ವಿಲ್ಲನ್ ಸಿನಿಮಾ ಪೋಸ್ಟರ್ 
ಸಿನಿಮಾ ಸುದ್ದಿ

ವಿಲ್ಲನ್ ಸಿನಿಮಾಗೆ 'ಎ' ಸರ್ಟಿಪಿಕೇಟ್: ರಕ್ತಪಾತವಿಲ್ಲದಿದ್ದರೆ ಅದನ್ನು ಫೈಟಿಂಗ್ ಎನ್ನುವುದಿಲ್ಲ- ಪ್ರೇಮ್

ಸ್ಯಾಂಡಲ್‍ವುಡ್ ನ ಬಹುನಿರೀಕ್ಷಿತ ಮಲ್ಟಿಸ್ಟಾರ್ ಅಭಿನಯದ `ದಿ ವಿಲನ್’ ಸಿನಿಮಾಗೆ ಸೆನ್ಸಾರ್ ಮಂಡಳಿಯಿಂದ ಸಂಕಷ್ಟ ಎದುರಾಗಿದೆ...

ಬೆಂಗಳೂರು: ಸ್ಯಾಂಡಲ್‍ವುಡ್ ನ ಬಹುನಿರೀಕ್ಷಿತ ಮಲ್ಟಿಸ್ಟಾರ್ ಅಭಿನಯದ `ದಿ ವಿಲನ್’ ಸಿನಿಮಾಗೆ ಸೆನ್ಸಾರ್ ಮಂಡಳಿಯಿಂದ ಸಂಕಷ್ಟ ಎದುರಾಗಿದೆ.
ಸೆನ್ಸಾರ್ ಮಂಡಳಿ `ದಿ ವಿಲನ್’ ಸಿನಿಮಾ ವೀಕ್ಷಿಸಿದ ಬಳಿಕ `ಎ’ ಸರ್ಟಿಫಿಕೇಟ್ ಕೊಡಲು ಮುಂದಾಗಿದೆ. ಆದರೆ `ಎ’ ಸರ್ಟಿಫಿಕೇಟ್ ಬಗ್ಗೆ ನಿರ್ದೇಶಕ ಪ್ರೇಮ್ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಮಲ್ಟಿಪ್ಲೆಕ್ಸ್ ನಲ್ಲಿ `ಎ’ ಸರ್ಟಿಫಿಕೇಟ್ ನೀಡುವುದರಿಂದ ಹೆಚ್ಚಿನ ಎಫೆಕ್ಟ್ ಆಗುತ್ತದೆ ಎಂದು ಚಿತ್ರತಂಡದ ಜೊತೆ ಚರ್ಚೆ ನಡೆಸಿದ್ದಾರೆ. ಬಳಿಕ ಸೆನ್ಸಾರ್ ಮಂಡಳಿ `ಯು’ ಸರ್ಟಿಫಿಕೇಟ್ ನೀಡಲು ಮುಂದಾಗಿದ್ದು, `ಯು’ ಸರ್ಟಿಫಿಕೇಟ್ ಬೇಕಾದರೆ ಸಿನಿಮಾದಲ್ಲಿಯ 10 ನಿಮಿಷದ ದೃಶ್ಯವನ್ನು ಕತ್ತರಿಸುವುದಕ್ಕೆ ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ. ಆದರೆ ಇಷ್ಟು ಪ್ರಮಾಣದಲ್ಲಿ ಸಿನಿಮಾ ದೃಶ್ಯಕ್ಕೆ ಕತ್ತರಿ ಹಾಕಿದರೇ ಸಿನಿಮಾ ಮೌಲ್ಯ ಕಡಿಮೆಯಾಗುತ್ತದೆ ಎಂದು ಪ್ರೇಮ್ ಬೇಸರ ವ್ಯಕ್ತ ಪಡಿಸಿದ್ದಾರೆ.
ನಮ್ಮ ಸಿನಿಮಾದಲ್ಲಿ ಯಾವುದೇ ಅಶ್ಲೀಲತೆಯಿಲ್ಲ, ಆದರೆ ರಕ್ತಪಾತದಂತ 2 ಫೈಟ್ ಗಳಿಗೆವೆ, ರಕ್ತ ಪಾತವಿಲ್ಲದಿದ್ದರೇ ಅದನ್ನು ಫೈಟ್ ಎನ್ನಲಾಗದು.  ಭಾರತ ಮತ್ತು ಇಂಗ್ಲೆಂಡ್ ನಡುವಿನ ಕೆಲವು ಡೈಲಾಗ್ ಗಳಿದ್ದು, ಸೆನ್ಸಾರ್ ಬೋರ್ಡ್ ಅದಕ್ಕೂ ಆಕ್ಷೇಪ ವ್ಯಕ್ತ ಪಡಿಸಿದೆ. ಆದರೆ ಆ ದೃಶ್ಯಗಳನ್ನು ಕತ್ತರಿಸಲು ಸಾಧ್ಯವಿಲ್ಲ, ಅವೇ ಸಿನಿಮಾದ ಪ್ರಮುಕ ಭಾಗವಾಗಿದೆ. ಎಂದು ಹೇಳಿದ್ದಾರೆ,
ವಿಲ್ಲನ್  ಸಿನಿಮಾ  ಆರು ವರ್ಷ ಮೇಲ್ಪಟ್ಟ ಮಕ್ಕಳೊಂದಿಗೆ ಕುಟುಂಬಸ್ಠರೆಲ್ಲರೂ ಕುಳಿತು ನೋಡಬೇಕೆಂಬುದು ನನ್ನ ಆಸೆ. ಆದರೆ ಸೆನ್ಸಾರ್ ಮಂಡಳಿ ಎ ಪ್ರಮಾಣ ಪತ್ರಿ ನೀಡಿದರೇ ಅದರಿಂದ ತುಂಬಾ ಬೇಸರವಾಗುತ್ತದೆ. ಹೀಗಾಗಿ ಈ ಬಗ್ಗೆ ನಾನು ಚರ್ಚಿಸುತ್ತಿದ್ದೇನೆ. ಶೀಘ್ರವೇ ಬಿಡುಗಡೆ ದಿನಾಂಕ ತಿಳಿಸುತ್ತೇನೆ ಎಂದು ಪ್ರೇಮ್ ಹೇಳಿದ್ದಾರೆ. 
ಗಣೇಶ ಹಬ್ಬಕ್ಕೆ ಬಿಡುಗಡೆಯಾಗುತ್ತದೆ ಎಂದು ಹೇಳಲಾಗುತ್ತಿತ್ತು, ಆದರ ಸಾದ್ಯತೆ ಕಡಿಮೆಯಿದೆ . ಸಿನಿಮಾದ ಮೂಲಕ ಪ್ರತಿಯನ್ನು ಸೆನ್ಸಾರ್ ಬೋರ್ಡ್ ಗೆ ನೀಡಲಾಗಿದೆ, ಆದರೆ ಇನ್ನೂ ಕೆಲವು ಕಂಪ್ಯೂಟರ್ ಗ್ರಾಫಿಕ್ಸ್ ಕೆಲಸ ಬಾಕಿಯಿದೆ ಎಂದು ಹೇಳಿದ್ದಾರೆ.
ಅಭಿಮಾನಿಗಳನ್ನು ನಾನು ಹೆಚ್ಚಿನ ಸಮಯ ಕಾಯಲು ಬಿಡುವುದಿಲ್ಲ ಎಂದು ಹೇಳಿರುವ ಪ್ರೇಮ್ ರಿಲೀಸ್ ಗೂ 15 ದಿನ ಮೊದಲೇ ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್ ಗೆ ಅವಕಾಶ ನೀಲಾಗುವುದು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

NICE ವಿವಾದ: ದೇವೇಗೌಡರು ಬೇಕಿದ್ರೆ ಕೋರ್ಟ್‌ಗೆ ಹೋಗಲಿ, ಉಪವಾಸ ಮಾಡಲಿ; ಮಾಜಿ ಪ್ರಧಾನಿ ಪತ್ರಕ್ಕೆ CM ಡಿಕೆಶಿ ತಿರುಗೇಟು

ಪಠ್ಯಪುಸ್ತಕದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ಪ್ರಧಾನಿ ಮೋದಿ ಹೆಸರು: ನೆಟ್ಟಿಗರಿಂದ ಟೀಕೆ

ಮಹಾ ಅಷ್ಟಮಿಯಂದು ಮದ್ಯದಂಗಡಿ ಮತ್ತು ಬಾರ್‌ಗಳು ಬಂದ್; ದುರ್ಗಾ ಪೂಜೆ ವೇಳೆ ಡಿಜೆ ಸಂಗೀತ ನಿಷೇಧ!

ಸಾಕು ಮಾಡಿ: ಸೇವಾಶ್ರಯ ಪ್ರಕರಣದಲ್ಲಿ ಕೊನೆಗೂ ಅಭಿಷೇಕ್ ಬ್ಯಾನರ್ಜಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್, ಬಂಧನಕ್ಕೆ ತಡೆ!

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌; ಶೇ. 7.5 ರಷ್ಟು ಮೀಸಲಾತಿ – ಕರಡು ನಿಯಮ ಪ್ರಕಟ