನ್ ಅಭಿನಯದ ಒಡೆಯ ಸಿನಿಮಾ ಶೂಟಿಂಗ್ ಅರಂಭ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಡುವಿಲ್ಲದಂತೆ ಹಲವು ಸಿನಿಮಾ ಶೂಟಿಂಗ್ ಗಳಲ್ಲಿ ಭಾಗಿಯಾಗುತ್ತಿದ್ದಾರೆ, ಅಭಿಮಾನಿಗಳು ದರ್ಶನ್ 50ನೇ ಸಿನಿಮಾ ಕುರುಕ್ಷೇತ್ರ ...

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಡುವಿಲ್ಲದಂತೆ ಹಲವು ಸಿನಿಮಾ ಶೂಟಿಂಗ್ ಗಳಲ್ಲಿ ಭಾಗಿಯಾಗುತ್ತಿದ್ದಾರೆ,  ಅಭಿಮಾನಿಗಳು  ದರ್ಶನ್ 50ನೇ ಸಿನಿಮಾ ಕುರುಕ್ಷೇತ್ರ ಬಿಡುಗಡೆಗಾಗಿ ಕಾಯುತ್ತಿದ್ದಾರೆ.  51ನೇ ಚಿತ್ರ ಯಜಮಾನ ಕೂಡ ಬಿಜುಗಡೆಗೆ ಸಿದ್ಧವಾಗಿದೆ. ತರುಣ್ ಶ್ರೀಧರ್ ನಿರ್ದೇಶನದ ಸಿನಿಮಾ ಶೂಟಿಂಗ್ ಕೂಡ ಶೀಘ್ರವೇ ಆರಂಭವಾಗಲಿದೆ.
ಯಜಮಾನ ಸಿನಿಮಾದ ಇನ್ನೂ 2 ಹಾಡುಗಳ ಶೂಟಿಂಗ್ ಬಾಕಿ ಉಳಿದಿದ್ದು, ಮಂಗಳವಾರ ಹಾಡಿನ ಚಿತ್ರೀಕರಣ ನಡೆಯಿತು, ಅಕ್ಟೋಬರ್ ತಿಂಗಳಿನಲ್ಲಿ  ಉಳಿದ 2 ಹಾಡುಗಳ ಚಿತ್ರೀಕರಣ ವಿದೇಶದಲ್ಲಿ ನಡೆಯಲಿದೆ.
ಸೆಪ್ಟಂಬರ್ 10ರಂದು ಒಡೆಯ ಸಿನಿಮಾ ಶೂಟಿಂಗ್ ಆರಂಭವಾಗಲಿದೆ. ತರುಣ್ ಶ್ರೀಧರ್ ನಿರ್ದೇಶನದ ಒಡೆಯ ಸಿನಿಮಾವನ್ನು ಸಂದೇಶ್ ನಾಗರಾಜ್ ನಿರ್ಮಾಣ ಮಾಡುತ್ತಿದ್ದಾರೆ. ಇನ್ನೂ ನಾಯಕಿಯ ಪೈನಲ್ ಆಗಿಲ್ಲ.
ದರ್ಶನ್ ಪ್ರಧಾನ ಪಾತ್ರದಲ್ಲಿ ಅಭಿನಯಿಸುತ್ತಿರುವ ಈ ಸಿನಿಮಾದಲ್ಲಿ ಎಸ್. ನಾರಾಯಣ್ ಪುತ್ರ ದರ್ಶನ್ ಸಹೋದರನಾಗಿ ಅಭಿನಯಿಸುತ್ತಿದ್ದಾರೆ. ಒಡೆಯ ಸಿನಿಮಾಗೆ ವಿ. ಹರಿಕೃಷ್ಣ ಸಂಗೀತ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT