ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ಅಪಘಾತದಲ್ಲಿ ನಟ ಹರಿಕೃಷ್ಣ ಸಾವು, ಟ್ವಿಟರ್ ನಲ್ಲಿ ಭಾವನಾತ್ಮಕ ಕಂಬನಿ ಮಿಡಿದ ನಾಗಾರ್ಜುನ

ಅಪಘಾತದಲ್ಲಿ ಸಾವನ್ನಪ್ಪಿದ ಹರಿಕೃಷ್ಣ ಅವರಿಗೆ ತೆಲುಗು ಚಿತ್ರರಂಗದ ಖ್ಯಾತ ನಟ ಅಕ್ಕಿನೇನಿ ನಾಗಾರ್ಜುನ ಕಂಬನಿ ಮಿಡಿದಿದ್ದು, ಟ್ವಿಟರ್ ನಲ್ಲಿ ಭಾವುಕ ಸಂದೇಶ ರವಾನಿಸಿದ್ದಾರೆ.

ಹೈದರಾಬಾದ್: ಅಪಘಾತದಲ್ಲಿ ಸಾವನ್ನಪ್ಪಿದ ಹರಿಕೃಷ್ಣ ಅವರಿಗೆ ತೆಲುಗು ಚಿತ್ರರಂಗದ ಖ್ಯಾತ ನಟ ಅಕ್ಕಿನೇನಿ ನಾಗಾರ್ಜುನ ಕಂಬನಿ ಮಿಡಿದಿದ್ದು, ಟ್ವಿಟರ್ ನಲ್ಲಿ ಭಾವುಕ ಸಂದೇಶ ರವಾನಿಸಿದ್ದಾರೆ.
ತೆಲಂಗಾಣದ ನಲ್ಗೊಂಡ ಜಿಲ್ಲೆಯ ಅನ್ನೇಪರ್ತಿ ಬಳಿ ನಂದಮೂರಿ ಹರಿಕೃಷ್ಣ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು. ಅಪಘಾತದಲ್ಲಿ ಹರಿಕೃಷ್ಣ ಅವರು ಭೀಕರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಕಾಮಿನೇನಿ ಆಸ್ಪತ್ರೆಯಲ್ಲಿ ಹರಿಕೃಷ್ಣ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ. ಹರಿಕೃಷ್ಣ ಅವರು ಅಭಿಮಾನಿಯ ಪುತ್ರನ ಮದುವೆಗೆ ತೆರಳುತ್ತಿದ್ದರು. ಬೆಳಗ್ಗೆ 4.30ರ ಸುಮಾರಿನಲ್ಲಿ ಹೈದರಾಬಾದ್ ನಿಂದ ಆಂಧ್ರಪ್ರದೇಶದ ನಲ್ಲೂರಿಗೆ ತಾವೇ ಕಾರು ಚಾಲನೆ ಮಾಡಿಕೊಂಡು ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.
ಇನ್ನು ಹರಿಕೃಷ್ಣ ಅವರ ಸಾವಿಗೆ ತೆಲುಗು ಚಿತ್ರರಂಗ ಕಂಬಿನಿ ಮಿಡಿದಿದ್ದು, ಪ್ರಮುಖವಾಗಿ ಹರಿಕೃಷ್ಣ ಅವರನ್ನು ಸ್ವಂತ ಅಣ್ಣ ಎಂಬಂತೆ ಭಾವಿಸಿದ್ದ ನಟ ಅಕ್ಕಿನ್ನೇನಿ ನಾಗಾರ್ಜುನ ಅವರ ಸಾವಿನಿಂದ ಆಘಾತಕ್ಕೊಳಗಾಗಿದ್ದಾರೆ. ಈ ಬಗ್ಗೆ ಟ್ವಿಟರ್ ನಲ್ಲಿ ಭಾವುಕರಾಗಿ ಬರೆದುಕೊಂಡಿರುವ ನಾಗಾರ್ಜುನ, ಕೆಲ ವಾರಗಳ  ಹಿಂದಷ್ಟೇ ಅವರೊಂದಿಗೆ ನಾನು ಮಾತನಾಡಿದ್ದ. ನಿನ್ನನ್ನು ನೋಡಿ ತುಂಬಾ ದಿನಗಳಾಯ್ತು ತಮ್ಮ. ನಿನ್ನ ಭೇಟಿ ಮಾಡಬೇಕು ಎಂದೆನಿಸುತ್ತಿದೆ ಎಂದು ಹೇಳಿದ್ದರು. ಆದರೆ ನನ್ನ ಎಂದೂ ಭೇಟಿಲಾಗದಷ್ಟು ದೂರಕ್ಕೆ ಹೋಗಿದ್ದಾರೆ. ಐ ಮಿಸ್ ಯೂ ಅಣ್ಣಾ ಎಂದು ನಾಗಾರ್ಜುನ ಟ್ವೀಟ್ ಮಾಡಿದ್ದಾರೆ.
ನಾಗ್ ಜನ್ಮದಿನಕ್ಕೆ ಬೇಡವಾದ ಉಡುಗೊರೆ
ಇನ್ನು ವಿಪರ್ಯಾಸವೆಂದರೆ ಇಂದೇ ಅಕ್ಕಿನೇನಿ ನಾಗಾರ್ಜುನ್ ಅವರ ಜನ್ಮ ದಿನವಾಗಿದ್ದು, ಅವರು ಅಣ್ಣ ಎಂದು ಭಾವಿಸಿದ್ದ ಹರಿಕೃಷ್ಣ ಅವರ ಸಾವು ನಾಗಾರ್ಜುನ ಅವರಿಗೆ ಅತೀವ ದುಃಖಕ್ಕೆ ಕಾರಣವಾಗಿದೆ. ಹರಿಕೃಷ್ಣ ಮತ್ತು ನಾಗಾರ್ಜುನ ಎಷ್ಟು ಆಪ್ತರೆಂದರೆ ಅವರಿಬ್ಬರು ಸ್ವಂತ ಅಣ್ಣ ತಮ್ಮಂದಿರು ಎನ್ನಲಾಗುತ್ತಿತ್ತು. ಅವರ ಸ್ನೇಹ ಪ್ರೀತಿಗೆ ಸಾಕ್ಷಿಯಾಗಿ ಇವರಿಬ್ಬರೂ 1999ರಲ್ಲಿ ಸೀತಾರಾಮರಾಜು ಎಂಬ ಚಿತ್ರದಲ್ಲಿ ಅಣ್ಣ ತಮ್ಮಂದಿರಾಗಿ ನಟಿಸಿದ್ದರು. ಈ ಚಿತ್ರ ದೊಡ್ಡ ಮಟ್ಟದ ಯಶಸ್ಸು ಕೂಡ ಸಾಧಿಸಿತ್ತು. ಇದೇ ಚಿತ್ರ ನಟ ರವಿತೇಜ ಅವರಿಗೂ ದೊಡ್ಡ ಹೆಸರು ತಂದುಕೊಟ್ಟಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT