ಸಿನಿಮಾ ಸುದ್ದಿ

ಪ್ರಸಿದ್ದ ಕನ್ನಡ ಚಿತ್ರ ನಿರ್ಮಾಪಕ ನಾಗರಾಜ ಶೆಟ್ಟಿ ಇನ್ನಿಲ್ಲ

Raghavendra Adiga
ಬೆಂಗಳೂರು: ಸ್ಯಾಂಡಲ್ ವುಡ್ ಖ್ಯಾತ ನಿರ್ಮಾಪಕ ಎಸ್ ನಾಗರಾಜ ಶೆಟ್ಟಿ ಭಾನುವಾರ ವಿಧಿವಶರಾಗಿದ್ದಾರೆ.
ಚಿಕ್ಕಮಗಳೂರು ಮೂಲದವರಾದ ನಾಗರಾಜ ಶೆಟ್ಟಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷರಾಗಿದ್ದರು.
ಪರಾಜಿಯ, ನಾಗರಹೊಳೆ, ನೂರುಜನ್ಮ, ಕೂಡಿಬಾಳಿದರೆ ಸ್ವರ್ಗ ಸುಖ ಹಾಗೂ ಶ್ರಾವಣ ಸಂಜೆ ಚಿತ್ರಗಳನ್ನು ನಿರ್ಮಿಸಿದ್ದ ಇವರು ಚಿತ್ರರಂಗದಲ್ಲಿ ನಿರ್ಮಾಪಕ, ಪ್ರದರ್ಶಕ ಹಾಗೂ ವಿತರಕರಾಗಿ ಸೇವೆ ಸಲ್ಲಿಸಿದ್ದರು.
ಮೃತರಿಗೆ ಏಳು ಜನ ಮಕ್ಕಳಿದ್ದಾರೆ. ಕನ್ನಡ ಚಿತ್ರರಂಗ ನಾಗರಾಜ ಶೆಟ್ಟಿ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದೆ.
SCROLL FOR NEXT