ನಟ ಅನಿರುದ್ಧ್ 
ಸಿನಿಮಾ ಸುದ್ದಿ

ವಿಷ್ಣು ಹೆಸರಲ್ಲಿ ಫಿಲಂ ಇನ್ಸ್ಟಿಟ್ಯೂಟ್ ಏಕಿಲ್ಲ: ಸರ್ಕಾರದ ವಿರುದ್ಧ ಅನಿರುದ್ಧ್ ಮತ್ತೆ ಗರಂ

ನಟ ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ಅವರ ಅಳಿಯ ಹಾಗೂ ನಟ ಅನಿರುದ್ಧ ಮತ್ತೆ ಸರ್ಕಾರದ ವಿರುದ್ಧ ಗುಡುಗಿದ್ದಾರೆ...

ಬೆಂಗಳೂರು: ನಟ ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ಅವರ ಅಳಿಯ ಹಾಗೂ ನಟ ಅನಿರುದ್ಧ ಮತ್ತೆ ಸರ್ಕಾರದ ವಿರುದ್ಧ ಗುಡುಗಿದ್ದಾರೆ. 
ವಿಷ್ಣು ಸ್ಮಾರಕ ವಿಚಾರದಲ್ಲಿ ಸರ್ಕಾರ ತಾರತಮ್ಯ ಮಾಡುತ್ತಿದೆ. ಜೊತೆಗೆ ಹಿರಿಯ ನಟರಾದ ರಾಜ್ ಕುಮಾರ್, ಅಂಬರೀಷ್ ಹೆಸರಿನಲ್ಲಿ ಫಿಲ್ಮ್ ಇನ್ಸ್ಟಿಟ್ಯೂಟ್ ಮಾಡಲಾಗುವುದು ಎಂದು ಹೇಳುವ ಸರ್ಕಾರ, ವಿಷ್ಣುವರ್ಧನ್ ಹೆಸರಿನಲ್ಲಿ ಏಕೆ ಫಿಲ್ಮ್ ಇನ್ಸ್'ಟಿಟ್ಯೂಟ್ ಮಾಡುತ್ತೇನೆಂದು ಹೇಳುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. 
ಮುಖ್ಯಮಂತ್ರಿ ಕುಮಾರಸ್ವಾಮಿಯವರ ಬಗ್ಗೆ ನನಗ್ಯಾವ ಕೋಪವೂ ಇಲ್ಲ. ಅವರ ಮೇಲೆ ಭರವಸೆಯಿದೆ. ಹಾಗೆಯೇ ನನ್ನ ಹೇಳಿಕೆ ವೈಯಕ್ತಕವೂ ಆಗಿರಲಿಲ್ಲ. ಆದರೆ, ವಿಷ್ಣು ಸ್ಮಾರಕ ವಿಚಾರವನ್ನು ಅವರು ಗಂಭೀರವಾಗಿ ಪರಿಗಣಿಸಿಲ್ಲ. ಅಂಬರೀಷ್ ಅವರ ಶ್ರದ್ಧಾಂಜಲಿ ಸಭೆಯಲ್ಲೂ ಅವರು ವಿಷ್ಣು ಸ್ಮಾರಕ ವಿಚಾರವನ್ನು ಪ್ರಸ್ತಾಪಿಸಿಲ್ಲ. ಅದೇ ನನಗೆ ನೋವು ತಂದಿದೆ ಎಂದು ತಿಳಿಸಿದರು. 
ಈ ನಡುವೆ ಮೈಸೂರಿನಲ್ಲಿ ಚಿತ್ರ ನಗರಿ ನಿರ್ಮಿಸುವ ಸಂಬಂಧ ವಿಷ್ಣುವರ್ಧನ್ ಅವರ ಅಳಿಯ ಅನಿರುದ್ಧ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಕುಮಾರಸ್ವಾಮಿಯವರು ನಿರಾಕರಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT