ಪ್ರಿಯಾ ಪ್ರಕಾಶ್ ವಾರಿಯರ್, 
ಸಿನಿಮಾ ಸುದ್ದಿ

'ಕಣ್ ಸನ್ನೆ ಹುಡುಗಿ'ಗೆ ಬಿಗ್ ರಿಲೀಫ್! ವಿಂಕ್ ವೀಡಿಯೋ ವಿರುದ್ಧ ಪ್ರಕರಣ ವಜಾ

ಕಣ್ ಸನ್ನೆ ಮೆಊಲಕ ದೇಶದ ಯುವಜನರಲ್ಲಿ ಸಂಚಲನ ಮುಡಿಸಿದ್ದ ಕೇರಳದ ಯುವ ನಟಿ ಪ್ರಿಯಾ ಪ್ರಕಾಶ್ ವಾರಿಯರ್ ಗೆ ಸುಪ್ರೀಂ ಕೋರ್ಟ್ ನಿಂದ ದೊಡ್ಡ ಪರಿಹಾರ ಸಿಕ್ಕಿದೆ.

ನವದೆಹಲಿ: ಕಣ್ ಸನ್ನೆ ಮೂಲಕ ದೇಶದ ಯುವಜನರಲ್ಲಿ ಸಂಚಲನ ಮುಡಿಸಿದ್ದ ಕೇರಳದ ಯುವ ನಟಿ ಪ್ರಿಯಾ ಪ್ರಕಾಶ್ ವಾರಿಯರ್ ಗೆ ಸುಪ್ರೀಂ ಕೋರ್ಟ್ ನಿಂದ ದೊಡ್ಡ ರಿಲೀಫ್ ಸಿಕ್ಕಿದೆ.
ಓರು ಅದರ್ ಲವ್ ಚಿತ್ರದಲ್ಲಿ ನಟಿಸಿರುವ ಮಲಯಾಳಂ ನಟಿ ಪ್ರಿಯಾ ಆ ಚಿತ್ರದ ಹಾಡೊಂದರಲ್ಲಿ ಕಣ್ಣು ಮಿಟುಕಿಸುವ ದೃಶ್ಯದಲ್ಲಿ ಕಾಣಿಸಿಕೊಂಡಿದ್ದು ಈ ದೃಶ್ಯ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿತ್ತು. 
ಈ "ಕಣ್ ಸನ್ನೆ" ಕುರಿತಂತೆ ತೆಲಂಗಾಣ ಪೋಲೀಸರಲ್ಲಿ ದೂರು ದಾಖಲಾಗಿದ್ದು ಸುಪ್ರೀಂ ಕೋರ್ಟ್ ಇದರ ವಿಚಾರಣೆ ನಡೆಸಿದೆ. ಇದೀಗ ನ್ಯಾಯಾಲಯ ನಟಿ ಪ್ರಿಯಾ ವಾರಿಯರ್ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ವಜಾ ಗೊಳಿಸಿದ್ದಲ್ಲದೆ ದೂರು ದಾಖಲಿಸಿದವರನ್ನೂ ತರಾಟೆಗೆ ತೆಗೆದುಕೊಂಡಿದೆ.
ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್ ಮತ್ತು ಡಿ ವೈ ಚಂದ್ರಚೂಡ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು ಪ್ರಕರಣದ ವಿಚಾರಣೆ ನಡೆಸಿ ತೆಲಂಗಾಣ ಸರ್ಕಾರ ಹಾಕಿದ್ದ ಎಫ್ಐಆರ್ ರದ್ದು ಗೊಳಿಸಿರುವುದಲ್ಲದೆ ವೀಡಿಯೊಗೆ ಸಂಬಂಧಿಸಿದಂತೆ ನಟಿ ಮತ್ತು ನಿರ್ದೇಶಕರ ವಿರುದ್ಧ ಮುಂದಿನ ದಿನಗಳಲ್ಲಿ ಯಾವುದೇ ಎಫ್ಐಆರ್ ನೋಂದಾಯಿಸದಂತೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿದೆ.
ಕೇರಳದ ತ್ರಿಶ್ಶೂರ್ ಜಿಲ್ಲೆಯಲ್ಲಿ  ಬಿ.ಕಾಂ  ಪದವಿ ವ್ಯಾಸಂಗ ಮಾಡುತ್ತಿರುವ ಪ್ರಿಯಾ ಓರು ಅದರ್ ಲವ್ ಚಿತ್ರದ "ಮಾಣಿಕ್ಯ ಮಲಯಾಯ ಪೂವಿ" ಹಾಡಿಗೆ ಅಭಿನಯಿಸಿದ್ದರು.ಇದರಲ್ಲಿ ಅವರು ಮಾಡಿರುವ ಕಣ್ ಸನ್ನೆಯು "ಆಕ್ರಮಣಕಾರಿ" ಮತ್ತು "ಒಂದು ನಿರ್ದಿಷ್ಟ ಸಮುದಾಯದ ಧಾರ್ಮಿಕ ಮನೋಭಾವವನ್ನು ನೋಯಿಸುವಂತಿದೆ" ಎಂದು ಆರೋಪಿಸಿ ತೆಲಂಗಾಣ ಸರ್ಕಾರ ದೂರು ದಾಖಲಿಸಿದ್ದಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

SCROLL FOR NEXT